ಬಿಜೆಪಿಯದ್ದು ಕಮಿಷನ್ ಸರ್ಕಾರ, ಎಚ್ಚರ ವಹಿಸಿ: ವಡ್ನಾಳ್ ರಾಜಣ್ಣ


Team Udayavani, Nov 27, 2021, 5:03 PM IST

26bjp

ಚನ್ನಗಿರಿ: ಕೇಂದ್ರ ಮತ್ತು ರಾಜ್ಯದಲ್ಲಿರುವ  ಬಿಜೆಪಿ ಸರ್ಕಾರ ಕಮಿಷನ್ ಸರ್ಕಾರ ಇಂತಹ ಪಕ್ಷವನ್ನು ಬೆಂಬಲಿಸುವ ಮುನ್ನಾ ಎಚ್ಚರವಹಿಸಿ, ಅವರು ನೀಡುವ ಆಸೆ ಅಮಿಷಕ್ಕೆ ಬಲಿಯಾಗಬೇಡಿ  ಎಂದು  ಮಾಜಿ ಶಾಸಕ ವಡ್ನಾಳ್ ರಾಜಣ್ಣ ಹೇಳಿದರು.

ಪಟ್ಟಣದ ರುಕ್ಕುಮಾಯಿ ಕಲ್ಯಾಣ ಮಂಟಪದಲ್ಲಿ ನಡೆದ ವಿಧಾನ ಪರಿಷತ್ ಚನಾವಣೆ ಹಿನ್ನೆಲೆ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಆರ್.  ಪ್ರಸನ್ನಕುಮಾರ್ ಅವರ ಪ್ರಚಾರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಆಕ್ರಮ ಆಸ್ತಿಗಳಿಕೆಗೆ ಮುಂದಿರುವ ಬಿಜೆಪಿಯವರು ಅಭಿವೃದ್ಧಿ ಹೆಸರಿನಲ್ಲಿ ಕಮೀಷನ್ ದಂಧೆ ನಡೆಸುತ್ತಿದ್ದಾರೆ ಅವರು ನೀಡುವ ಆಶ್ವಾಸನೆಗಳು ಬರೀ ಭರವಸೆಯಾಗಿಯೇ ಉಳಿದಿದೆ. ಬೆಲೆಏರಿಕೆಗಳಿಂದ ಜನರ ಹಣವನ್ನು ಲೂಟಿ ಹೊಡೆಯುತ್ತಿದ್ದಾರೆ.  ಅದ್ದರಿಂದ ಬಿಜೆಪಿಗೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಜನತೆ ತಕ್ಕ ಪಾಠವನ್ನು ಕಲಿಸಬೇಕು.

ಶಿವಮೊಗ್ಗ ವಿಧಾನ ಪರಿಷತ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ಮಾತನಾಡಿ, ನಿಷ್ಟೆ, ಪ್ರಾಮಾಣಿಕತೆಯೊಂದಿಗೆ ಕೆಲಸವನ್ನು ಮಾಡಲು ಈ ಹಿಂದೆ ನನಗೆ ಅವಕಾಶವನ್ನು ಕೊಟ್ಟಿದ್ದೀರಿ ಅದರಂತೆ ನಡೆದುಕೊಂಡು ಕೆಲವಸವನ್ನು ಮಾಡಿ ನಿಮ್ಮ ಮುಂದೆ ಮತ್ತೆ ಬಂದು ನಿಂತಿದ್ದೇನೆ, ನನ್ನ ಒಂದು ಲೋಪ ಇಲ್ಲ ಎಂದರು.

ಇದನ್ನೂ ಓದಿಬೇಡಿಕೆ ಈಡೇರಿಸಿ: ನ.29ರ ಟ್ರ್ಯಾಕ್ಟರ್ ಜಾಥಾ ಮುಂದೂಡಿಕೆ: ರೈತ ಸಂಘಟನೆಗಳು

ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಜಾತಿ ವ್ಯವಸ್ಥೆ ಹಿಂದುತ್ವ ವ್ಯವಸ್ಥೆಯಿಂದ ವಿಷಯುಕ್ತ ರಾಜಕಾರಣ ಮಾಡಲಾಗುತ್ತಿದೆ. ಇಂದು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ನಾಯಕರು ಸೋಲನ್ನು ಅನುಭವಿಸಿದ್ದಾರೆ ಎಂದರೆ ಬಿಜೆಪಿ ಹಿಂದೂತ್ವ ಆಸ್ತ್ರ ಮಾತ್ರ ಕೆಲಸ ಮಾಡಿದೆ,  ಅಭಿವೃದ್ಧಿ ಬಡವರು, ದೀನದಲಿತರ ಪರ ಕೆಲಸಗಾರರನ್ನು ಕಳೆದುಕೊಳ್ಳುವಂತೆ ಆಗಿದೆ. ಇಲ್ಲಿ ಅಭಿವೃದ್ಧಿ ಮಾನ್ಯತೆ ಕೋಡಿ ಜಾತಿ, ಧರ್ಮ, ಹಿಂದುತ್ವ ಹೊಟ್ಟೆ ತುಂಬಿಸುವುದಿಲ್ಲ ಎಂದು ಕಿರಿಕಾಡಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷವು ಗಾಪಂ ಸಿಗಬೇಕಾದ ಹಣ ಮತ್ತು ಯೋಜನೆಗಳನ್ನು ಕಿತ್ತುಕೊಳ್ಳುತ್ತಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ಮತವನ್ನು ಚಲಾಯಿಸಿ ಎಂದರು.

ಗ್ರಾಪಂ ವ್ಯಾಪ್ತಿಯಲ್ಲಿನ ಜಲಜೀವನ್ ಮಿಷನ್ ಸೇರಿದಂತೆ ಹಲವು ಯೋಜನೆಗಳಿಗೆ ಕಮೀಷನ್ ಆಸೆಗೆ ಗ್ರಾಪಂ ಸಿಗಬೇಕಾದ ಹಣವನ್ನು ಬೇರೆಡೆ ಬಳಸುತ್ತಿದ್ದಾರೆ ಬಿಲ್ ಗಳನ್ನು ದುರುಪಯೋಗ ಬಳಸಿಕೊಳುತ್ತಿದ್ದಾರೆ ನೇರವಾಗಿ ಆರೋಪ ಮಾಡಿದರು.

ಕಮೀಷನ್ ಏಜೆಂಟ್ ಆಗಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ ಇದೊಂದು ಲಾಟರಿ ಸರ್ಕಾರ. ಪ್ರಧಾನಿ ಮೋದಿ ರೈತ ಮಸೂದೆ ಕಾನೂನು ಈ ಹಿಂದೆ ವಾಪಸ್ಸು ತೆಗೆದುಕೊಂಡಿದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು ಎಂದು ದೂರಿದರು. ಸ್ವಚ್ಚ ಆಡಳಿತ ಕಾಂಗ್ರೆಸ್ ನಿಂದ ಮಾತ್ರ ನೀಡಲು ಸಾಧ್ಯ ಅದ್ದರಿಂದ ಕಾಂಗ್ರೆಸ್ ಗೆ ಮತವನ್ನು ನೀಡುವಂತೆ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಬಿಜೆಪಿಯವರ ಹಣದ ಅಮಿಷಕ್ಕೆ ಬಲಿಯಾಗಬೇಡಿ, ಬಡವರ ಬಗ್ಗೆ ಕಾಳಜಿಯಿಲ್ಲದ ಪಕ್ಷ ಬಿಜೆಪಿ. ಲೂಟಿ ಮಾಡಿದ ಭ್ರಷ್ಟಾಚಾರದ ಹಣದಿಂದ ಚುನಾವಣೆ ಮಾಡಲು ಹೊರಟಿದ್ದಾರೆ. ನಂತರ ನಿಮಗೆ ಸಿಗಬೇಕಾದ ಸೌಲಭ್ಯ ಕಸಿದು ಕೊಂಡು ಅದನ್ನು ಕೊಳ್ಳೆಹೊಡೆಯುತ್ತಾರೆ ಅವರ ಬಣ್ಣದ ಮಾತಿಗೆ ಬಲಿಯಾಗಬೇಡಿ. ಸಾಮಾಜಿಕ ನ್ಯಾಯ ಇರುವಂತ ಏಕೈಕ ಪಕ್ಷ ಕಾಂಗ್ರೆಸ್. ಬೆಲೆ ಏರಿಕೆ ಹಿನ್ನೆಲೆ ಬಿಜೆಪಿಯವರಿಗೆ ಜನ ಸಮಾನ್ಯರು ಬೀದಿ ಬೀದಿಯಲ್ಲಿ ಉಗಿಯುತ್ತಿದ್ದಾರೆ  ಅದ್ದರಿಂದ ಈ ಬಾರಿ  ವಿಧಾನ ಪರಿಷತ್  ಚುನಾವಣೆಯಲ್ಲಿ ಆರ್ ಪ್ರಸನ್ನ ಕುಮಾರ್ ಅವರನ್ನು ಅತ್ಯಂತ ಮತಗಳ ಅಂತರದಿಂದ ಗೆಲ್ಲಿಸಬೇಕು ಅದಕ್ಕೆ ಕಾರ್ಯಕರ್ತರು ಸನ್ನದರಾಗಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ ಬಸವರಾಜ್, ಕಾಂಗ್ರೆಸ್ ಮುಖಂಡ ವಿರೇಶ್ ನಾಯ್ಕ್, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕೋರಿ. ನಗರ ಘಟಕದ ಅಧ್ಯಕ್ಷ ಮಂಜುನಾಥ್, ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಅಮ್ಮಾನುಲ್ಲಾ, ಸಿದ್ದೆಗೌಡ್ರು, ತಾಪಂ ಮಾಜಿ ಸದಸ್ಯ ಜಗದೀಶ್, ಶ್ರೀಕಾಂತ್, ಗಣಿ ಸಾಹೇಬ್ರು, ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.