ರಾಜ್ಯಸಭೆ; ತಡರಾತ್ರಿ ಬೆಳವಣಿಗೆ-ಮಹಾರಾಷ್ಟ್ರ, ಹರ್ಯಾಣದಲ್ಲಿ ಬಿಜೆಪಿಗೆ ಜಯ, ಕೈಗೆ ಹಿನ್ನಡೆ
ಮಹಾರಾಷ್ಟ್ರ, ರಾಜಸ್ಥಾನ, ಹರ್ಯಾಣ ಮತ್ತು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಎಂಟು ಸ್ಥಾನಗಳಲ್ಲಿ ಜಯಗಳಿಸಿದೆ.
Team Udayavani, Jun 11, 2022, 12:58 PM IST
ನವದೆಹಲಿ:ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಕೆಲವು ಶಾಸಕರು ನಿಯಮ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಮತಎಣಿಕೆ ತಡವಾಗಿ ನಡೆದಿದ್ದು, ಶನಿವಾರ(ಜೂನ್ 11) ಅಭ್ಯರ್ಥಿಗಳ ಆಯ್ಕೆಯನ್ನು ಘೋಷಿಸಲಾಗಿದೆ.
ಇದನ್ನೂ ಓದಿ:ಕಾಶ್ಮೀರದಲ್ಲಿ ಹಿಜ್ಬುಲ್ ಉಗ್ರನ ಹತ್ಯೆ ; 6 ಮಂದಿ ಉಗ್ರರ ಬಂಧನ
ಮಹಾರಾಷ್ಟ್ರ, ರಾಜಸ್ಥಾನ, ಹರ್ಯಾಣ ಮತ್ತು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಎಂಟು ಸ್ಥಾನಗಳಲ್ಲಿ ಜಯಗಳಿಸಿದೆ. ಇದರೊಂದಿಗೆ ರಾಜ್ಯಸಭೆಯಲ್ಲಿ ಬಿಜೆಪಿಯ ಬಲ ಹೆಚ್ಚಳವಾದಂತಾಗಿದೆ.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆ ಮೈತ್ರಿಗೆ ಹಿನ್ನೆಡೆ:
ತಡರಾತ್ರಿಯವರೆಗೆ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಮಹಾರಾಷ್ಟ್ರದ ಆರು ರಾಜ್ಯಸಭಾ ಸ್ಥಾನಗಳಲ್ಲಿ ಬಿಜೆಪಿ 3ರಲ್ಲಿ ಜಯಗಳಿಸಿದೆ. ಮಹಾರಾಷ್ಟ್ರದಲ್ಲಿ ಅಡ್ಡಮತದಾನದ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಮಾರು ಎಂಟು ಗಂಟೆಗಳ ನಂತರ ಮತ ಎಣಿಕೆ ನಡೆಸಲಾಗಿತ್ತು.
ಶನಿವಾರ ನಸುಕಿನ ವೇಳೆ ಗೆಲುವು ಸಾಧಿಸಿದ ಅಭ್ಯರ್ಥಿಗಳ ಹೆಸರನ್ನು ಚುನಾವಣಾ ಆಯೋಗ ಘೋಷಿಸಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿಯ ಪಿಯೂಷ್ ಗೋಯಲ್, ರಾಜ್ಯದ ಮಾಜಿ ಸಚಿವ ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್ ಗೆಲುವು ಸಾಧಿಸಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದ ಸಂಜಯ್ ರಾವತ್, ಎನ್ ಸಿಪಿಯ ಪ್ರಫುಲ್ ಪಟೇಲ್ ಮತ್ತು ಕಾಂಗ್ರೆಸ್ ನ ಇಮ್ರಾನ್ ಪ್ರತಾಪ್ ಘರ್ಹಿ ಜಯಗಳಿಸಿದ್ದಾರೆ.
ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ 3ರಲ್ಲಿ ಜಯಗಳಿಸಿದೆ. ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳಾದ ರಣದೀಪ್ ಸುರ್ಜೇವಾಲಾ, ಮುಕುಲ್ ವಾಸ್ನಿಕ್ ಮತ್ತು ಪ್ರಮೋದ್ ತಿವಾರಿ ಜಯ ಸಾಧಿಸಿದ್ದು, ಬಿಜೆಪಿಯ ಘನಶ್ಯಾಮ್ ತಿವಾರಿ ಗೆಲುವು ಸಾಧಿಸಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.
ಬಿಜೆಪಿಯ ಬೆಂಬಲದೊಂದಿಗೆ ಪಕ್ಷೇತರರಾಗಿ ಸ್ಪರ್ಧಿಸಿದ್ದ ಮಾಧ್ಯಮ ದೊರೆ ಸುಭಾಶ್ ಚಂದ್ರ ಎರಡನೇ ಪ್ರಾಶಸ್ತ್ಯದ ಮತ ಪಡೆಯಲು ವಿಫಲರಾಗುವ ಮೂಲಕ ಪರಾಜಯಗೊಂಡಿದ್ದಾರೆ.
ಹರ್ಯಾಣದಲ್ಲಿ ಕಾಂಗ್ರೆಸ್ ಗೆ ಮುಖಭಂಗ:
ಹರ್ಯಾಣದಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದ್ದು, ಹಿರಿಯ ಮುಖಂಡ ಅಜಯ್ ಮಕೇನ್ ಸೋಲನ್ನನುಭವಿಸಿದ್ದಾರೆ. ಹರ್ಯಾಣದಲ್ಲಿ ಎರಡು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಟಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಕೃಷ್ಣ ಪನ್ವಾರ್ ಮತ್ತು ಬಿಜೆಪಿ, ಜೆಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಕಾರ್ತಿಕೇಯ ಶರ್ಮಾ ಜಯಗಳಿಸಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.
ಕರ್ನಾಟಕದಲ್ಲಿ ಬಿಜೆಪಿಯ ಅಭ್ಯರ್ಥಿಗಳಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೇಹರ್ ಸಿಂಗ್ ರಾಜ್ಯಸಭೆ ಪ್ರವೇಶಿಸಿದ್ದಾರೆ. ಕಾಂಗ್ರೆಸ್ ನ ಜೈರಾಂ ರಮೇಶ್ ಜಯಸಾಧಿಸಿದ್ದಾರೆ.
15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳ ಪೈಕಿ 41 ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಇನ್ನುಳಿದಂತೆ ಉತ್ತರಪ್ರದೇಶದ 11, ಮಹಾರಾಷ್ಟ್ರದ 6, ತಮಿಳುನಾಡಿನ 6, ಬಿಹಾರದ 5, ಕರ್ನಾಟಕ 04, ರಾಜಸ್ಥಾನ 04, ಆಂಧ್ರಪ್ರದೇಶ 04, ಮಧ್ಯಪ್ರದೇಶ 3, ಒಡಿಶಾ 03, ಪಂಜಾಬ್ 02, ಜಾರ್ಖಂಡ್ 02, ಹರ್ಯಾಣ 02, ಛತ್ತೀಸ್ ಗಢ 02, ತೆಲಂಗಾಣ 01, ಉತ್ತರಾಖಂಡ್ 01 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ