ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ
Team Udayavani, Dec 6, 2021, 8:00 PM IST
ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿಯ ‘ಭೀಷ್ಮ’ ಎಂದು ಕರೆಸಿಕೊಳ್ಳುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಉರಿಮಜಲು ಕೆ.ರಾಮ್ ಭಟ್ ಅವರು ಸೋಮವಾರ ವಿಧಿ ವಶರಾಗಿದ್ದಾರೆ. ಅವರಿಗೆ 92 ವರ್ಷ ಪ್ರಾಯವಾಗಿತ್ತು.
ವಾರ್ಧಕ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆಯಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಕೊಂಬೆಟ್ಟಿನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ವಕೀಲರಾಗಿದ್ದ ಭಟ್, ಜನಸಂಘದ ನಾಯಕರಾಗಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಪುತ್ತೂರು ಪುರಸಭೆಯ ಅಧ್ಯಕ್ಷ, ಕ್ಯಾಂಪ್ಕೋ ಅಧ್ಯಕ್ಷರಾಗಿದ್ದರು.
1978 ಮತ್ತು 1983 ರಲ್ಲಿ ಪುತ್ತೂರು ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.
ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಭಟ್ , ಅಟಲ್ ಬಿಹಾರಿ ವಾಜಪೇಯಿ, ಲಾಲ್ಕೃಷ್ಣ ಅಡ್ವಾಣಿ ಸಹಿತ ಹಲವು ದಿಗ್ಗಜ ನಾಯಕರ ಒಡನಾಟ ಹೊಂದಿದ್ದರು.
ಜನಸಂಘದ ನಾಯಕ, ಮಾಜಿ ಶಾಸಕರಾದ ಉರಿಮಜಲು ಶ್ರೀ ರಾಮ ಭಟ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳು. pic.twitter.com/uVKpgpoLh5
— BJP Karnataka (@BJP4Karnataka) December 6, 2021
ಭಟ್ ಅವರ ನಿಧಾನಕ್ಕೆ ಬಿಜೆಪಿ ನಾಯಕರು ಸೇರಿದಂತೆ ಅಪಾರ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ