ಬಿಜೆಪಿ, ಕಾಂಗ್ರೆಸ್ ಒಪ್ಪಂದ ಮಾಡಿಕೊಂಡು ಸ್ಪರ್ಧೆಗಿಳಿದಿವೆ: ಪಕ್ಷೇತರ ಅಭ್ಯರ್ಥಿ ಲೋಣಿ

ಅನಿವಾರ್ಯವಾಗಿ ರಾಜಕೀಯ ಅಸ್ತಿತ್ವ ಹಾಗೂ ಸ್ವಾಭಿಮಾನಕ್ಕಾಗಿ ಸ್ಪರ್ಧೆ ಮಾಡಿದ್ದೇನೆ

Team Udayavani, Nov 27, 2021, 2:08 PM IST

1-ll

ವಿಜಯಪುರ : ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಮಾಡಿಕೊಂಡು ಸ್ಪರ್ಧೆಗೆ ಇಳಿದಿದ್ದು, ಗ್ರಾಪಂ ಸದಸ್ಯರ ಹಕ್ಕುಗಳ ರಕ್ಷಣೆಗಾಗಿ ಸ್ಪರ್ಧೆ ಮಾಡಿದ್ದೇನ, ಸೋಲು, ಗೆಲುವು ಮತದಾರರ ತೀರ್ಪಿಗೆ ಬಿಟ್ಟದ್ದು ಎಂದು ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಚುನಾವಣೆ ವಿಜಯಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಶನಿವಾರ ಹೇಳಿಕೆ ನೀಡಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಂಡ ವಿಜಯಪುರ ಜಿಲ್ಲೆಯ ಜಿ.ಪಂ. ಉಪಾಧ್ಯಕ್ಷನಾಗಿ ನಾನು ಸ್ಥಳೀಯ ಸಂಸ್ಥೆಗಳ, ಅದರಲ್ಲೂ ಗ್ರಾ.ಪಂ. ಸದಸ್ಯರ ನೋವು, ನಲಿವುಗಳ ಅರಿವು ನನಗಿದೆ. ನಾನು ಅಧಿಕಾರದಲ್ಲಿ ಇದ್ದಾಗ ಮಾಡಿದ ಕೆಲಸಗಳನ್ನು ಜನರು ಸ್ಮರಿಸುತ್ತಿದ್ದಾರೆ. ಅವರ ಆಗ್ರಹದ ಮೇರೆಗೆ ಸ್ಪರ್ಧೆಗೆ ಇಳಿದಿರುವ ನನಗೆ ಹೆಚ್ಚು ಬೆಂಬಲ ಸಿಗುವ ವಿಶ್ವಾಸವಿದೆ ಎಂದರು.

ನನ್ನಿಂದಾಗಿ ಚುನಾವಣೆ ನಡೆಯುತ್ತಿದೆ ಎಂಬ ಕಾರಣಕ್ಕೆ ನಾನಪತ್ರ ಹಿಂಪಡೆಯುವ ಕುರಿತು ರಾಜಕೀಯ ಒತ್ತಡ ಹೇರಲಾಗಿದೆ. ದೂರವಾಣಿ ಕರೆ ಮೂಲಕ ನನ್ನ ಕುಟುಂಬದವರಿಗೆ ಏನೆಲ್ಲ ಬೆದರಿಕೆ ಹಾಕಲಾಗಿಲುತ್ತಿದೆ. ಜೀವ ಭಯ ಇರುವ ಕಾರಣ ಪೊಲೀಸ ಭದ್ರತೆ ನೀಡುವಂತೆ ಎಸ್ಪಿ ಅವರಿಗೆ ಮನವಿ ಮಾಡುತ್ತೇನೆ ಎಂದರು.

ಎಸ್.ಆರ್.ಪಾಟೀಲ ಅವರಂಥ ಹಿರಿಯರನ್ನು ಕಡೆಗಣಿಸಿ, ಸಾಮಾಜಿಕ ನ್ಯಾಯ ಬದಿಗೊತ್ತಿ, ಈಗಾಗಲೇ ಶಾಸಕರಾಗಿರುವ, ಸಚಿವರಾಗಿ ಸೇವೆ ಸಲ್ಲಿಸಿರುವ ಎಂ.ಬಿ.ಪಾಟೀಲ ಅವರ ಸಹೋದರ ಸುನಿಲಗೌಡ ಪಾಟೀಲ ಅವರಿಗೆ ನೀಡಿದ್ದು, ಬೇಸರ ತರಿಸಿದೆ ಎಂದರು.

ಸ್ಪರ್ಧೆಗೆ ಮುನ್ನ ಗ್ರಾ.ಪಂ. ಸದಸ್ಯರ ಸಭೆ ಕರೆದು ಚರ್ಚಿಸಿದ್ದೇನೆ. ಅವರ ಒತ್ತಾಸೆಯಿಂದ, ಅವರು ನೀಡಿದ ಭರವಸೆಯಿಂದ ಸ್ಪರ್ಧೆಗೆ ಇಳಿದಿದ್ದೇನೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪಕ್ಷಗಳ ತಲಾ ಒಬ್ಬ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದು, ಎರಡು ಮತ ಹಾಕಲು ಅವಕಾಶ ಇರುವುದರಿಂದ ಎರಡೂ ಪಕ್ಷಗಳ ನಾಯಕರು ನನಗೆ ದ್ವಿತೀಯ ಪ್ರಾಶಸ್ತ್ಯದ ಮತ ಹಾಕಿಸುವಂತೆ ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಾಯಕರಿಗೆ ಮನವಿ ಮಾಡುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷ ಅದರಲ್ಲೂ ನನಗೆ ಸಿದ್ದರಾಮಯ್ಯ ಅವರನ್ನು ಕಳೆದ ಎರಡು ದಶಕದಿಂದ ಬೆಂಬಲಿಸಿದ ನನಗೆ ಯಾವ ಅವಕಾಶವನ್ನು ಕೊಡಿಸಲಿಲ್ಲ. ಪಕ್ಷನಿಷ್ಟನಾದ ನನಗೆ ಪಕ್ಷದಲ್ಲೂ ಕನಿಷ್ಟ ಅವಕಾಶ ಸಿಗಲಿಲ್ಲ. ಕಾಂಗ್ರೆಸ್ ಜಿಲ್ಲಾಧ್ಯಕ್ಷನನ್ನಾಗಿ ಮಾಡುವ ಭರವಸೆಯನ್ನೂ ಈಡೆರಿಸಲಿಲ್ಲ. ಹೀಗಾಗಿ ಅನಿವಾರ್ಯವಾಗಿ ರಾಜಕೀಯ ಅಸ್ತಿತ್ವ ಹಾಗೂ ಸ್ವಾಭಿಮಾನಕ್ಕಾಗಿ ಸ್ಪರ್ಧೆ ಮಾಡಿದ್ದೇನೆ ಎಂದರು.

ಕಾಂಗ್ರೆಸ್ ಪಕ್ಷದ ಹಿರಿಯರಾದ ಸಿದ್ದು, ಡಿ.ಕೆ.ಶಿ., ಎಸ್.ಆರ್. ಪಾಟೀಲ, ಎಚ್.ವೈ.ಮೇಟಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗಳಾದ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ ಸೇರಿದಂತೆ ಕೂಡ ಕರೆ ಮಾಡಿ, ನಾಮಪತ್ರ ಹಿಂಪಡೆಯುವ ಕುರಿತು ಒತ್ತಡ ಹೇರಿದ್ದರು. ಅಲ್ಲದೇ ಆರ್ಥಿಕ ನಷ್ಟಕ್ಕೆ ಸಿಲುಕುತ್ತಿ ಎಂದು ಸಲಹೆ ನೀಡಿದರೂ ನಾನು ಗ್ರಾ.ಪಂ. ಸದಸ್ಯರಿಗೆ ನೀಡಿದ ಭರವಸೆ ಕಾರಣ ಸ್ಪರ್ಧೆಗೆ ಇಳಿಯುವ ನನ್ನ ನಿರ್ಧಾರಕ್ಕೆ ಬದ್ದನಾಗಿ ಕಣದಲ್ಲಿ ಉಳಿದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೀರೇಶ್ವರ ಪೂಜಾರಿ, ಜಾಕೀರ,ಎಂ.ಎಸ್.ಪಠಾಣ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.