Karnataka: ಕನಿಷ್ಠ ವೇತನ ಸಿಗದೆ ಬಿಸಿಯೂಟ ಸಿಬಂದಿ ಸಂಕಷ್ಟ!

1.21 ಲಕ್ಷ ಬಿಸಿಯೂಟ ಸಿಬಂದಿ ಬದುಕು ಬೀದಿಗೆ- 6 ಸಾವಿರ ರೂ.ಗೆ ಹೆಚ್ಚಿಸುವುದಾಗಿ ಹೇಳಿದ್ದ ಕಾಂಗ್ರೆಸ್‌

Team Udayavani, Jul 10, 2023, 7:07 AM IST

bisiyoota

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ಸಿದ್ಧಪಡಿಸುವ ಅಕ್ಷರ ದಾಸೋಹ ಸಿಬಂದಿ ಕನಿಷ್ಠ ವೇತನ ಜಾರಿಯಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ರಾಜ್ಯದ ಸರಕಾರಿ ಶಾಲೆಗಳಲ್ಲಿ 1.21 ಲಕ್ಷ ಬಿಸಿಯೂಟ ತಯಾರಕ ಸಿಬಂದಿ ಇದ್ದಾರೆ. ಸರಕಾರಿ ನೌಕರರೆಂದು ಪರಿಗಣಿಸಿದರೂ ಪ್ರಸ್ತುತ ನೀಡಲಾಗುತ್ತಿರುವ 3,600ರೂ. ಮಾಸಿಕ ವೇತನದಲ್ಲಿ ಜೀವನ ನಿರ್ವಹಣೆ ಸಾಧ್ಯವಾಗದೆ ಈ ಕುಟುಂಬಗಳು ಬೀದಿಗೆ ಬಂದಿವೆ. ಅಧಿಕಾರಕ್ಕೆ ಬಂದ ಕೂಡಲೇ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸುವುದಾಗಿ ಗ್ಯಾರಂಟಿ ಕೊಟ್ಟಿದ್ದ ಕಾಂಗ್ರೆಸ್‌ ಸರಕಾರವು ಮೌನಕ್ಕೆ ಶರಣಾಗಿದೆ.

15 ಸಾವಿರ ರೂ. ಕನಿಷ್ಠ ವೇತನ
ಸರಕಾರಿ ಶಾಲೆಗಳಲ್ಲಿ 25 ಮಕ್ಕಳಿಗೆ ಒಬ್ಬರು ಮುಖ್ಯ ಅಡುಗೆ ಸಿಬಂದಿ ಇದ್ದು, ಮಾಸಿಕ ಕೇವಲ 3,700 ರೂ. ನೀಡಲಾಗುತ್ತಿದೆ. 25ಕ್ಕಿಂತ ಅಧಿಕ ಮಕ್ಕಳಿರುವ ಶಾಲೆಗಳಲ್ಲಿ ಮಕ್ಕಳ ಪ್ರಮಾಣಕ್ಕೆ ಅನುಗುಣವಾಗಿ ಕೆಲಸ ಮಾಡುವ ಅಡುಗೆ ಸಹಾಯಕರಿಗೆ 3,600 ರೂ. ಮಾಸಿಕ ವೇತನವಿದೆ. ನಿಯಮ ಪ್ರಕಾರ ರಾಜ್ಯ ಸರಕಾರದ ಕನಿಷ್ಠ ವೇತನ 15 ಸಾವಿರ ರೂ. ಇದೆ. ಇಂಡಿಯನ್‌ ಲೇಬರ್‌ ಆರ್ಗನೈಸೇಶನ್‌ (ಐಎಲ್‌ಒ) ಪ್ರಕಾರ ಒಂದು ಕುಟುಂಬದ ಜೀವನಕ್ಕೆ ತಿಂಗಳಿಗೆ ತಗಲುವ ಖರ್ಚನ್ನು ಕನಿಷ್ಠ ವೇತನ ಎಂದು ಪರಿಗಣಿಸಲಾಗುತ್ತದೆ. ಸದ್ಯ ಐಎಲ್‌ಒ 31,500 ರೂ. ಇದೆ.

ದುರ್ಘ‌ಟನೆಗೆ ಪರಿಹಾರ ಸಿಗುತ್ತಿಲ್ಲ
ಅಡುಗೆ ಮಾಡುವ ವೇಳೆ ಗ್ಯಾಸ್‌ ಸಿಲಿಂಡರ್‌, ಕುಕ್ಕರ್‌ ಸ್ಫೋಟ, ಕೈ-ಕಾಲಿಗೆ ಗಾಯದಂತಹ ದುರ್ಘ‌ಟನೆ ಸಂಭವಿಸಿದರೆ ಸಂತ್ರ ಸ್ತ ರಿಗೆ ಸರಕಾರವು 30 ಸಾವಿರ ರೂ. ಪರಿಹಾರ ಮೀಸಲಿಟ್ಟಿದೆ. ಆದರೆ ಶೇ. 95ರಷ್ಟು ಪ್ರಕರಣಗಳಲ್ಲಿ ಇದು ಸಂತ್ರಸ್ತರ ಕೈ ಸೇರುವುದೇ ಇಲ್ಲ. ಶಾಲಾ ಮುಖ್ಯೋಪಾಧ್ಯಾಯರು ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಿದರೆ ಆ ದಾಖಲೆಯ ಆಧಾರದ ಮೇಲೆ ಪರಿಹಾರ ಸಿಗುತ್ತದೆ. ಆದರೆ ಎಫ್ಐಆರ್‌ ದಾಖಲಾದರೆ ಉಂಟಾಗುವ ಕಿರಿಕಿರಿಯ ಭಯದಿಂದಾಗಿ ಎಫ್ಐಆರ್‌ ದಾಖಲಿಸುತ್ತಿಲ್ಲ.

ಬಿಸಿಯೂಟ ಸಿಬಂದಿಯ ಬೇಡಿಕೆಗಳೇನು?
– ವೇತನ 6 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು
– ನಿವೃತ್ತಿ ಹೊಂದುವವರಿಗೆ ಪರಿಹಾರ ರೂಪದಲ್ಲಿ 1 ಲಕ್ಷ ರೂ. ನೀಡಬೇಕು
– ದುರ್ಘ‌ಟನೆ ಸಂಭವಿಸಿದರೆ ಎಫ್ಐಆರ್‌ ದಾಖಲೆ ಇಲ್ಲದೆ ಅನುದಾನ ಕೊಡಬೇಕು
– ಆರೋಗ್ಯ ವಿಮೆ, ಮರಣ ಪರಿಹಾರ, ಗಾಯಗಳಾದರೆ ಆಸ್ಪತ್ರೆ ಖರ್ಚು ವೆಚ್ಚ ಸರಕಾರ ಭರಿಸಬೇಕು

ಗ್ಯಾರಂಟಿ ಭರವಸೆ ಸುಳ್ಳು
ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಸಿಯೂಟ ತಯಾರಕರ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸುವುದು 6ನೇ ಗ್ಯಾರಂಟಿಯಾಗಿದೆ ಎಂದು ಚುನಾವಣೆಗೆ ಮುನ್ನ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಭರವಸೆ ಕೊಟ್ಟಿದ್ದರು. ಈಗ ಈ ಭರವಸೆ ಸುಳ್ಳಾಗಿದೆ ಎಂದು ಬಿಸಿಯೂಟ ತಯಾರಕ ಸಿಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಅನಂತರ ಕಾಂಗ್ರೆಸ್‌ ಸರಕಾರ ಬಿಸಿಯೂಟ ತಯಾರಕರನ್ನು ಅವಗಣಿಸಿದೆ. ದುಡಿಯುವ ಮಹಿಳೆಯರನ್ನು ಸುಳ್ಳು ಹೇಳಿ ವಂಚಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಾಠ ಕಲಿಸಬೇಕಾಗುತ್ತದೆ.
– ಅವರಗೆರೆ ಚಂದ್ರು, ಪ್ರಧಾನ ಕಾರ್ಯದರ್ಶಿ, ಬಿಸಿಯೂಟ ತಯಾರಕರ ಒಕ್ಕೂ ಟದ ರಾಜ್ಯ ಸಮಿತಿ

ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.