ಉತ್ತರದಲ್ಲಿ ಬಿಜೆಪಿ ರಾಜ್ಯ ಪ್ರವಾಸ ಶುರು; 150 ಕ್ಷೇತ್ರಗಳ ಟಾರ್ಗೆಟ್‌ನೊಂದಿಗೆ ಪ್ರವಾಸ


Team Udayavani, Sep 28, 2022, 7:00 AM IST

bjpಉತ್ತರದಲ್ಲಿ ಬಿಜೆಪಿ ರಾಜ್ಯ ಪ್ರವಾಸ ಶುರು; 150 ಕ್ಷೇತ್ರಗಳ ಟಾರ್ಗೆಟ್‌ನೊಂದಿಗೆ ಪ್ರವಾಸ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಮುಟ್ಟಲು ಬಿಜೆಪಿ ನಾಯಕರು ರಾಜ್ಯ ಪ್ರವಾಸ ಆರಂಭಿಸಿ ದ್ದಾರೆ. ಮತ್ತೂಂದೆಡೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ವಾಕ್ಸಮರವೂ ಆರಂಭವಾಗಿದೆ.

ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ನೇತೃತ್ವದ ತಂಡ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದು, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದ ತಂಡ ಬುಧವಾರದಿಂದ ಕಲಬುರಗಿ, ಯಾದಗಿರಿ, ಬೀದರ್‌ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.

ಪ್ರವಾಸ ಸಂದರ್ಭದಲ್ಲಿ ನಳಿನ್‌ಕುಮಾರ್‌ ಕಟೀಲ್‌ ಅವರು, ತಾನು ಜೈಲಿಗೆ ಹೋಗಬಾರದೆಂದು ಲೋಕಾಯುಕ್ತವನ್ನು ಸಿದ್ದರಾಮಣ್ಣ ಮುಚ್ಚಿದ್ದರು. ಆ ಇಲಾಖೆಗೆ ನಮ್ಮ ಸರಕಾರ ಮತ್ತೆ ಶಕ್ತಿ ತುಂಬಲಿದೆ. ರಾಜ್ಯದಲ್ಲಿ ಪೇಮೆಂಟ್‌ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಣ್ಣ ಎಂದು ಟೀಕಿಸಿದರು.

ಇದಕ್ಕೆ ಜಮಖಂಡಿಯಲ್ಲಿ ತಿರುಗೇಟು ನೀಡಿ ರುವ ಸಿದ್ದರಾಮಯ್ಯ, ನಳಿನ್‌ಕುಮಾರ್‌ ಒಬ್ಬ ವಿದೂ ಷಕ. ಪಾಪ ಅವರಿಗೆ ಇನ್ನೂ ಪ್ರಬುದ್ಧತೆ ಮೂಡಿಲ್ಲ ಎಂದು ಲೇವಡಿ ಮಾಡಿದರು.

ಅರ್ಕಾವತಿ ವಿಷಯ, ಲೋಕಾಯುಕ್ತ ಬಂದ್‌ ಮಾಡದಿದ್ದರೆ ಸಿದ್ದರಾಮಯ್ಯ ಜೈಲಿಗೆ ಹೋಗು ತ್ತಿದ್ದರು ಎನ್ನುತ್ತಾರೆ. 2006ರಿಂದಲೂ ಯಾರ್ಯಾರ ಕಾಲದಲ್ಲಿ ಆಗಿರುವುದೆಲ್ಲಾ ತನಿಖೆ ನಡೆದರೆ ಎಲ್ಲರ ಬಂಡವಾಳ ತಿಳಿಯುತ್ತದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಡರ್ಟಿ ಪಾಲಿಟಿಕ್ಸ್‌ ಆರೋಪಕ್ಕೆ ಟ್ವೀಟ್‌ ಮೂಲಕ ಕುಟುಕಿರುವ ಕಾಂಗ್ರೆಸ್‌, ಯಾರದ್ದು ಡರ್ಟಿ ಪಾಲಿಟಿಕ್ಸ್‌? ಪೇಸಿಎಂ ಬಸವರಾಜ ಬೊಮ್ಮಾಯಿ ಅವರದ್ದೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಅರುಣ್‌ ಸಿಂಗ್‌ ಪ್ರವಾಸ
ಅರುಣ್‌ ಸಿಂಗ್‌ ಅವರು ಸೆ. 28 ರಂದು ಬೆಂಗಳೂರಿನಿಂದ ವಿಮಾನದಲ್ಲಿ ಕಲಬುರಗಿಗೆ ತೆರಳುವರು. ಅಲ್ಲಿ ಕಾರ್ಯಕರ್ತರ ಸಭೆಯ ಬಳಿಕ ಒಬಿಸಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವರು. ಜೇವರ್ಗಿಯಲ್ಲಿ ಕಾರ್ಯಕರ್ತರ ಜತೆ ಸಮಾಲೋಚಿಸಿ ರಾತ್ರಿ ಬೀದರ್‌ಗೆ ತೆರಳಿ ಅಲ್ಲಿ ವಾಸ್ತವ್ಯ ಇರುವರು. ಸೆ. 29ರಂದು ಅವರು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಕಾಶಂಪುರದಲ್ಲಿ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸುವರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.