ಉತ್ತರಪ್ರದೇಶ: ಸಚಿವ ಧರಂ ಸಿಂಗ್ ಬಿಜೆಪಿಗೆ ರಾಜೀನಾಮೆ, 7 ಶಾಸಕರು ಗುಡ್ ಬೈ
ಉತ್ತರಪ್ರದೇಶದಲ್ಲಿ ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೊದಲಿಗೆ ರಾಜೀನಾಮೆ ನೀಡಿದ್ದರು.
Team Udayavani, Jan 13, 2022, 3:17 PM IST
ಲಕ್ನೋ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಘಟಾನುಘಟಿ ಸಚಿವರು, ಹಾಲಿ ಶಾಸಕರು ಗುಡ್ ಬೈ ಹೇಳುತ್ತಿರುವುದು ದೊಡ್ಡ ಆಘಾತ ತಂದಿದೆ.
ಇದನ್ನೂ ಓದಿ:ಸೋಂಕಿತರು 7 ದಿನ ಪೂರೈಸಿದರೆ ಮುಕ್ತ : ನೆಗೆಟಿವ್ ವರದಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ
ಗುರುವಾರ(ಜನವರಿ 13) ಸಚಿವ ಧರಂ ಸಿಂಗ್ ಸೈನಿ ಅವರು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಉತ್ತರಪ್ರದೇಶ ಸರ್ಕಾರ ಮೂವರು ಸಚಿವರು ರಾಜೀನಾಮೆ ನೀಡಿದಂತಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ತಮಗೆ ನೀಡಿದ್ದ ನಿವಾಸ ಮತ್ತು ಭದ್ರತೆಯನ್ನು ತೊರೆದಿದ್ದರು. ಈ ಸಂದರ್ಭದಲ್ಲಿ ಸೈನಿ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹಬ್ಬಿತ್ತು.
ಉತ್ತರಪ್ರದೇಶದಲ್ಲಿ ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೊದಲಿಗೆ ರಾಜೀನಾಮೆ ನೀಡಿದ್ದರು. ಈ ಸಂದರ್ಭದಲ್ಲಿ ಇನ್ನಷ್ಟು ಮಂದಿ ಸಚಿವರು, ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದರು.
ದಲಿತರು, ಹಿಂದುಳಿದ ವರ್ಗ, ರೈತರನ್ನು ನಿರ್ಲಕ್ಷಿಸಿದ್ದು, ಈ ಹಿನ್ನೆಲೆಯಲ್ಲಿ ತಾನು ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಸ್ವಾಮಿ ಪ್ರಸಾದ್ ತಿಳಿಸಿದ್ದರು. ಈಗಾಗಲೇ ಬಿಜೆಪಿ ಶಾಸಕರಾದ ಬ್ರಜೇಶ್ ಪ್ರಜಾಪತಿ, ರೋಶನ್ ಲಾಲ್ ವರ್ಮಾ, ಭಗ್ವತಿ ಸಾಗರ್, ಮುಖೇಶ್ ವರ್ಮಾ, ವಿನಯ್ ಸಾಂಖ್ಯ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ.
ಉತ್ತರಪ್ರದೇಶದಲ್ಲಿ ಒಟ್ಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರುವರಿ 10ರಿಂದ ಮೊದಲ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!