ಜಮ್ಮು-ಕಾಶ್ಮೀರ: ಬಿಜೆಪಿ ಮುಖಂಡನ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ಮುಖಂಡ ಕಿಡ್ನಾಪ್
ಮೆಹ್ರಾ ಅವರನ್ನು ಕಿಡ್ನಾಪ್ ಮಾಡಿರುವ ಆರೋಪಿಗಳ ಬಂಧನಕ್ಕಾಗಿ ಭದ್ರತಾ ಪಡೆಯ ನೆರವು ಕೋರಲಾಗಿದೆ
Team Udayavani, Jul 15, 2020, 2:56 PM IST
ಕಾಶ್ಮೀರ್: ಜಮ್ಮು-ಕಾಶ್ಮೀರ್ ಸೋಪೋರ್ ಜಿಲ್ಲೆಯ ವಾಟರ್ ಗಾಮ್ ಮುನ್ಸಿಪಲ್ ಸಮಿತಿಯ ಉಪಾಧ್ಯಕ್ಷ, ಬಿಜೆಪಿ ಮುಖಂಡ ಮೆಹ್ರಾಜುದೀನ್ ಮಲ್ಲಾ ಅವರನ್ನು ಬುಧವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದು, ಮೆಹ್ರಾ ಅವರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಮೆಹ್ರಾಜುದೀನ್ ಅಪಹರಣವನ್ನು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದು, ಮೆಹ್ರಾ ಅವರು ಮನೆ ಸಮೀಪದ ರಸ್ತೆ ಬಳಿ ನಿಂತಿದ್ದಾಗ ಬೆಳಗ್ಗೆ 8-30ರ ಹೊತ್ತಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆಗಮಿಸಿ ಬಲವಂತವಾಗಿ ಎಳೆದೊಯ್ದಿದ್ದು, ಈವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
ಮೆಹ್ರಾ ಅವರನ್ನು ಕಿಡ್ನಾಪ್ ಮಾಡಿರುವ ಆರೋಪಿಗಳ ಬಂಧನಕ್ಕಾಗಿ ಭದ್ರತಾ ಪಡೆಯ ನೆರವು ಕೋರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಪತ್ತೆಯಾದ ಮೆಹ್ರಾ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಪೋರಾದ ಎಲ್ಲಾ ಪ್ರವೇಶ ದ್ವಾರ ಮತ್ತು ಹೊರ ಹೋಗುವ ದಾರಿಗಳಲ್ಲಿ ಬಿಗಿ ಭದ್ರತೆಯಲ್ಲಿ ಕಣ್ಗಾವಲು ಇಡುವಂತೆ ಪೊಲೀಸರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಜುಲೈ 8ರಂದು ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯ ವಾಸೀಂ ಬರಿ ಅವರನ್ನು ಬಂಡಿಪೋರಾದ ಮನೆಯ ಹೊರಗೆ ಭಯೋತ್ಪಾದಕರು ಗುಂಡಿಟ್ಟು ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ