ಬಿಜೆಪಿ, ಯಾವುದೇ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಸಿ.ಟಿ.ರವಿ
Team Udayavani, Aug 1, 2022, 10:35 PM IST
ಬೆಂಗಳೂರು: ಬಿಜೆಪಿ, ಯಾವುದೇ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ನಮ್ಮದು ಕೇಡರ್ ಆಧಾರಿತ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಲವು ಕಾರಣಕ್ಕೆ ಸ್ವಾಭಾವಿಕವಾಗಿ ಅಸಮಾಧಾನ ಇರುತ್ತದೆ. ಕೆಲವರನ್ನು ವ್ಯಕ್ತಿಗತವಾಗಿ, ಇನ್ನೂ ಹಲವರನ್ನು ಗುಂಪಾಗಿ ಕೂತು ಮಾತನಾಡಿಸುವ ಕೆಲಸ ಇರುತ್ತದೆ. ದವಡೆಯೂ ನಮ್ಮದೇ; ನಾಲಿಗೆಯೂ ನಮ್ಮದೇ. ಹಲ್ಲು ನಾಲಿಗೆಗೆ ಕಚ್ಚಿದರೆ ಹಲ್ಲು ಉದುರಿಸಿಕೊಳ್ಳುವ ಕೆಲಸ ಯಾರೂ ಮಾಡುವುದಿಲ್ಲ ಎಂದು ಹೇಳಿದರು.
ಪಕ್ಷದ ಸಂಕಷ್ಟದ ಕಾಲದಲ್ಲೂ ವಿಚಾರಕ್ಕಾಗಿಯೇ ಹೋರಾಟ ಮಾಡಿದ ಪ್ರತಿ ಕಾರ್ಯಕರ್ತರೂ ನಮ್ಮ ಪಕ್ಷದ ಆಸ್ತಿ. ಪಂಚಾಯತ್ ಸದಸ್ಯರೂ ಅಲ್ಲದ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ. ಸಾವಿರಾರು ಜನ ಕಾರ್ಯಕರ್ತರು ಮೆಟ್ಟಿಲಾಗಿ ಒಬ್ಬ ನಾಯಕನನ್ನು ಮೇಲೆ ಏರಿಸಿರುತ್ತಾರೆ. ಹಾಗಾಗಿ, ಆ ಮೆಟ್ಟಿಲನ್ನು ಮರೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಕಸಕಡ್ಡಿ ಸಹಿಸಿಕೊಳ್ಳಬೇಕು
ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರ ಬೇಕೆಂದಾಗ ಅತಿವೃಷ್ಟಿಯಲ್ಲಿ ಬರುವ ಕಸಕಡ್ಡಿಯನ್ನು ಸಹಿಸಿಕೊಳ್ಳಬೇಕು. ಡ್ಯಾಂ ತುಂಬಿದಾಗ ಮಾತ್ರ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತದೆ. ಆಗ ಪವರ್ ಟರ್ಬೆçನ್ ತಿರುಗುತ್ತದೆ. ಅತಿವೃಷ್ಟಿ ಆದಾಗ ವೇಗವಾಗಿ ಅಣೆಕಟ್ಟು ತುಂಬುತ್ತದೆ. ಅದನ್ನು ನೀರಾವರಿ, ವಿದ್ಯುತ್ ಉತ್ಪಾದನೆ ಮಾಡಲು ಬಳಸಬಹುದು. ತೇಲಿಬಂದ ಕಸಕಡ್ಡಿ ಡ್ಯಾಂನಲ್ಲಿ ಫಿಲ್ಟರ್ ಆಗುತ್ತದೆ. ಫಿಲ್ಟರ್ ಮಾಡುವುದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ.
-.ಟಿ.ರವಿ
ಚಕ್ರವರ್ತಿ ಸೂಲಿಬೆಲೆ ಅವರು ಒಬ್ಬ ಅಪ್ಪಟ ರಾಷ್ಟ್ರವಾದಿ. ಅವರು ವ್ಯತಿರಿಕ್ತವಾಗಿ ಮಾತನಾಡಿದ್ದರೆ ಅವರ ಜೊತೆ ವೈಯಕ್ತಿಕವಾಗಿ ಮಾತನಾಡುತ್ತೇವೆ. ಹತ್ತಾರು ಕಾರಣಕ್ಕೆ ಸಿಟ್ಟು ಬಂದಿರಬಹುದು. ಆ ಸಿಟ್ಟನ್ನು ಶಮನ, ಸಮಾಧಾನ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’