ಬಿಜೆಪಿ ಸರ್ಕಾರ ಗೋಮಂತಕೀಯ ಕಲಾವಿದರ ಗೌರವ ಉಳಿಸಿಕೊಳ್ಳುವಲ್ಲಿ ವಿಫಲ: ಕಾಮತ್
ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಗೋವಾ ಪ್ರೀಮಿಯರ್ ಅಧೀಕೃತ ಮಾಡಿ
Team Udayavani, Nov 15, 2021, 2:44 PM IST
ಪಣಜಿ: ಗೋವಾದಲ್ಲಿ ನೊವೆಂಬರ್ 20 ರಿಂದ ನಡೆಯಲಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೊಂಕಣಿ ಹಾಗೂ ಮರಾಠಿ ಚಲನಚಿತ್ರಗಳಿಗಾಗಿ ಗೋವಾ ಪ್ರೀಮಿಯರ್ ಅಧೀಕೃತ ವಿಭಾಗ ಮಾಡುವ ಅಗತ್ಯವಿದ್ದು, ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ತ್ವರಿತವಾಗಿ ಹಸ್ತಕ್ಷೇಪ ಮಾಡಿ ಗೋವಾದ ಚಲನಚಿತ್ರ ಕ್ಷೇತ್ರಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ಆಗ್ರಹಿಸಿದ್ದಾರೆ.
ಮಡಗಾಂವ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರವು ಗೋಮಂತಕೀಯ ಕಲಾವಿದರು ಮತ್ತು ಚಲನಚಿತ್ರ ಕಲಾಕಾರರ ಗೌರವವನ್ನು ಉಳಿಸಿಕೊಳ್ಳಲು ವಿಫಲವಾಗಿದೆ. ಕೋವಿಡ್ ಮಹಾಮಾರಿಯ ಸಂಕಷ್ಟ ಪರಿಸ್ಥಿತಿಯಲ್ಲಿಯೂ ಕೂಡ ಗೋವಾದ ಚಲನಚಿತ್ರ ನಿರ್ಮಾಪಕರು ಚಲನಚಿತ್ರ ನಿರ್ಮಾಣ ಮಾಡಿದ್ದಾರೆ. ಇದು ಅಭಿಮಾನ ಪಡುವ ವಿಷಯವಾಗಿದೆ. ಸರ್ಕಾರವು ಇವರ ಚಲನಚಿತ್ರಗಳನ್ನು ಅಂತರಾಷ್ಟ್ರೀಯ ಚಲನಚಿತ್ರ ಮಹೋತ್ಸವದಲ್ಲಿ ಅಧೀಕೃತ ವಿಭಾಗದಲ್ಲಿ ಪ್ರದರ್ಶಿಸುವುದು ಈ ಚಲನಚಿತ್ರ ನಿರ್ಮಾಪಕರಿಗೆ ಮತ್ತು ಕಲಾವಿದರಿಗೆ ಗೌರವ ನೀಡಿದಂತೆ’ ಎಂದು ದಿಗಂಬರ್ ಕಾಮತ್ ಅಭಿಪ್ರಾಯಪಟ್ಟರು.
‘ಗೋವಾ ಫಿಲ್ಮ್ ಫೈನಾನ್ಸ್ ಯೋಜನೆಯ ಅಡಿಯಲ್ಲಿ ಕಲಂ 8 ರ ನಿಯಮ ಕ ಪ್ರಕಾರ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಫಿಚ್ಚರ್ ಫಿಲ್ಮ್ ಗೆ 5 ಲಕ್ಷ ರೂ. ಹಾಗೂ ನಾನ್ ಫಿಚ್ಚರ್ ಫಿಲ್ಮ್ ಗೆ 2.50 ಲಕ್ಷ ರೂ ಆರ್ಥಿಕ ಸಹಾಯ ನೀಡಲಾಗುತ್ತಿತ್ತು. ಆದರೆ ಕಳೆದ 5 ವರ್ಷಗಳಿಂದ ಈ ಯೋಜನೆಯ ಅಡಿಯಲ್ಲಿ ಯಾವುದೇ ಅನುದಾನ ನೀಡಲಾಗಿಲ್ಲ’ ಎಂದು ದಿಗಂಬರ್ ಕಾಮತ್ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ