ಉದ್ದೇಶಿತ ಪ್ರದೇಶದ ಸರ್ವೇ ಕಾರ್ಯಕ್ಕೆ ಚಾಲನೆ :  ಉರುಂಬಿಗೆ ಜೈವಿಕ ಸೂಕ್ಷ್ಮಪ್ರದೇಶ ಪಟ್ಟ


Team Udayavani, Feb 25, 2021, 5:40 AM IST

ಉದ್ದೇಶಿತ ಪ್ರದೇಶದ ಸರ್ವೇ ಕಾರ್ಯಕ್ಕೆ ಚಾಲನೆ :  ಉರುಂಬಿಗೆ ಜೈವಿಕ ಸೂಕ್ಷ್ಮಪ್ರದೇಶ ಪಟ್ಟ

ಕಡಬ: ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಕುಮಾರಧಾರಾನದಿ ತೀರದ ಉರುಂಬಿ ಪ್ರದೇಶಕ್ಕೆ ಜೈವಿಕ ಸೂಕ್ಷ್ಮ ಪ್ರದೇಶ ಎನ್ನುವ ಪಟ್ಟ ನೀಡುವ ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಕಾರ್ಯಕ್ಕೆ ಚಾಲನೆ ದೊರೆತಿದೆ. ಉರುಂಬಿ ಪ್ರದೇಶದಲ್ಲಿ ತಾಲೂಕು ಜೀವ ವೈವಿಧ್ಯ ಸಮಿತಿ ಸರ್ವೇ ನಡೆಸಿದೆ.

ಕಡಬ ತಾಲೂಕಿನ ಉರುಂಬಿ ಮಾತ್ರವಲ್ಲದೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಆದಿ ನಾರಾಯಣ ಸ್ವಾಮಿ ಬೆಟ್ಟ, ನೆಲಮಂಗಲ ತಾಲೂಕಿನ ಮಹಿಮಾರಂಗ ಬೆಟ್ಟ, ಕೋಲಾರದ ಅಂತರಗಂಗೆ ಬೆಟ್ಟವನ್ನು ಕೂಡ ಜೀವ ವೈವಿಧ್ಯ ತಾಣಗಳು ಎಂದು ಘೋಷಿಸಲು ಸರಕಾರ ಮುಂದಾಗಿದೆ.

ಜೈವಿಕವಾಗಿ ಶ್ರೀಮಂತ
ಜೈವಿಕ ಸೂಕ್ಷ್ಮ ಪ್ರದೇಶವೆಂದರೆ ಭೂಮಿಯಲ್ಲಿ ಜೈವಿಕವಾಗಿ ಶ್ರೀಮಂತ ಮತ್ತು ಹೆಚ್ಚು ಅಳಿವಿನಂಚಿನಲ್ಲಿರುವ ಪರಿಸರ ಪ್ರದೇಶಗಳು ಎಂದು ಪರಿಸರ ತಜ್ಞರು ವಿಶ್ಲೇಷಿಸುತ್ತಾರೆ. ಅಂತಹ ಪ್ರದೇಶಗಳಲ್ಲಿ ನಡೆಯುವ ಪರಿಸರ ವಿರೋಧಿ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗುತ್ತದೆ.

ತಾಲೂಕು ಜೀವ ವೈವಿಧ್ಯ ಸಮಿತಿಯಿಂದ ಪರಿಶೀಲನೆ
ಕಡಬ ತಾಲೂಕು ಜೀವ ವೈವಿಧ್ಯ ಸಮಿತಿಯ ಅಧ್ಯಕ್ಷೆ, ಕಡಬ ತಾಲೂಕು ಪಂಚಾಯತ್‌ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಕುಮಾರಧಾರಾ ಪರಿಸರ ಸಂರಕ್ಷಣ ಸಮಿತಿಯ ಅಧ್ಯಕ್ಷ ಎನ್‌.ಕರುಣಾಕರ ಗೋಗಟೆ, ಪಂಜ ವಲಯ ಅರಣ್ಯಾಧಿಕಾರಿ ಮಂಜುನಾಥ್‌, ತಾ.ಪಂ.ಉಪಾಧ್ಯಕ್ಷೆ ಜಯಂತಿ ಆರ್‌. ಗೌಡ, ಸದಸ್ಯೆ ತೇಜಸ್ವಿನಿ ಗೌಡ, ಸರ್ವೇ ಇಲಾಖೆಯ ಗಿರಿ ಗೌಡ, ಕುಟ್ರಾಪ್ಪಾಡಿ ಪಿಡಿಒ ಜೆರಾಲ್ಡ್‌ ಮಸ್ಕರೇನ್ಹಸ್‌, ಪೆರಾಬೆ ಪಿಡಿಒ ಶಾಲಿನಿ, ಕುಟ್ರಾಪ್ಪಾಡಿ ಗ್ರಾ.ಪಂ. ಸದಸ್ಯರಾದ ಕಿರಣ್‌ ಗೋಗಟೆ, ಮಾಧವಿ, ಪ್ರಮುಖರಾದ ವಾಸುದೇವ ಇಡ್ಯಾಡಿ, ಗೋಪಾಲಕೃಷ್ಣ ಗೌಡ, ಎಲ್ಸಿ ಥಾಮಸ್‌ ಮತ್ತಿತರರು ಮಂಗಳವಾರ ಉರುಂಬಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜೈವಿಕ ಸೂಕ್ಷ್ಮಪ್ರದೇಶ: ಬೇಡಿಕೆ
ಉರುಂಬಿ ಪ್ರದೇಶದಲ್ಲಿ ಕುಮಾರಧಾರಾ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ ಜಲವಿದ್ಯುತ್‌ ಸ್ಥಾವರ ಪ್ರಾರಂಭಿಸಲಾಗುವುದು ಎನ್ನುವ ಸುದ್ದಿಯ ಹಿನ್ನೆಲೆಯಲ್ಲಿ ಅದನ್ನು ವಿರೋಧಿಸಿ ಕುಮಾರಧಾರಾ ಪರಿಸರ ಸಂರಕ್ಷಣ ಸಮಿತಿಯ ನೇತೃತ್ವದಲ್ಲಿ ಕುಮಾರಧಾರಾ ಉಳಿಸಿ ಎನ್ನುವ ಹೆಸರಿನಲ್ಲಿ ಕಳೆದ ಸುಮಾರು 10 ವರ್ಷಗಳ ಹಿಂದೆ ಹುಟ್ಟಿಕೊಂಡ ಹೋರಾಟವು ಉರುಂಬಿ ಪ್ರದೇಶವನ್ನು ಜೈವಿಕ ಸೂಕ್ಷ್ಮಪ್ರದೇಶವೆಂದು ಘೋಷಣೆ ಮಾಡಬೇಕೆಂಬ ಬೇಡಿಕೆಯನ್ನು ಸರಕಾರದ ಮುಂದಿಡುತ್ತಲೇ ಬಂದಿತ್ತು. ಪರಿಸರ ಅಧ್ಯಯನಕಾರರು ಆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಜೀವ ವೈವಿಧ್ಯದ ಕುರಿತು ಅಧ್ಯಯನ ನಡೆಸಿ ಉರುಂಬಿ ಜೈವಿಕ ಸೂಕ್ಷ್ಮಪ್ರದೇಶವೆನ್ನುವ ವಿಚಾರಕ್ಕೆ ಪೂರಕವಾಗಿ ವರದಿಗಳನ್ನು ಮಂಡಿಸಿದ್ದರು. ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಕಳೆದ ತಿಂಗಳು ಉರುಂಬಿ ಪ್ರದೇಶಕ್ಕೆ ಭೇಟಿ ನೀಡಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.