ಹಾನಗಲ್ ನಲ್ಲಿ ಪ್ರತಿ ಮನೆಗೆ 10,000 ರೂ ಹಂಚಿದರೂ ಬಿಜೆಪಿ ಸೋತಿದೆ : ರೈ
Team Udayavani, Nov 3, 2021, 11:56 AM IST
ಮಂಗಳೂರು : ‘ದೇಶದಾದ್ಯಂತ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಬೆಲೆ ಏರಿಕೆ, ಸರಕಾರದ ಆಡಳಿತ ವೈಫಲ್ಯವನ್ನು ಜನ ಅರ್ಥ ಮಾಡಿಕೊಂಡಿದ್ದಾರೆ’ ಎಂದು ಮಾಜಿ ಸಚಿವ , ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ ಬುಧವಾರ ಹೇಳಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ಅವರು, ‘ಉಪಚುನಾವಣೆಯಲ್ಲಿ ಹಾನಗಲ್ ನಲ್ಲಿ ಬಿಜೆಪಿಯವರು ಪ್ರತಿ ಮನೆಗೆ 10,000 ರೂ. ಹಂಚಿದ್ದರು, ಆದರೂ ಸೋತಿದ್ದಾರೆ. ಸಿಂದಗಿಯಲ್ಲೂ ಹಣ ಹಂಚಿದ್ದರು, ಆಡಳಿತ ಯಂತ್ರ ದುರುಪಯೋಗ ಮಾಡಿದ್ದರು’ ಎಂದು ಆರೋಪಿಸಿದರು.
‘ಬೆಲೆ ಏರಿಕೆಯನ್ನು ಸಚಿವರು ಸಮರ್ಥಿಸುತ್ತಿರುವುದು ಖಂಡನೀಯ. ಕೊರೊನಾಕ್ಕೂ ಬೆಲೆ ಏರಿಕೆಗೂ ಸಂಬಂದ ಕಲ್ಪಿಸುತ್ತಿರುವುದು ಅರ್ಥಹೀನ. ಜನರ ಸಮಸ್ಯೆಗಳನ್ನು ಮರೆಮಾಚಿಸಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ರಾಜಕಾರಣ ಮಾಡಿದರೆ ಜನ ತಕ್ಕ ಪಾಠ ಕಲಿಸುತ್ತಾರೆ,” ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ