BJP ಅಧಿಕಾರಕ್ಕೆ ಬಂದರೆ ತೆಲಂಗಾಣದವರಿಗೆ ಅಯೋಧ್ಯೆಯಲ್ಲಿ ಉಚಿತ ದರ್ಶನ: ಶಾ
70 ವರ್ಷಗಳಿಂದ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದೆ
Team Udayavani, Nov 18, 2023, 6:46 PM IST
ಹೈದರಾಬಾದ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದ ಎಲ್ಲಾ ನಿವಾಸಿಗಳಿಗೆ ಅಯೋಧ್ಯೆಯ ರಾಮ ಮಂದಿರಕ್ಕೆ ಬಿಜೆಪಿ ಉಚಿತ ದರ್ಶನವನ್ನು ಖಚಿತಪಡಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಘೋಷಿಸಿದ್ದಾರೆ.
ಗದ್ವಾಲ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಕಳೆದ 70 ವರ್ಷಗಳಿಂದ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದೆ ಮತ್ತು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದ ಭೂಮಿಪೂಜೆ ನೆರವೇರಿಸಿದ್ದು, 2024ರ ಜನವರಿ 22ರಂದು ಪ್ರಾಣ ಪ್ರತಿಷ್ಠೆಯೂ ನಡೆಯುತ್ತಿದೆ ಎಂದು ಹೇಳಿದರು.