ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ
Team Udayavani, Jan 16, 2022, 3:37 PM IST
ಹೊಸದಿಲ್ಲಿ: ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ ಮತ್ತು ನಿರುದ್ಯೋಗಕ್ಕೂ ಕಾರಣವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ಆನ್ಲೈನ್ ರಸಪ್ರಶ್ನೆಯನ್ನು ಹಾಕುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ಈ ಟ್ವೀಟ್ ಮಾಡಿದ್ದಾರೆ.
“ಬಿಜೆಪಿಯ ದ್ವೇಷದ ರಾಜಕೀಯವು ದೇಶಕ್ಕೆ ತುಂಬಾ ಹಾನಿಕಾರಕವಾಗಿದೆ ಎಂದು ನಾನು ನಂಬುತ್ತೇನೆ. ಮತ್ತು ಈ ದ್ವೇಷವೂ ನಿರುದ್ಯೋಗಕ್ಕೆ ಕಾರಣವಾಗಿದೆ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
“ಸಮಾಜದಲ್ಲಿ ಶಾಂತಿಯಿಲ್ಲದೆ ದೇಶೀಯ ಮತ್ತು ವಿದೇಶಿ ಕೈಗಾರಿಕೆಗಳು ನಡೆಯಲು ಸಾಧ್ಯವಿಲ್ಲ. ಪ್ರತಿದಿನ ನಿಮ್ಮ ಸುತ್ತ ಬೆಳೆಯುತ್ತಿರುವ ಈ ದ್ವೇಷವನ್ನು ಸಹೋದರತ್ವದಿಂದ ಸೋಲಿಸುತ್ತೀರಾ. ನೀವು ನನ್ನೊಂದಿಗೆ ಇದ್ದೀರಾ? #ನೋ ಹೇಟ್ ” ಎಂಬ ಹ್ಯಾಶ್ ಟ್ಯಾಗ್ ಸೇರಿಸಿದ್ದಾರೆ.
ಕಾಂಗ್ರೆಸ್ ನಾಯಕ ಶನಿವಾರ ಆನ್ಲೈನ್ ರಸಪ್ರಶ್ನೆಯಲ್ಲಿ , ಬಿಜೆಪಿ ಸರ್ಕಾರದ “ದೊಡ್ಡ ನ್ಯೂನತೆಯ” ಬಗ್ಗೆ ಜನರನ್ನು ಕೇಳಿ ನಾಲ್ಕು ಆಯ್ಕೆಗಳನ್ನು ನೀಡಿದ್ದರು. ಅವರು ನೀಡಿದ ಆಯ್ಕೆಗಳೆಂದರೆ ನಿರುದ್ಯೋಗ, ತೆರಿಗೆ ಸುಲಿಗೆ, ಬೆಲೆ ಏರಿಕೆ ಮತ್ತು ದ್ವೇಷದ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ