ಆಹಾ! ತೋರಿಕೆಯ ನಾಟಕ ಚೆನ್ನಾಗಿದೆ: ಮೇಕೆದಾಟು 2.0 ಸಮಾಪ್ತಿ ಬಳಿಕ ಬಿಜೆಪಿ
ʼಕೈʼ ಗಳು ಕೋವಿಡ್ ನಿಯಮ ಪಾಲಿಸುತ್ತಿದ್ದವು!
Team Udayavani, Mar 4, 2022, 11:18 AM IST
ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೈಗೊಂಡಿದ್ದ ಪಾದಯಾತ್ರೆಯ ಎರಡನೇ ಹಂತ ಮುಕ್ತಾಯವಾದ ಬಳಿಕವೂ ಬಿಜೆಪಿ ಟೀಕೆಗಳನ್ನು ಮುಂದುವರಿಸಿದ್ದು, ಟ್ವೀಟ್ ಗಳ ಮೂಲಕ ಆಹಾ! ತೋರಿಕೆಯ ನಾಟಕ ಚೆನ್ನಾಗಿದೆ ಎಂದು ಜರಿದಿದೆ.
ಇದು ಬರೀ ಕೆಮರಾ ಕಣ್ಣಿಗಾಗಿ ಜೊತೆಯಾದ ಕ್ಷಣವಷ್ಟೇ. ಒಳಗೊಳಗೆ ಒಬ್ಬರನ್ನೊಬ್ಬರು ಹಣಿಯಲು ತಂತ್ರ ಹೆಣೆಯುತ್ತಿದ್ದಾರೆ.ಒಂದು ವೇಳೆ ಇದೇ ವೇದಿಕೆಯಲ್ಲಿ ಮುಂದಿನ ಚುನಾವಣೆಗೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆಯಾಗಿದ್ದರೆ, ಜೊತೆಯಾಗಿರುವ ʼಕೈʼ ಗಳು ಕೋವಿಡ್ ನಿಯಮ ಪಾಲಿಸುತ್ತಿದ್ದವು! ಸುಳ್ಳಿನಜಾತ್ರೆ ಎಂದು ಟೀಕಿಸಿದೆ.
ಮನೆಯೊಂದು, ನೂರು ಬಾಗಿಲು ಆಗಿರುವ ಕಾಂಗ್ರೆಸ್ ಈಗ ಒಗ್ಗಟ್ಟಿನ ಮಂತ್ರ ಜಪಿಸುತ್ತಿದೆ.ಈ ಒಗ್ಗಟ್ಟು ತೋರಿಕೆಯದ್ದೆಂದು ಸ್ವತಃ ಅದೇ ಪಕ್ಷದವರಿಗೂ ತಿಳಿದಿದೆ.ಈ ಹಿಂದೆ ಸಾಲಾಗಿ ಕೈ ಎತ್ತಿದ್ದವರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು, ಕೊನೆಗೆ ಶಾಂತಿವನದಲ್ಲಿ ಸರ್ಕಾರ ಉರುಳಿಸುವ ಬಗ್ಗೆ ಮಾತನಾಡಿ ಅಶಾಂತಿ ಸೃಷ್ಟಿಸಿದರು ಎಂದು ಬರೆದಿದೆ.
ಮೇಕೆದಾಟು ಮೂಲಕ ಕಾಂಗ್ರೆಸ್ ಪಕ್ಷ ಸಾಧಿಸಿದ ಎರಡು ಪ್ರಮುಖ ಸಾಧನೆಗಳು.ಮೇಕೆದಾಟು ಪಾದಯಾತ್ರೆ 1.0 – ಕೊರೋನ ಹಬ್ಬಿಸಿದ್ದು, ಮೇಕೆದಾಟು ಪಾದಯಾತ್ರೆ 2.0 – ಟ್ರಾಫಿಕ್ ಜಾಮ್ ಮಾಡಿದ್ದು ಎಂದು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ