ಅಖಿಲೇಶ್ ಯಾದವ್ ವಿರುದ್ಧ ಕೇಂದ್ರ ಸಚಿವರನ್ನೇ ಕಣಕ್ಕಿಳಿಸಿದ ಬಿಜೆಪಿ!
ಜಿದ್ದಾಜಿದ್ದಿನ ಕಣವಾದ ಕರ್ಹಾಲ್
Team Udayavani, Jan 31, 2022, 4:41 PM IST
ಮೈನ್ಪುರಿ : ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಸೋಮವಾರದ ವಿದ್ಯಮಾನದಲ್ಲಿ ಮಾಜಿ ಮುಖ್ಯಮಂತ್ರಿ , ಎಸ್ ಪಿ ಪ್ರಮುಖ ಅಖಿಲೇಶ್ ಯಾದವ್ ವಿರುದ್ಧ ಕೇಂದ್ರ ಸಚಿವ ಮತ್ತು ಆಗ್ರಾ ಸಂಸದ ಎಸ್ಪಿ ಸಿಂಗ್ ಬಘೇಲ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ಇಂದು ಮುಂಜಾನೆ ಅಖಿಲೇಶ್ ಯಾದವ್ ಕರ್ಹಾಲ್ ನಲ್ಲಿ ನಾಮಪತ್ರ ಸಲ್ಲಿಸಿದ್ದರು. ಆ ಬಳಿಕ ಎಸ್ಪಿ ಸಿಂಗ್ ಬಘೇಲ್ ನಾಮಪತ್ರ ಸಲ್ಲಿಸಿದ್ದಾರೆ.
ಬಘೇಲ್ ಅವರು ಮುಲಾಯಂ ಯುವ ಬ್ರಿಗೇಡ್ನ ಅಧ್ಯಕ್ಷರಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದರು ಈಗ ವಿಲೀನಗೊಂಡ ಜಲೇಸರ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಸಂಸದರಾಗಿ ಮೂರು ಬಾರಿ ಗೆದ್ದಿದ್ದರು.
ಕೇಂದ್ರ ಸಂಪುಟದಲ್ಲಿ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವರಾಗಿರುವ ಬಘೇಲ್ ಅವರು 2015 ಮತ್ತು 2016 ರ ನಡುವೆ ಬಿಜೆಪಿಯ ಒಬಿಸಿ (ಇತರ ಹಿಂದುಳಿದ ಸಮುದಾಯ) ಮೋರ್ಚಾದ ಮುಖ್ಯಸ್ಥರಾಗಿದ್ದರು.
ಬಾಘೆಲ್ ಅವರು ಎಸ್ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ನಿಕಟ ವಿಶ್ವಾಸಿಯಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಡಿಂಪಲ್ (ಅಖಿಲೇಶ್ ಅವರ ಪತ್ನಿ) ಮತ್ತು ಅಕ್ಷಯ್ ಯಾದವ್ ಸೇರಿದಂತೆ ಅವರ ಕುಟುಂಬ ಸದಸ್ಯರ ವಿರುದ್ಧವೇ ಎರಡು ಬಾರಿ ಸ್ಪರ್ಧಿಸಿ ಸೋತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ