ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ
Team Udayavani, Oct 22, 2021, 1:45 PM IST
ಮಂಗಳೂರು: ಉದ್ಯಮಿ, ಬಿಜೆಪಿ ಹಿರಿಯ ನಾಯಕ ಸುಧೀರ್ ಘಾಟೆ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಅವರಿಗೆ 64 ವರ್ಷ ಪ್ರಾಯವಾಗಿತ್ತು.
1992 ರಲ್ಲಿ ಜಾಹೀರಾತು ಸಂಸ್ಥೆ,’ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಕಟ್ಟಿ ಬೆಳೆಸಿದ್ದ ಸುಧೀರ್ ಘಾಟೆ ಮಂಗಳೂರಿನ ಪ್ರಸಿದ್ಧ ಉದ್ಯಮಿಯಾಗಿದ್ದರು.500 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ್ದರು.
ಆರ್ ಎಸ್ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ್ದ ಸುಧೀರ್ ಘಾಟೆ 1995ರಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಕಟ್ಟಿದ್ದರು.
ಬಿಎಂಎಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿವಂಗತ ಪ್ರಭಾಕರ್ ಘಾಟೆ- ಶಾರದಾ ಘಾಟೆ ದಂಪತಿ ಪುತ್ರರಾದ ಸುಧೀರ್ ಪಿಆರ್ ಐಎಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ಲಾಲ್ ಕೃಷ್ಣ ಆಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿ ರಾಜ್ಯದ ಹಿರಿಯ ಬಿಜೆಪಿ ನಾಯಕರ ಒಡನಾಟ ಸುಧೀರ್ ಘಾಟೆಯವರಿಗಿತ್ತು.
ಘಾಟೆ ಅವರು ಪತ್ನಿ, ಪುತ್ರ , ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಅಪಾರ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ