
ಭಾರತ ದರ್ಶನ: ಬಿಜೆಪಿ ಯುವಮೋರ್ಚಾದ 16 ರಾಜ್ಯದ 40ಕ್ಕೂ ಅಧಿಕ ಮಂದಿ ಭಾಗಿ
Team Udayavani, Apr 1, 2022, 4:40 PM IST

ಬೆಂಗಳೂರು: ಭಾರತ ದರ್ಶನ ಹೆಸರಿನಲ್ಲಿ ರಾಜ್ಯದ ವಿವಿಧ ಸ್ಥಳಗಳಲ್ಲಿ ದೇಶದ 16 ರಾಜ್ಯದ 40ಕ್ಕೂ ಅಧಿಕ ಬಿಜೆಪಿ ಯುವ ಮೋರ್ಚಾ ಹಲವು ಪದಾಧಿಕಾರಿಗಳು ಏಪ್ರಿಲ್ ಒಂದರಿಂದ 4ರ ತನಕ ಪ್ರವಾಸ ನಡೆಸಲಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಪರಿಕಲ್ಪನೆಯಾದ ಭಾರತ ದರ್ಶನ ಕ್ಕಾಗಿ ನಮ್ಮ ದೇಶದ ಉದ್ದಗಲಕ್ಕೂ ಸಂಪೂರ್ಣವಾಗಿ ಪ್ರವಾಸ ಮಾಡಿ ಈ ಯೋಜನೆಯನ್ನು ಎಲ್ಲಾ ಕಾರ್ಯಕರ್ತರಿಗೆ ತಿಳಿಸುವ ವಿಚಾರವಾಗಿದ್ದು, ವಿವಿಧ ರಾಜ್ಯದ ಕಾರ್ಯಕರ್ತರು ದೇಶದ ಬೇರೆ ಬೇರೆ ಸ್ಥಳಗಳಿಗೆ ಭೇಟಿ ನೀಡಿ ಆ ರಾಜ್ಯದ ಪರಂಪರೆ ಮತ್ತು ವಿಚಾರಗಳನ್ನು ತಿಳಿಸಿಕೊಡುವ ಪ್ರಯತ್ನವಾಗಿರುತ್ತದೆ.
ಮೊದಲಿಗೆ ಕರ್ನಾಟಕ ರಾಜ್ಯವನ್ನು ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಆಯ್ಕೆ ಮಾಡಿದ್ದು, ಬೆಂಗಳೂರು ಸೇರಿದಂತೆ ಎಚ್ಎಎಲ್, ಬಿಎಎಲ್, ಕಬ್ಬನ್ ಪಾರ್ಕ್, ಕೆಲವು ಸ್ಟಾರ್ಟ್ಅಪ್ ಕಂಪನಿಗಳನ್ನು ಹಾಗೂ ಓಲಾ ಪ್ಲಾಂಟ್ ಕೃಷ್ಣಗಿರಿಗೆ ಭೇಟಿ ನೀಡಲಿದ್ದು, ನಂತರ ಹಲವು ಕಲಾತ್ಮಕ ಕಾರ್ಯಕ್ರಮಗಳಿಗೂ ಕರೆದೊಯ್ಯಲಾಗುತ್ತದೆ. ಹಂಪಿ ಮತ್ತು ಅಲ್ಲಿನ ಸುತ್ತಮುತ್ತ ಪ್ರದೇಶಗಳನ್ನು ನೋಡಲು, ನಂತರ ಪಾವಗಡದ ಸೌರಶಕ್ತಿ ಪ್ಲಾಂಟ್ ಗೆ ಭೇಟಿ ನೀಡಿ ಅದರ ವಿಚಾರಗಳನ್ನು ತಿಳಿಸಿಕೊಡಲಾಗುವುದು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ರಾಜ್ಯ ಯುವ ಮೋರ್ಚಾದ ರಾಜ್ಯ ಅಧ್ಯಕ್ಷರಾದ ಡಾ. ಸಂದೀಪ್ ಅವರು ಹಾಗೂ ಎಲ್ಲ ಪದಾಧಿಕಾರಿಗಳು ಮತ್ತು ಬೆಂಗಳೂರಿನ ಮೂರು ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಜೊತೆಗಿದ್ದು ಊಟದ ಮತ್ತು ವಸತಿ ವ್ಯವಸ್ಥೆಗಳನ್ನು ನೋಡಿಕೊಳ್ಳಲಿದ್ದಾರೆ. ಬೆಂಗಳೂರಿನಾದ್ಯಂತ ತಂಡೋಪತಂಡವಾಗಿ ಹಲವು ಪ್ರದೇಶಗಳಿಗೆ ಭೇಟಿಯನ್ನು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಕೊಡಗು ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಜಯ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆ ಸುರಕ್ಷಿತವಾಗಿ ತಾಯ್ನಾಡಿಗೆ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ನಲುಗಿದ ನೇಮಕ: ಶಿಕ್ಷಕರ ನೇಮಕಾತಿ: ತಕರಾರು ಅರ್ಜಿಗೆ ಹೈಕೋರ್ಟ್ ಪುರಸ್ಕಾರ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
