ಡಿ.18 ರಂದು ಸು.ರಂ.ಎಕ್ಕುಂಡಿಯವರ ಜನ್ಮ ಶತಮಾನೋತ್ಸವ; ಜಯಂತ ಕಾಯ್ಕಿಣಿಯವರಿಂದ ಉದ್ಘಾಟನೆ

ಬೆಂಗಳೂರಿನಲ್ಲಿ 'ಭಾಗವತರು' ಸಂಘಟನೆಯ ದಿನವಿಡೀ ಕಾರ್ಯಕ್ರಮ

Team Udayavani, Dec 16, 2022, 2:49 PM IST

1-wdadweqw

ಬೆಂಗಳೂರು: ಭಾಗವತರು ಸಂಘಟನೆಯು ಡಿಸೆಂಬರ್‌ 18 ರಂದು ರವಿವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಾಡಿನ ಹೆಮ್ಮೆಯ ಕವಿ ಸು.ರಂ. ಎಕ್ಕುಂಡಿಯವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ.

ದಿನವಿಡೀ ಸು.ರಂ. ಎಕ್ಕುಂಡಿಯವರ ಕಾವ್ಯಗಳ ಓದು, ಗೀತೆಗಳ ಗಾಯನ, ಅವರ ಬಗೆಗೆ ಒಂದಿಷ್ಟು ಮಾತು-ನೆನಪು, ಕೆಲವರಿಗೆ ಸಮ್ಮಾನ-ಹೀಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಅಂದು ಬೆಳಗ್ಗೆ 10 ಕ್ಕೆ ಶತಮಾನೋತ್ಸವ ಕಾರ್ಯಕ್ರಮವನ್ನು ಕವಿ ಜಯಂತ ಕಾಯ್ಕಿಣಿಯವರು ಉದ್ಘಾಟಿಸುವರು. ಈ ಸಂದರ್ಭದಲ್ಲಿ ಪುಸ್ತಕವನ್ನು ಹಿರಿಯ ಲೇಖಕಿ ಡಾ. ವಿಜಯಾ ಬಿಡುಗಡೆ ಮಾಡುವರು. ಹಿರಿಯ ಪತ್ರಕರ್ತ ಜಿ.ಎನ್‌. ಮೋಹನ್‌ ಮುಖ್ಯ ಅತಿಥಿಗಳಾಗಿರುವರು. ಅಧ್ಯಕ್ಷತೆಯನ್ನು ಕವಿ ಡಾ. ಎಚ್‌. ಎಸ್‌. ವೆಂಕಟೇಶ ಮೂರ್ತಿ ವಹಿಸುವರು.

ಉದ್ಘಾಟನೆ ಬಳಿಕ ನೀನಾಸಂ ಪ್ರತಿಷ್ಠಾನ, ಸಂಚಿ ಫೌಂಡೇಷನ್‌ ನವರಿಂದ ಎಕ್ಕುಂಡಿಯವರ ಕವಿತೆ ಮಿಥಿಲೆಯ ಗೀತ ಸಾಕ್ಷ್ಯಚಿತ್ರ ಪ್ರದರ್ಶನವಿದೆ. ಅಧ್ಯಕ್ಷತೆ ಡಾ. ಮಲ್ಲೇಪುರಂ ಜಿ. ವೆಂಕಟೇಶ್‌ ಅವರದ್ದು. ಶೂದ್ರ ಶ್ರೀನಿವಾಸ್‌, ಡಿ.ವಿ. ಪ್ರಹ್ಲಾದ್‌, ಲತಾ ಗುತ್ತಿ, ಮಧುಕರ ಎಕ್ಕುಂಡಿ ಭಾಗವಹಿಸುವರು. ಎರಡನೇ ಗೋಷ್ಠಿಯಲ್ಲಿ ದೂರದರ್ಶನ ಚಂದನದಲ್ಲಿ ಪ್ರಸಾರವಾದ ಸಂದರ್ಶನದ ಆಯ್ದ ಭಾಗವನ್ನು ಪ್ರಸಾರ ಮಾಡುವುದಲ್ಲದೇ, ಎಕ್ಕುಂಡಿಯವರ ಗೀತೆಗಳನ್ನು ಸಂಗೀತಗಾರ ಡಾ. ವಿದ್ಯಾಭೂಷಣ ಹಾಡುವರು.ವಿದ್ವಾನ್‌ ಡಾ. ಪ್ರಭಂಜನಾಚಾರ್ಯರು ಭಾಗವಹಿಸುವರು.

ಮೂರನೇ ಗೋಷ್ಠಿ ಅವರ ಸಾಕ್ಷ್ಯ ಚಿತ್ರ ಪ್ರದರ್ಶನ. ಸಿಐಐಎಲ್‌ ರೂಪಿಸಿರುವ ಸು.ರಂ. ಎಕ್ಕುಂಡಿಯವರ ಕುರಿತ ಕವಿತೆಗಳ ವಾಚನವಿದೆ. ಅಧ್ಯಕ್ಷತೆ ಕಥೆಗಾರ ಎಸ್‌. ದಿವಾಕರ್‌. ಚಲನಚಿತ್ರ ನಿರ್ದೇಶಕ ಬಿ.ಸುರೇಶ್‌, ಎಚ್‌.ಎನ್‌. ಆರತಿ, ಜಯಲಕ್ಷ್ಮೀ ಪಾಟೀಲ್‌ ಮತ್ತಿತರರು ಪಾಲ್ಗೊಳ್ಳುವರು. ಸಂಜೆ 5 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ. ಹಿರಿಯ ಪತ್ರಕರ್ತ ರವೀಂದ್ರ ಭಟ್‌ ಸಮಾರೋಪ ಭಾಷಣ ಮಾಡುವರು.

ಹಿರಿಯ ಪತ್ರಕರ್ತರಾದ ಜೋಗಿ, ಆರ್‌.ಜಿ. ಹಳ್ಳಿ ನಾಗರಾಜ್‌ ಮತ್ತಿತರರು ಭಾಗವಹಿಸುವರು. ಇದೇ ಹೊತ್ತಿನಲ್ಲಿ ಎಕ್ಕುಂಡಿಯವರ ಕುರಿತು ಪಿಎಚ್‌. ಡಿ ಅಧ್ಯಯನ ಮಾಡಿರುವ ಡಾ. ರಾಜೇಶ್ವರಿ ಪೀಟರ್‌, ಶ್ರೀನಿವಾಸ್‌ ಅವರನ್ನು ಸಮ್ಮಾನಿಸಲಾಗುತ್ತದೆ. ಸು.ರಂ. ಎಕ್ಕುಂಡಿಯವರ ಕುಟುಂಬಸ್ಥರಾದ ರಂಗನಾಥ ಎಕ್ಕುಂಡಿ, ವೇದಾ ಎಕ್ಕುಂಡಿ, ವಾದಿರಾಜ ಎಕ್ಕುಂಡಿ, ವೀಣಾ ಎಕ್ಕುಂಡಿ, ಭಾರತಿ ಎಕ್ಕುಂಡಿ, ನಾರಾಯಣ ನವರತ್ನರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಭಾಗವತರು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.