ಎನ್. ಮಹೇಶ್ಗೆ ಬಿಜೆಪಿ ಟಿಕೆಟ್? ಗುಟ್ಟು ಬಿಟ್ಟು ಕೊಟ್ಟ ಮಾಜಿ ಸಿಎಂ ಬಿಎಸ್ ವೈ
Team Udayavani, Mar 30, 2022, 7:03 PM IST
ಯಳಂದೂರು: ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಪಕ್ಷದಿಂದ ಹಾಲಿ ಶಾಸಕ ಎನ್. ಮಹೇಶ್ಗೆ ಟಿಕೆಟ್ ದೊರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಪರೋಕ್ಷವಾಗಿ ತಿಳಿಸಿದರು.
ಬುಧವಾರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದ ವಿರಕ್ತಮಠದ ನೂತನ ಕಟ್ಟಡ, ಬಸವಭವನ, ಬಸವದ್ವಾರ, ಪ್ರಸಾದ ನಿಲಯ, ಮಹಾಂತಸ್ವಾಮಿಗಳು, ಸಿದ್ಧಲಿಂಗಸವಾಮಿಗಳ ಗದ್ದುಗೆಗಳಿಗೆ ಲಿಂಗ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿಗಳ ಬೃಹತ್ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಹೇಶ್ ತುಂಬಾ ಪ್ರಜ್ಞಾವಂತ ಶಾಸಕರಾಗಿದ್ದಾರೆ. ವಿಧಾನಸಭೆಯಲ್ಲಿ ಇವರು ಮಾತನಾಡಲು ನಿಂತರೆ ಮೌನ ಆವರಿಸುತ್ತದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿರುವುದು ಈ ಭಾಗದ ಜನರು ಪ್ರಜ್ಞಾವಂತಿಕೆಗೆ ಸಾಕ್ಷಿಯಾಗಿದೆ. ಇವರ ಮೇಲೆ ಇಲ್ಲಿನ ಮತದಾರರು ನಿರೀಕ್ಷೆಯನ್ನು ಇಟ್ಟಿದ್ದು ಇವರು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲೂ ಇವರಿಗೆ ಆಶೀರ್ವದಿಸಿ, ಹರಸಿ ಎಂದು ಮನವಿ ಮಾಡಿದರು. ಇದಕ್ಕೆ ಅಲ್ಲಿ ನೆರೆದಿದ್ದ ಸಾರ್ವಜನಿಕರು ಚಪ್ಪಾಳೆಗಳ ಸುರಿಮಳೆಗೈದು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ, ವಾಟಾಳು ಶ್ರೀ, ಕುಂದೂರು ಮಠದ ಶ್ರೀ, ದೇಗುಲ ಮಠದ ಶ್ರೀ ಮತ್ತು ಶಾಸಕ ಎನ್ ಮಹೇಶ್ ಉಪಸ್ಥಿತರಿದ್ದರು.
ಈ ವಿಷಯದಲ್ಲಿ ಅಲ್ಲಲ್ಲಿ ಸಾಕಷ್ಟು ಚರ್ಚೆಗಳು ನಡೆಯಿತು. ಕ್ಷೇತ್ರಾದ್ಯಂತ ಈ ಸುದ್ದಿ ಹಡರಡುತ್ತಿದ್ದಂತೆಯೇ ಮುಂದಿನ ವಿಧಾನಸಭೆಯ ಬಿಜೆಪಿ ಟಿಕೆಟ್ ಎನ್. ಮಹೇಶ್ಗೆ ನೀಡಿದರೆ ಪಕ್ಷದ ನಿಷ್ಠಾಂತರ ಗತಿಯೇನು ಎಂಬ ಬಗ್ಗೆ ರಾಜಕೀಯ ಗುಸುಗುಸು, ಚರ್ಚೆಗೆ ಈ ವಿಷಯ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ