ಪಶ್ಚಿಮ ಬಂಗಾಳದಲ್ಲಿ ಬದುಕಲು ಸಾಧ್ಯವಿಲ್ಲ: ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಸಂಸದೆ
ಜನರು ಭಯದಿಂದ ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ...
Team Udayavani, Mar 25, 2022, 2:20 PM IST
Image, News Courtesy : ANI
ನವದೆಹಲಿ : ಬಿರ್ಭೂಮ್ ಘಟನೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟಿದ್ದಾರೆ.
ಬಿರ್ ಭೂಮ್ ಹಿಂಸಾಚಾರದ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತಿದ ರೂಪಾ ಗಂಗೂಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದರು.
ಬಂಗಾಳದಲ್ಲಿ ಸಾಮೂಹಿಕ ಹತ್ಯೆಗಳು ನಡೆಯುತ್ತಿವೆ, ಜನರು ಭಯದಿಂದ ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ. ಅಲ್ಲಿ ಇನ್ನು ಮುಂದೆ ಜನರು ಬದುಕಲು ಯೋಗ್ಯವಾದ ವಾತಾವರಣ ಇಲ್ಲ ಎಂದು ಕಣ್ಣೇರು ಹಾಕಿದ್ದಾರೆ.
#WATCH | BJP MP Roopa Ganguly broke down in Rajya Sabha over Birbhum incident, demanded President’s rule in West Bengal saying, “Mass killings are happening there, people are fleeing the state… it is no more liveable…” pic.twitter.com/EKQLed8But
— ANI (@ANI) March 25, 2022
ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ಭುಗಿಲೆದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿ ಹತ್ಯಾಕಾಂಡ ನಡೆಸಲಾಗಿತ್ತು.ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ