ರಾಹುಲ್ ಗಾಂಧಿಯವರನ್ನು ಹೀರೋ ಮಾಡಲು ಬಿಜೆಪಿ ಬಯಸುತ್ತಿದೆ: ಮಮತಾ ಬ್ಯಾನರ್ಜಿ
ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿದ್ದರೆ....
Team Udayavani, Mar 19, 2023, 10:50 PM IST
ಕೋಲ್ಕತಾ: ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಕ್ಷದ ಆಂತರಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿದ್ದರೆ, ಯಾರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳು ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿಯವರು ಪ್ರಧಾನಿ ಮೋದಿಯವರ “ಅತಿದೊಡ್ಡ ಟಿಆರ್ ಪಿ ಎಂದು ಹೇಳಿದ್ದಾರೆ ಎಂದು ಹೇಳಿರುವುದಾಗಿ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ. ರಾಹುಲ್ ಗಾಂಧಿ ನಾಯಕನಾಗಬೇಕು ಎಂದು ಬಯಸುತ್ತಿರುವ ಬಿಜೆಪಿಯು ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
“ಬಿಜೆಪಿಯ ಮುಂದೆ ತಲೆಬಾಗುವುದು ಕಾಂಗ್ರೆಸ್. ಕಾಂಗ್ರೆಸ್, ಸಿಪಿಎಂ ಮತ್ತು ಬಿಜೆಪಿ ಪಕ್ಷಗಳು ತೃಣಮೂಲ ಕಾಂಗ್ರೆಸ್ ವಿರುದ್ಧ ಅಲ್ಪಸಂಖ್ಯಾತರನ್ನು ಪ್ರಚೋದಿಸುತ್ತಿವೆ ಎಂದು ಟಿಎಂಸಿ ಕಾರ್ಯಕರ್ತರಿಗೆ ಕೋಲ್ಕತಾದಿಂದ ವರ್ಚುವಲ್ ಭಾಷಣದಲ್ಲಿ ಹೇಳಿದರು. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ಪ್ರಾಬಲ್ಯದ ಕ್ಷೇತ್ರದಲ್ಲಿ ಸೋಲು ಅನುಭವಿಸಿತ್ತು. ಅಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ