15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್


Team Udayavani, Oct 28, 2021, 6:35 PM IST

1-www

ಹನುಮಸಾಗರ: ”ವಿಶ್ವದಲ್ಲಿಯೇ 15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಎಂದರೇ ಬಿಜೆಪಿ ಪಕ್ಷ, ಆದ್ದರಿಂದ ಸರ್ಕಾರದ ಅಭಿವೃದ್ಧಿಯ ಬಗ್ಗೆ ಜನರ ಮನೆಮನೆಗಳಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ” ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಗುರುವಾರ ಹೇಳಿಕೆ ನೀಡಿದ್ದಾರೆ.

ಅಭಿನವ ತಿರುಪತಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡ ಕೊಪ್ಪಳ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

”ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ನಾವು ಸೋಲುವುದಕ್ಕೆ ಪ್ರಮುಖ ಕಾರಣ ನಮ್ಮ ಪಕ್ಷ ಸರ್ಕಾರದ ಅಭಿವೃದ್ಧಿ ಕೆಲಸ ಹಾಗೂ ಸಾಧನೆ ಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರ ಸೋಲಬೇಕಾಯಿತು” ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಚಿಂತನೆ ವಿಚಾರಗಳ ಮೂಲಕ ವಿಶ್ವ ನಾಯಕರಾಗಿ ಎಲ್ಲಾ ದೇಶಗಳ ಗಮನಸೆಳೆದಿದ್ದಾರೆ. ಬಿಜೆಪಿ ನೇತ್ರತ್ವದ ವಿವಿಧ ರಾಜ್ಯಗಳಲ್ಲಿ ಅಭಿವೃದ್ಧಿ ಆಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ತಕ್ಷಣ ರೈತರ ಮಕ್ಕಳು ಆರ್ಥಿಕ ಸಂಕಷ್ಟದಿAದ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವ ಉದ್ದೇಶದಿಂದ ೧ ಸಾವಿರ ಕೋಟಿ ವಿದ್ಯಾರ್ಥಿವೇತನ, ಹಾಗೂ ವೃದ್ದರಿಗೆ ವೃದ್ಧಾಪ್ಯದ ವೇತನವನ್ನು ಹೆಚ್ಚಿಸುವ ದಿಟ್ಟ ಕ್ರಮವನ್ನು ಕೈಗೊಂಡರು ಆದ್ದರಿಂದ ಬಿಜೆಪಿ ಸರ್ಕಾರದ ಸಾಧನೆ ಅಭಿವೃದ್ಧಿ ಕೆಲಸಗಳನ್ನು ಜನರ ಬಳಿ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲೆ ಇದೆ ಎಂದು ಹೇಳಿದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ, ”ಜಿಲ್ಲೆಯಲ್ಲಿ ಅನೇಕ ಜನಪರ ಕಾರ್ಯಗಳು ಜರುಗಬೇಕಾಗಿದ್ದು, ರಾಜ್ಯ ಹಾಗೂ ಕೇಂದ್ರದಿಂದ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ರಾಷ್ಟ್ರ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಮೋದಿ ಹೆಚ್ಚಿಸಿದ್ದಾರೆ. ಪಕ್ಷ ಸಂಘಟನೆಯ ಮುಖ್ಯ ಜವಾಬ್ದಾರಿ ಕಾರ್ಯಕರ್ತರ ಮೇಲಿದ್ದು ಸಂಘಟನೆ ಮಾಡಿ ಪಕ್ಷವನ್ನು ಬಲಪಡಿಸಬೇಕಾಗಿದೆ” ಎಂದರು.

ಶಾಸಕರಾದ. ಬಸವರಾಜ ದಡೇಸೂರ, ಪರಣ್ಣ ಮನವಳ್ಳಿ ಮಾತನಾಡಿ ”ಪಕ್ಷದ ಕಾರ್ಯಕರ್ತರೇ ಪಕ್ಷದಲ್ಲಿ ಜೀವಾಳ ಆದ್ದರಿಂದ ಸಾಮಾಜಿಕ ಜಾಲತಾಣಗಳ ಮೂಲಕ ಜಿಲ್ಲೆ ಹಾಗೂ ತಾಲೂಕಗಳಲ್ಲಿ ಬಿಡುಗಡೆಯಾದ ಅನುದಾನ ಮತ್ತು ಅಭಿವೃದ್ದಿ ಕಾರ್ಯಗಳನ್ನು ಪಟ್ಟಿ ಮಾಡಿ ಜನರಿಗೆ ತಲುಪಿಸುವ ಮೂಲಕ ಮತ್ತೊಮ್ಮೆ ಸರ್ಕಾರವನ್ನು ತರುವಲ್ಲಿ ಯಶಸ್ವಿಯಾಗಬೇಕು” ಎಂದರು.

”ಬೊಮ್ಮಾಯಿ ಸರ್ಕಾರವು ದೀಪಾವಳಿಯ ಬಳಿಕ ಗಂಗಾವತಿಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಸ್ಥಾಪಿಸಲು ಕ್ರಮ ಕೈಗೊಂಡಿದೆ” ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಎಚ್. ಪಾಟೀಲ್ ಪಕ್ಷ ಸಂಘಟನೆಯ ಬಗ್ಗೆ, ಸರ್ಕಾರದ ಸಾಧನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ, ಮಹಿಳಾ ಮೊರ್ಚ ಸಂಘಟನಾ ಕಾರ್ಯದರ್ಶಿ ಹೇಮಲತಾ ನಾಯಕ, ವಿಭಾಗೀಯ ಪ್ರಭಾರಿ ಸಿದ್ದೇಶ ಯಾದವ,ಸಹಪ್ರಭಾರಿ ಚಂದ್ರಶೇಖರ್ ಪಾಟೀಲ್ ಅಲಗೇರಿ, ತಾಲೂಕಾಧ್ಯಕ್ಷ ಬಸವರಾಜ ಹಳ್ಳೂರು, ಮಾಜಿ ಶಾಸಕ ಜಿ. ವೀರಪ್ಪ, ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಕೊಪ್ಪಳ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಉದ್ಘಾಟಿಸಿದರು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.