ಮುಸ್ಲಿಂ ಬೃಹತ್ ಸಮಾವೇಶ ಮಾಡಿದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುಸ್ಲಿಂ ಬಾಂಧವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದೇನೆ...

Team Udayavani, Mar 20, 2023, 8:44 PM IST

1-qqewqewqe

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸುವ ಮೂಲಕ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಸೋಮವಾರದಂದು ಮೂಡಲಗಿ ಪಟ್ಟಣದ ತಹಶೀಲ್ದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಮುಸ್ಲಿಂ ಸಮುದಾಯದ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ, ಈ ಸಮಾಜ ಶಿಕ್ಷಣದಲ್ಲಿ ಕ್ರಾಂತಿ ಮಾಡಬೇಕಿದೆ. ಬಹುತೇಕ ಎಲ್ಲ ಉದ್ಯೋಗಗಳಲ್ಲಿ ಗುರುತಿಸಿಕೊಂಡಿರುವ ಈ ಸಮಾಜದವರು ಶ್ರಮ ಜೀವಿಗಳು. ಯಾವುದೇ ಕೆಲಸವನ್ನು ಮಾಡಲು ಹಿಂಜರಿಯುವದಿಲ್ಲ. ನನಗೆ ಕೇವಲ ಒಂದು ಸಮುದಾಯದ ಮತವನ್ನು ಪಡೆದು ಆಯ್ಕೆಯಾಗದೇ ಎಲ್ಲ ಸಮುದಾಯಗಳು ನನಗೆ ಬೆಂಬಲ ಕೊಟ್ಟು ಆಶೀರ್ವಾದ ಮಾಡಿದಾಗಲೇ ಖುಷಿಯಾಗುತ್ತದೆ. ಪ್ರತಿ ಸಮಾಜಗಳ ಅಭ್ಯುದಯಕ್ಕೆ ದುಡಿಯುತ್ತಿದ್ದೇನೆ. ಅದರಂತೆ ಎಲ್ಲ ಸಮಾಜಗಳು ಕೂಡ ನನ್ನ ಬೆನ್ನಿಗಿವೆ. ಸತತವಾಗಿ ಆಶೀರ್ವಾದ ಮಾಡುತ್ತಾ ಬರುತ್ತಿದ್ದಾರೆ. ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ನನ್ನ ಶತ ಕೋಟಿ ನಮನಗಳನ್ನು ಸಲ್ಲಿಸುತ್ತೇನೆಂದರು.

2014ರಲ್ಲಿ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ಮೇಲೆ ಇಡೀ ದೇಶದ ಚಿತ್ರಣವೇ ಬದಲಾಗಿದೆ. ಭಾರತವನ್ನು ಯಾರು ದ್ವೇಷಿಸುತ್ತಿದ್ದರೋ ಅವರೇ ಇಂದು ನಮ್ಮ ದೇಶಕ್ಕೆ ಗೌರವ ನೀಡುತ್ತಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಮೋದಿ ಅವರು ಬ್ರೇಕ್ ಹಾಕುವ ಮೂಲಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದ ಸಂಘಟನೆಗಳನ್ನು ಹತ್ತಿಕ್ಕುವ ಕಾರ್ಯವನ್ನು ಮಾಡಿದ್ದಾರೆ. ಯಾರೋ ಗಡಿಯಲ್ಲಿ ಬಾಂಬ್ ಸಿಡಿಸಿದರೇ ಅದಕ್ಕೆ ನಮ್ಮಲ್ಲಿರುವ ಮುಸ್ಲಿಂರನ್ನು ಅನುಮಾನದಿಂದ ಬೊಟ್ಟು ಮಾಡಿ ತೋರಿಸುತ್ತಿದ್ದೇವು. ಆದರೇ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದ ಮೇಲೆ ವಿದ್ವಂಸಕ ಕೃತ್ಯಗಳಲ್ಲಿ ತೊಡುಗುತ್ತಿದ್ದ ವ್ಯಕ್ತಿಗಳಿಗೆ ಕಡಿವಾಣ ಹಾಕುವ ಮೂಲಕ ದೇಶದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಮುಸ್ಲಿಂ ಸಮಾಜದ ಮಕ್ಕಳು ಸುಶಿಕ್ಷಿತರಾಗಿ ಸಮಾಜದಲ್ಲಿ ಮುಂದೆ ಬರಬೇಕು. ಶಾಲೆಗೆ ಹೋಗುವ ಮಕ್ಕಳನ್ನು ಎಂದಿಗೂ ಬಿಡಿಸಬೇಡಿ, ಶಿಕ್ಷಣವನ್ನು ಮೊಟುಕುಗೊಳಿಸಬೇಡಿ. ಇಂದು ಪ್ರತಿ ಮಕ್ಕಳು ಶೇಕಡಾ ೯೦ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುತ್ತಿದ್ದಾರೆಂದರೆ ಅದಕ್ಕೆ ಶಿಕ್ಷಣದ ಬದಲಾವಣೆಯೇ ಕಾರಣ. ಸಮಾಜದಲ್ಲಿ ಶಿಕ್ಷಣದಿಂದ ನಾವು ಬದಲಾವಣೆ ತರಬೇಕಾಗಿದೆ. ಇದಕ್ಕೆ ಪಾಲಕ-ಪೋಷಕರು ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು.

ಕಳೆದ 2 ತಿಂಗಳಿನಿಂದ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮಾಜಗಳನ್ನು ಒಟ್ಟುಗೂಡಿಸಿದ್ದೇವೆ. ಎಲ್ಲ ಸಮಾವೇಶಗಳು ಭರ್ಜರಿಯಾಗಿ ಯಶಸ್ವಿ ಮಾಡಿದ್ದಾರೆ. ಇದರಿಂದ ವಿರೋಧಿಗಳಿಗೆ ನಡುಕ ಪ್ರಾರಂಭವಾಗಿದೆ. ಯಾವ ಸಮಾಜದವರನ್ನು ಹಿಡಿಯಬೇಕೆಂಬ ಗೊಂದಲದಲ್ಲಿ ಇದ್ದಾರೆ. ಈಗ ಮುಸ್ಲಿಂ ಸಮಾಜದವರು ಒಂದಾಗಿ ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಅವರ ಆಸೆಗೆ ತನ್ನೀರು ಎರಚಿದಂತಾಗಿದೆ. ವಿರೋಧಿಗಳ ಲೆಕ್ಕಾಚಾರ ಕ್ಷೇತ್ರದಲ್ಲಿ ಉಲ್ಟಾ ಆಗಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಮುಸ್ಲಿಂ ಸಮಾಜದವರ ಆಶೋತ್ತರಗಳಿಗೆ ಸ್ಪಂದಿಸಲಾಗಿದೆ.ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಲಾಗುವುದು. ಬರುವ ಚುನಾವಣೆಯಲ್ಲಿ ಎಲ್ಲರೂ ರಾಜ್ಯದಲ್ಲಿ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರುವಂತೆ ಪ್ರಾರ್ಥನೆ ಮಾಡಿಕೊಳ್ಳಿ, ನಮ್ಮ ಪಕ್ಷ ಅಧಿಕಾರಕ್ಕೆ ಮತ್ತೋಮ್ಮೆ ಬಂದರೇ ಅಭಿವೃದ್ದಿ ಕಾರ್ಯಗಳಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.

ಮುಖಂಡ ಲಾಲಸಾಬ ಸಿದ್ದಾಪೂರ ಮಾತನಾಡಿ, ಮುಸ್ಲಿಂ ಸಮುದಾಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆನ್ನಿಗೆ ಯಾವಾಗಲೂ ಇದೆ. ನಮ್ಮ ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಿದ್ದಾರೆ. ಅವರ ಬಳಿ ಯಾರೇ ಯಾವ ಸಮಸ್ಯೆಗಳನ್ನು ಹೊತ್ತುಕೊಂಡು ಹೋದಲ್ಲಿ ತಕ್ಷಣವೇ ಪರಿಹಾರ ಸೂಚಿಸುತ್ತಾರೆ. ಖಾಲಿ ಕೈಯಿಂದ ಕಳಿಸಿದ ಉದಾಹರಣೆಯೇ ಇಲ್ಲ. ನಮ್ಮ ಸಮುದಾಯಕ್ಕೆ ಸಾಕಷ್ಟು ಉಪಕಾರ ಮಾಡಿರುವ ಶಾಸಕರ ಋಣವನ್ನು ನಾವೆಲ್ಲರೂ ಅವರಿಗೆ ನಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಪ್ರಚಂಡ ಬಹುಮತದಿಂದ ಆಯ್ಕೆ ಮಾಡೋಣವೆಂದರು.

ಅಧ್ಯಕ್ಷತೆಯನ್ನು ಹಿರಿಯ ಮುಖಂಡ ಜನಾಬ್ ಎಚ್.ಡಿ.ಮುಲ್ಲಾ ವಹಿಸಿದ್ದರು. ವೇದಿಕೆಯಲ್ಲಿ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಮುಸ್ಲಿಂ ಸಮಾಜದ ಮುಖಂಡರಾದ ಅಜೀಜ್ ಡಾಂಗೆ, ಮಲ್ಲಿಕ ಹುಣಶ್ಯಾಳ, ಅನ್ವರ ನದಾಫ, ಹುಸೇನಸಾಬ ಶೇಖ, ಅಬ್ದುಲ್‌ಗಫಾರ ಡಾಂಗೆ, ನನ್ನುಸಾಬ ಶೇಖ, ರಾಜೇಸಾಬ ಖೆಮಲಾಪೂರ, ಅಮೀನಸಾಬ ಯಳ್ಳೂರ, ಹಾಸಿಮ್ ನಗಾರ್ಚಿ, ದಸ್ತಗೀರಸಾಬ ಶಿರಹಟ್ಟಿ, ನಿಜಾಮಸಾಬ ಜಮಾದಾರ, ರಿಯಾಜ ಯಾದವಾಡ, ಇಕ್ಬಾಲ್ ಸರ್ಕಾವಸ್, ರಸೂಲ ಮಿರ್ಜಾನಾಯಿಕ, ರಾಜು ಬಳಿಗಾರ, ಹಾಜೀಸಾಬ ನದಾಫ, ಬಂದೇನವಾಜ ನದಾಫ, ಶಾನೂರ ಮೊಘಲ, ಇಮಾಮ ಮೋಮಿನ, ಇಸ್ಮಾಯಿಲ್ ಲಾಡಖಾನ, ಎಮ್.ಎಸ್.ದಂತಾಳೆ, ಮಕ್ತುಮಸಾಬ ಖಾಜಿ, ಸೇರಿದಂತೆ ಅರಭಾವಿ ಕ್ಷೇತ್ರದ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮುಸ್ಲಿಂ ಸಮಾಜ ಬಾಂಧವರು ಅದ್ದೂರಿಯಾಗಿ ಸನ್ಮಾನಿಸಿದರು. ಜಾನಪದ ಗಾಯಕ ಶಬ್ಬೀರ ಡಾಂಗೆ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಕುರಿತು ಹಾಡಿರುವ ಹಾಡಿಗೆ ಸಭಿಕರು ಕುಣಿದು ಕುಪ್ಪಳಿಸಿದರು. ಹಾಪೀಜ್‌ಉಮರ ಶೇಖ ಖುರಾನ್ ಪಠಣ ಭೋದಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಪಟ್ಟಣದ ಬಸವೇಶ್ವರ ವೃತ್ತದಿಂದ ಬೃಹತ ಮೆರವಣಿಗೆ ಮೂಲಕ ಮುಖ್ಯವೇದಿಕೆಗೆ ಬರಮಾಡಿಕೊಳ್ಳಲಾಯಿತು.ಶರೀಫ ನದಾಫ ಸ್ವಾಗತಿಸಿದರು.

ಟಾಪ್ ನ್ಯೂಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ನಾವೀನ್ಯತೆ-ಕ್ರಿಯಾಶೀಲತೆ ಮುಖ್ಯ: ಪ್ರೊ. ರುಸಾಕ್‌

ಬೆಳಗಾವಿ: ನಾವೀನ್ಯತೆ-ಕ್ರಿಯಾಶೀಲತೆ ಮುಖ್ಯ: ಪ್ರೊ. ರುಸಾಕ್‌

ಸವದತ್ತಿ: ಗ್ರಾಮೀಣ ಜನರ ಗುಳೇ ತಪ್ಪಿಸಲು ನರೇಗಾ ಸಹಕಾರಿ

ಸವದತ್ತಿ: ಗ್ರಾಮೀಣ ಜನರ ಗುಳೇ ತಪ್ಪಿಸಲು ನರೇಗಾ ಸಹಕಾರಿ

1-sadsad

Chikodi ಜಿಲ್ಲೆ ಘೋಷಣೆಗಾಗಿ ತೀವ್ರವಾದ ಹೋರಾಟ ಅನಿವಾರ್ಯ ಎಂದ ಸಮಿತಿ

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

ಚಿಕ್ಕೋಡಿ:ಕೇಂದ್ರದ ಸಾಧನೆ ಮನೆ ಮನೆಗೆ ತಲುಪಿಸಿ: ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ:ಕೇಂದ್ರದ ಸಾಧನೆ ಮನೆ ಮನೆಗೆ ತಲುಪಿಸಿ: ಅಣ್ಣಾಸಾಹೇಬ ಜೊಲ್ಲೆ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ