ಭ್ರಷ್ಟಾಚಾರ ಮುಚ್ಚಲು ಜಾತಿ ಮೊರೆ ಹೋದ ಬಿಜೆಪಿ: ಸಿದ್ದರಾಮಯ್ಯ
Team Udayavani, Sep 25, 2022, 11:32 PM IST
ಬೆಂಗಳೂರು: ಬಿಜೆಪಿಯವರ ಭ್ರಷ್ಟಾಚಾರ, ತಪ್ಪುಗಳನ್ನು ಮುಚ್ಚಿಕೊಳ್ಳಲು ಜಾತಿ ಮೊರೆ ಹೋಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ನ ಪೇಸಿಎಂ ಅಭಿಯಾನ ಲಿಂಗಾಯತ ಮುಖ್ಯಮಂತ್ರಿಗೆ ಅಪಮಾನ ಮಾಡುವ ಷಡ್ಯಂತ್ರ ಎಂಬ ಆರೋಪಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರ ಸಂಘದವರು ಶೇ. 40 ಪರ್ಸೆಂಟೆಜ್ ಬಗ್ಗೆ ಬಿಜೆಪಿ ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ಕಳೆದ 1 ವರ್ಷದಿಂದ ಈ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಈ ವಿಚಾರವನ್ನು ಅಸೆಂಬ್ಲಿಯಲ್ಲಿ ಎತ್ತಿದರೆ ಜಾತಿ ವಿಚಾರ ಹೇಗೆ ಬರುತ್ತದೆ. ನರೇಂದ್ರ ಮೋದಿಯವರು ಸಿದ್ದರಾಮಯ್ಯ ಸರಕಾರ 10 ಪರ್ಸೆಂಟ್ ಸರಕಾರ ಎಂದು ನನ್ನ ವಿರುದ್ಧ ಆರೋಪ ಮಾಡಿದ್ದರು.
ಸಿದ್ದರಾಮಯ್ಯ ಕುರುಬ ಎಂಬ ಉದ್ದೇಶದಿಂದ ಈ ಆರೋಪ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಏನೂ ಆಧಾರ ಇಲ್ಲದೇ ಈ ಆರೋಪ ಮಾಡಿದ್ದರು. ಹಾಗಾದರೆ ನಮ್ಮಲ್ಲಿ ಲಿಂಗಾಯಿತ ನಾಯಕರು ಇಲ್ಲವೇ ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ಇದೀಗ ಬಣ್ಣ ಕಟ್ಟುತ್ತಿದ್ದಾರೆ ಎಂದು ಹೇಳಿದರು.
ಜಾತಿಗೂ, ಭ್ರಷ್ಟಾಚಾರಕ್ಕೂ ಸಂಬಂಧ ವಿಲ್ಲ. ಬೊಮ್ಮಾಯಿ ಓರ್ವ ಸಿಎಂ. ನನ್ನ ವಿರುದ್ಧ ಪುಸ್ತಕ ಹೊರಡಿಸಿದ್ದಾರೆ. ಅದರಲ್ಲಿ ಸುಳ್ಳು ಅಂಶಗಳನ್ನು ಹೇಳಿದ್ದಾರೆ. ಇದನ್ನು ಇಟ್ಟುಕೊಂಡು ಸಿದ್ದರಾಮಯ್ಯ ಕುರುಬರು ಎಂಬುದಕ್ಕೆ ಅಭಿಯಾನ ಆರಂಭಿಸಿದ್ದಾರೆ ಎಂದು ಹೇಳಲಾಗುತ್ತದೆಯೇ.
ಯಡಿಯೂರಪ್ಪ ಅವರನ್ನು ಬಿಜೆಪಿಯವರೇ ಮುಖ್ಯ ಮಂತ್ರಿ ಸ್ಥಾನದಿಂದ ಇಳಿಸಿದ್ದಾರೆ. ಹಾಗಾದರೆ ಅವರು ಲಿಂಗಾಯಿತ ರಲ್ಲವೇ, ವಿಜಯೇಂದ್ರ ಅವರನ್ನು ಏಕೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!