ಸುಳ್ಳು ಕಾಂಗ್ರೆಸ್ ಮನೆ ದೇವರು ಎಂಬುದಕ್ಕೆ ಸಾಕ್ಷಿಯಿದು: ಬಿಜೆಪಿ
Team Udayavani, Dec 29, 2021, 11:40 AM IST
ಬೆಂಗಳೂರು : ಬೆಂಗಳೂರಿನ ಶೇ.60 ರಷ್ಟು ಜನರು ಕುಡಿಯುವ ಉದ್ದೇಶಕ್ಕಾಗಿ ಇನ್ನೂ ಅಂತರ್ಜಲವನ್ನು ಅವಲಂಬಿಸಿದ್ದಾರೆ ಎಂದು ಕಾಂಗ್ರೆಸ್ ಮಾಡಿರುವ ಟ್ವೀಟ್ ಗೆ ಬಿಜೆಪಿ ತಿರುಗೇಟು ನೀಡಿದ್ದು, ಸುಳ್ಳು ಕಾಂಗ್ರೆಸ್ ಮನೆ ದೇವರು ಎಂಬುದಕ್ಕೆ ಸಾಕ್ಷಿಯಿದು ಎಂದು ಲೇವಡಿ ಮಾಡಿದೆ.
”ರಾಜ್ಯದಲ್ಲಿ ಐದು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಇದಾದ ಬಳಿಕ ಜೆಡಿಎಸ್ ಜೊತೆ ಸೇರಿ ಮೈತ್ರಿ ಸರ್ಕಾರ ರಚಿಸಿದರು.ಆಗ ಇದೇ ಭ್ರಷ್ಟಾಧ್ಯಕ್ಷ ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದರು.ಆಗೇಕೆ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮೇಕೆದಾಟು ಕಾಳಜಿ ಇರಲಿಲ್ಲ? ಈಗ ಸುಳ್ಳಿನಜಾತ್ರೆ ಮಾಡುವ ಬದಲು ಸತ್ಯ ಶೋಧನೆ ಮಾಡಿಕೊಳ್ಳಿ” ಎಂದು ಟ್ವೀಟ್ ಮಾಡಿದೆ.
ಇನ್ನೊಂದು ಟ್ವೀಟ್ ನಲ್ಲಿ ”ಸುಳ್ಳು ಕಾಂಗ್ರೆಸ್ ಮನೆ ದೇವರು ಎಂಬುದಕ್ಕೆ ಇಲ್ಲೊಂದು ಸಾಕ್ಷಿಯಿದೆ. ಮೇಕೆದಾಟು ಪಾದಯಾತ್ರೆಗೆ ಹೊರಟಿರುವ ಕಾಂಗ್ರೆಸ್ ನೀರಿನ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ. ಬೆಂಗಳೂರು ನಗರದ ಶೇ.60 ರಷ್ಟು ನೀರಿನ ಪೂರೈಕೆ ಈಗಲೂ ಅಂತರ್ಜಲವನ್ನು ಆಧರಿಸಿದೆಯಂತೆ. ಈಗ ಕಾವೇರಿಯನ್ನು ಹರಿಸುವುದಕ್ಕೆ ಹೊರಟಿದ್ದಾರೆ.ಎಂಥಹ ಸುಳ್ಳು!”ಎಂದು ಲೇವಡಿ ಮಾಡಿದೆ.
ಸುಳ್ಳು ಕಾಂಗ್ರೆಸ್ ಮನೆ ದೇವರು ಎಂಬುದಕ್ಕೆ ಇಲ್ಲೊಂದು ಸಾಕ್ಷಿಯಿದೆ.
ಮೇಕೆದಾಟು ಪಾದಯಾತ್ರೆಗೆ ಹೊರಟಿರುವ ಕಾಂಗ್ರೆಸ್ ನೀರಿನ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ.
ಬೆಂಗಳೂರು ನಗರದ ಶೇ.60 ರಷ್ಟು ನೀರಿನ ಪೂರೈಕೆ ಈಗಲೂ ಅಂತರ್ಜಲವನ್ನು ಆಧರಿಸಿದೆಯಂತೆ. ಈಗ ಕಾವೇರಿಯನ್ನು ಹರಿಸುವುದಕ್ಕೆ ಹೊರಟಿದ್ದಾರೆ.
ಎಂಥಹ ಸುಳ್ಳು!
#ಸುಳ್ಳಿನಜಾತ್ರೆ pic.twitter.com/PUIgQDvUbi
— BJP Karnataka (@BJP4Karnataka) December 29, 2021
”ನಿಮಗೆ ಗೊತ್ತೇ, ಬೆಂಗಳೂರಿನ ಶೇ.60 ರಷ್ಟು ಜನರು ಕುಡಿಯುವ ಉದ್ದೇಶಕ್ಕಾಗಿ ಇನ್ನೂ ಅಂತರ್ಜಲವನ್ನು ಅವಲಂಬಿಸಿದ್ದಾರೆ, ಇದು ಪ್ರತಿ ನಿಮಿಷವೂ ಖಾಲಿಯಾಗುತ್ತಿದೆ? ಕುಡಿಯುವ ನೀರಿಗಾಗಿ ನಮ್ಮ ಹೋರಾಟದಲ್ಲಿ ಕೈಜೋಡಿಸಿ. ಜನವರಿ 9 ರಿಂದ 19 ರವರೆಗೆ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!