ಮತದಾನದಲ್ಲಿ ಹೈಡ್ರಾಮಾ: ಜೆಡಿಎಸ್ ಶಾಸಕ ರೇವಣ್ಣ ಮತ ಅಸಿಂಧುಗೊಳಿಸುವಂತೆ ಬಿಜೆಪಿ ದೂರು
Team Udayavani, Jun 10, 2022, 11:16 AM IST
ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.
ರೇವಣ್ಣ ಮತ ಚಲಾಯಿಸುವ ಸಂದರ್ಭದಲ್ಲಿ ತಮ್ಮ ಮತವನ್ನು ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್ ಅವರಿಗೆ ತೋರಿಸಿ ಮತ ಹಾಕಿದ್ದಾರೆ. ಇದು ಚುನಾವಣಾ ನಿಯಮದ ಉಲ್ಲಂಘನೆ. ಹೀಗಾಗಿ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.
ಇದನ್ನೂ ಓದಿ:ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕನ ಮನೆಗೆ ಭೇಟಿ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಆದರೆ ಈ ಆರೋಪವನ್ನು ರೇವಣ್ಣ ನಿರಾಕರಿಸಿದ್ದಾರೆ. ನಾನು ಡಿಕೆ ಶಿವಕುಮಾರ್ ಗೆ ತೋರಿಸಿ ಮತ ಹಾಕಿಲ್ಲ. ಪುಟ್ಟರಾಜು ಅವರಿಗೆ ತೋರಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಫಲಿತಾಂಶ ವಿಳಂಬ ಸಾಧ್ಯತೆ: ಎಚ್ ಡಿ ರೇವಣ್ಣ ಪ್ರಕರಣದ ಕಾರಣದಿಂದ ರಾಜ್ಯಸಭೆ ಫಲಿತಾಂಶ ವಿಳಂಬವಾಗುವ ಸಾಧ್ಯತೆಯಿದೆ. ಸಂಜೆ 5 ರಿಂದ ಮತಗಳ ಎಣಿಕೆ ಶುರುವಾಗಬೇಕಿತ್ತು. ಆದರೆ ಈಗ ರೇವಣ್ಣ ವಿರುದ್ಧ ಬಿಜೆಪಿ ದೂರು ಕೊಟ್ಟಿದ್ದು, ಈ ದೂರು ಪರಿಶೀಲಿಸಿ ಇತ್ಯರ್ಥ ಪಡಿಸಿದ ಮೇಲೆ ಮತ ಎಣಿಕೆ ಆರಂಭವಾಗಬೇಕಿದೆ. ಈ ಪ್ರಕರಣ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತಂದು ಇತ್ಯರ್ಥ ಪಡಿಸಬೇಕು. ಹೀಗಾಗಿ ಫಲಿತಾಂಶ ರಾತ್ರಿ 10 ರ ಸುಮಾರಿಗೆ ಪ್ರಕಟವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ