ಭಾರತದ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಬಿಲ್ಗೇಟ್ಸ್ ಬಹುಪರಾಕ್
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಜೊತೆ ಬಿಲ್ಗೇಟ್ಸ್ ಮಾತುಕತೆ
Team Udayavani, Mar 2, 2023, 12:32 PM IST
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿರುವ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಭಾರತ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಿದ ಬಗೆಯನ್ನು ಹಾಡಿ ಹೊಗಳಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿದ ಬಿಲ್ಗೇಟ್ಸ್, ಇದೇ ವೇಳೆ ಆರೋಗ್ಯ ಸಚಿವಾಲಯದಲ್ಲಿರುವ ʻವಾರ್ ರೂಂʼಗೂ ಭೇಟಿ ನೀಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಕೋವಿಡ್ ಸಂದರ್ಭದಲ್ಲಿ ದೇಶದ ಜನರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನೂತನ ʻವಾರ್ ರೂಂʼನ್ನು ತೆರೆದಿತ್ತು. ಅದಕ್ಕೆ ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ವೀಕ್ಷಣಾಲಯ ಎಂಬ ಹೆಸರನ್ನೂ ನೀಡಿತ್ತು.
ಈ ಉನ್ನತ ಮಟ್ಟದ ಭೇಟಿ ವೇಳೆ ಬಿಲ್ಗೇಟ್ಸ್ ಭಾರತದ ಕೋವಿಡ್ ನಿರ್ವಹಣೆ , ವ್ಯಾಕ್ಸಿನೇಷನ್ ಕಾರ್ಯಕ್ರಮ, ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಮೊದಲಾದ ಆರೋಗ್ಯ ಕಾರ್ಯಗಳಿಗೆ ಡಿಜಿಟಲ್ ಉಪಕ್ರಮಗಳ ಅಳವಡಿಕೆ ಕುರಿತು ಸಂತಸ ವವ್ಯಕ್ತಪಡಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.
ಇದೇ ಸಂದರ್ಭದಲ್ಲಿ ಉಭಯರ ಮಧ್ಯೆ ಜಿ-20 ಯಲ್ಲಿ ಭಾರತದ ಆರೋಗ್ಯ ಆದ್ಯತೆಗಳ ಬಗ್ಗೆ, ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ ಮತ್ತು ಇ-ಸಂಜೀವಿನಿ ಕಾರ್ಯಕ್ರಮಗಳ ಬಗ್ಗೆ ಬಿಲ್ಗೇಟ್ಸ್ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
Wonderful meeting with @BillGates.
He appreciated India’s COVID-19 Management, Vaccination Drive & Digital Health initiatives like Ayushman Bharat Digital Mission.
We discussed about India’s G20 health priorities, PM Bhartiya Janaushadhi Pariyojana and eSanjeevani. pic.twitter.com/hIB8zDxeVS
— Dr Mansukh Mandaviya (@mansukhmandviya) March 1, 2023
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, ʻಬಿಲ್ಗೇಟ್ಸ್ ಅವರ ಜೊತೆಗಿನ ಭೇಟಿ ಅದ್ಭುತವಾಗಿತ್ತು. ಅವರು ಭಾರತದ ಕೋವಿಡ್ ನಿರ್ವಹಣೆ, ಆಯುಷ್ಮಾನ್ ಭಾರತ್ ಮೊದಲಾದ ಲಸಿಕಾ ಕಾರ್ಯಕ್ರಮಗಳನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ಬಾರತದ ಜಿ-20 ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ ಮತ್ತು ಇ-ಸಂಜೀವಿನಿ ಕಾರ್ಯಕ್ರಮಗಳ ಬಗ್ಗೆ ಮಾತುಕತೆ ನಡೆದಿದೆʼ ಎಂದು ಬರೆದುಕೊಂಡಿದ್ಧಾರೆ.
ಇದನ್ನೂ ಓದಿ: ಶಾರುಖ್ ಪತ್ನಿ ಗೌರಿ ಖಾನ್ ವಿರುದ್ಧ ಎಫ್ಐಆರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ