ಕರ್ನಾಟಕದತ್ತ ಮೋದಿ- ಶಾ ಚಿತ್ತ: ದೆಹಲಿಯಲ್ಲಿಂದು ರಾಷ್ಟ್ರೀಯ ಪದಾಧಿಕಾರಿಗಳ ಸಭೆ
Team Udayavani, Dec 5, 2022, 11:05 AM IST
ಬೆಂಗಳೂರು: ಗುಜರಾತ್ ಚುನಾವಣೆ ಮುಕ್ತಾಯವಾಗುತ್ತಿರುವ ಬೆನ್ನಲ್ಲೆ ಉಳಿದ ರಾಜ್ಯಗಳಲ್ಲಿ ಪಕ್ಷ ಬಲಪಡಿಸಲು ಮುಂದಾಗಿರುವ ಬಿಜೆಪಿ ದಿಲ್ಲಿಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆಯೋಜಿಸಿದೆ.
ಈ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ತೆರಳಿದ್ದಾರೆ. ತವರು ಚುನಾವಣೆಯ ಬಳಿಕ ಕರ್ನಾಟಕದತ್ತ ಮೋದಿ- ಅಮಿತ್ ಶಾ ಚಿತ್ತ ನೆಟ್ಟಿದ್ದು ಇಂದು ದೆಹಲಿಯಲ್ಲಿ ನಡೆಯುತ್ತಿರುವ ಸಭೆಗೆ ವಿಶೇಷ ಮಹತ್ವ ಲಭಿಸಿದೆ.
ಇದನ್ನೂ ಓದಿ:ಹೃದಯ ಸ್ತಂಭನ: ಮದುವೆ ಮಂಟಪದಲ್ಲೇ ಕುಸಿದು ಬಿದ್ದು 20 ವರ್ಷದ ವಧು ಮೃತ್ಯು
ಒಟ್ಟು ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಪದಾಧಿಕಾರಿಗಳ ಸಭೆಗೆ ಚಾಲನೆ ನೀಡಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ, ಬಿ.ಎಲ್ ಸಂತೋಷ್, ರಾಜನಾಥ್ ಸಿಂಗ್ ಸೇರಿದಂತೆ ಹಲವು ಪ್ರಮುಖರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಮುಂದಿನ ಎಲೆಕ್ಷನ್ ಬಗ್ಗೆ ಪದಾಧಿಕಾರಿಗಳ ಸಭೆಯಲ್ಲಿ ರಣತಂತ್ರ ನಡೆಯಲಿದೆ. ಚುನಾವಣಾ ದೃಷ್ಟಿಯಿಂದ ರಾಜ್ಯದಲ್ಲಿ ಹಠಾತ್ ಆಗಿ ಒಂದಿಷ್ಟು ಬದಲಾವಣೆ ನಡೆಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.