1993ರ ಮುಂಬೈ ಸ್ಫೋಟ ಅಪರಾಧಿ ಯಾಕೂಬ್ ಸಮಾಧಿಗೆ ದೀಪಾಲಂಕಾರ; ಬಿಜೆಪಿ ಆಕ್ರೋಶ
ಇದು ಉದ್ಧವ್ ಠಾಕ್ರೆಯ ಮುಂಬೈ ಮೇಲಿನ ಪ್ರೀತಿ, ಇದು ನಿಮ್ಮ ದೇಶಪ್ರೇಮನಾ?
Team Udayavani, Sep 8, 2022, 4:33 PM IST
ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಶವ ಹೂತ ಸ್ಥಳದಲ್ಲಿ ಸಮಾಧಿ ಕಟ್ಟಿ ಅದಕ್ಕೆ ಮಾರ್ಬಲ್ ಹಾಕಿ, ಹೂ ಚೆಲ್ಲಿ, ದೀಪಾಲಂಕಾರ ಮಾಡಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ:ನರೇಂದ್ರ ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ: ಹಾಡಿ ಹೊಗಳಿದ ಡೊನಾಲ್ಡ್ ಟ್ರಂಪ್
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ರಾಮ್ ಕದಮ್, ಯಾಕೂಬ್ ಮೆಮನ್ ಶವ ಹೂತ ಸ್ಥಳವನ್ನು ದೊಡ್ಡ ಸಮಾಧಿಯನ್ನಾಗಿ ಮಾಡಲಾಗಿದೆ. ಶಿವಸೇನಾ ವರಿಷ್ಠ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಾಕೂಬ್ ಸಮಾಧಿಯನ್ನು ಸುಂದರಗೊಳಿಸುವ ಕೆಲಸ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ.
ಪಾಕಿಸ್ತಾನದ ಅಣತಿಯಂತೆ ಉಗ್ರ ಯಾಕೂಬ್ ಮೆಮನ್ 1993ರಲ್ಲಿ ಮುಂಬೈನಲ್ಲಿನ ಸರಣಿ ಬಾಂಬ್ ಸ್ಫೋಟದ ಕೃತ್ಯ ಎಸಗಿದ್ದ. ಭೀಬತ್ಸ ಕೃತ್ಯ ಎಸಗಿದ್ದ ಉಗ್ರನ ಶವದ ಸ್ಥಳವನ್ನು ಬೃಹತ್ ಸಮಾಧಿ ನಿರ್ಮಿಸಿ, ಮಾರ್ಬಲ್ ಹಾಕಿ, ದೀಪಾಲಂಕಾರ ಮಾಡಲಾಗಿತ್ತು. ಇದು ಉದ್ಧವ್ ಠಾಕ್ರೆಯ ಮುಂಬೈ ಮೇಲಿನ ಪ್ರೀತಿ, ಇದು ನಿಮ್ಮ ದೇಶಪ್ರೇಮನಾ? ಈ ಬಗ್ಗೆ ಶರದ್ ಪವಾರ್, ರಾಹುಲ್ ಗಾಂಧಿ ಮತ್ತು ಉದ್ಧವ್ ಮುಂಬೈ ಜನತೆಯ ಕ್ಷಮೆಯಾಚಿಸಬೇಕು ಎಂದು ಕದಮ್ ಟ್ವೀಟ್ ನಲ್ಲಿ ಪ್ರಸ್ತಾಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ