ಎಂ.ಬಿ.ಪಾಟೀಲರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ!: ಡಿಕೆಶಿ, ಸಿದ್ದುಗೆ ಸವಾಲು
Team Udayavani, Jan 25, 2022, 1:40 PM IST
ಬೆಂಗಳೂರು : ಕಾಂಗ್ರೆಸ್ ಸೇರಲು ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಹೆಸರು ಬಹಿರಂಗಪಡಿಸುವಂತೆ ಬಿಜೆಪಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದೆ. ಮಾತ್ರವಲ್ಲದೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಬಿ.ಪಾಟೀಲರಿಗೆ ಅಭಿನಂದನೆ ಸಲ್ಲಿಸಿ ಟಾಂಗ್ ನೀಡಿದೆ.
”ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ.ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ. #ಕಾಂಗ್ರೆಸ್ಕಳ್ಳಾಟ ಎಂದು ಟ್ವೀಟ್ ಮೂಲಕ ಸವಾಲು ಹಾಕಿದೆ.
ಸಿದ್ದರಾಮಯ್ಯನವರೇ, ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ.#ಕಾಂಗ್ರೆಸ್ಕಳ್ಳಾಟ ಎಂದು ಬರೆದಿದೆ.
ಎಂಬಿಪಿಗೆ ಅಭಿನಂದನೆ ಸಲ್ಲಿಸಿ ಟಾಂಗ್
ಎಂ.ಬಿ.ಪಾಟೀಲರಿಗೆ ಅಭಿನಂದನೆಗಳು. ನಿಮ್ಮ ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ ಎಂದು ನಾವು ಆಶಿಸುತ್ತೇವೆ. ಎಂ.ಬಿ.ಪಾಟೀಲ್ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ವೀರಶೈವ – ಲಿಂಗಾಯಿತ ಧರ್ಮ ವಿಭಜನೆಗೆ ಕಾರಣೀಕರ್ತರಾಗಿದ್ದರು.ಆಗ ಅವರು ಸಿದ್ದರಾಮಯ್ಯನವರ ಕೈಗೊಂಬೆಯಾಗಿದ್ದರು, ಈಗ ಸಮಯದ ಗೊಂಬೆಯಾಗದಿರಿ. ಎಂದು ಇನ್ನೊಂದು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?