ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಕೊಲೆ ಬೆದರಿಕೆ ಕರೆ
ಸಂಸದ ಸಾಕ್ಷಿ ಮಹಾರಾಜ್ ಈ ಕುರಿತು ಅನಾಮಧೇಯ ವ್ಯಕ್ತಿಯ ವಿರುದ್ಧ ದೂರು ನೀಡಿರುವುದಾಗಿ ವರದಿ ಹೇಳಿದೆ.
Team Udayavani, Aug 11, 2020, 11:36 AM IST
ಲಕ್ನೋ: ಉನ್ನಾವೊ ಭಾರತೀಯ ಜನತಾ ಪಕ್ಷದ ಸಂಸದ ಸಾಕ್ಷಿ ಮಹಾರಾಜ್ ಅವರನ್ನು ಕೊಲ್ಲುವ ಹಾಗೂ ಮನೆಗೆ ಬಾಂಬ್ ಹಾಕುವ ಬೆದರಿಕೆ ಕರೆ ಬಂದಿರುವುದಾಗಿ ಉತ್ತರಪ್ರದೇಶ ಪೊಲೀಸರಿಗೆ ದೂರು ನೀಡಿರುವುದಾಗಿ ವರದಿ ತಿಳಿಸಿದೆ.
ಉನ್ನಾವೊ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿರುವ ದೂರಿನ ಪ್ರಕಾರ, ತನಗೆ ಪಾಕಿಸ್ತಾನದ ನಂಬರ್ ನಿಂದ ಸೋಮವಾರ ಎರಡು ಬಾರಿ ಜೀವ ಬೆದರಿಕೆ ಕರೆ ಬಂದಿತ್ತು. ಅಷ್ಟೇ ಅಲ್ಲ ಮನೆ ಮೇಲೆ ಬಾಂಬ್ ಹಾಕುವುದಾಗಿಯೂ ಬೆದರಿಸಿರುವುದಾಗಿ ತಿಳಿಸಿದ್ದಾರೆ.
ಸಂಸದ ಸಾಕ್ಷಿ ಮಹಾರಾಜ್ ಈ ಕುರಿತು ಅನಾಮಧೇಯ ವ್ಯಕ್ತಿಯ ವಿರುದ್ಧ ದೂರು ನೀಡಿರುವುದಾಗಿ ವರದಿ ಹೇಳಿದೆ. “ನನ್ನ ಗೆಳೆಯ ಮೊಹಮ್ಮದ್ ಗಫಾರ್ ನನ್ನು ಹಿಡಿಯಲು ಪೊಲೀಸರಿಗೆ ನೆರವು ನೀಡುವ ಮೂಲಕ ನೀನು(ಸಾಕ್ಷಿ) ನಿನ್ನ ಸಾವನ್ನು ಆಹ್ವಾನಿಸಿಕೊಂಡಿರುವೆ”. ನಿನ್ನ ಹಾಗೂ ನಿನ್ನ ಜತೆಗಾರರನ್ನು ಹತ್ತು ದಿನದೊಳಗೆ ಕೊಲೆಗೈಯುವುದಾಗಿ” ಬೆದರಿಕೆ ಹಾಕಿರುವುದಾಗಿ ಸಾಕ್ಷಿ ಮಹಾರಾಜ್ ತಿಳಿಸಿದ್ದಾರೆ.
ಮುಜಾಹಿದೀನ್ ಗಳು ಸಾಕ್ಷಿ ಮಹಾರಾಜ್ ಅವರ 24 ಗಂಟೆಗಳ ಕಾಲ ಚಲವಲನದ ಮೇಲೆ ಕಣ್ಣಿಟ್ಟಿದ್ದಾರೆ. ಒಂದು ವೇಳೆ ಅವಕಾಶ ಸಿಕ್ಕ ಕೂಡಲೇ ಹತ್ಯೆಗೈಯಲಿದ್ದಾರೆ ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ