ಬ್ಲ್ಯಾಕ್ ಫಂಗಸ್ ಸೋಂಕಿನ ಲಕ್ಷಣ ಕಂಡುಬಂದರೆ ಸರ್ಕಾರಕ್ಕೆ ಮಾಹಿತಿ ನೀಡಿ: ಸಚಿವ ಕೆ.ಸುಧಾಕರ್
Team Udayavani, May 17, 2021, 7:35 PM IST
ಬೆಂಗಳೂರು : ರಾಜ್ಯದಲ್ಲಿ ಯಾರಿಗೇ ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಇದನ್ನು ಮುಚ್ಚಿಟ್ಟರೆ ಕಾನೂನು ಬಾಹಿರವಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬ್ಲ್ಯಾಕ್ ಫಂಗಸ್ ಕುರಿತು ವಿವಿಧ ವಿಭಾಗಗಳ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
ಬ್ಲ್ಯಾಕ್ ಫಂಗಸ್ ಕೆಲವರಲ್ಲಿ ಕಾಣಿಸಿಕೊಂಡಿದೆ. ಆದರೆ ಕೋವಿಡ್ ನಂತೆ ಈ ಸೋಂಕು ಹರಡುತ್ತದೆ ಎಂಬುದು ಸುಳ್ಳು. ಇದು ಕೊರೊನಾಗೆ ಸಮನಾದ ರೋಗವಲ್ಲ. ಕೋವಿಡ್ ಗೆ ಒಳಗಾದ ಅತಿಯಾದ ಮಧುಮೇಹವಿರುವವರು ಅಧಿಕ ಸ್ಟೀರಾಯಿಡ್ ಔಷಧಿ ಪಡೆಯುವವರಿಗೆ ಇದು ಬರುತ್ತದೆ. ಎಚ್ ಐವಿ, ಕ್ಯಾನ್ಸರ್, ಅಂಗಾಂಗ ಕಸಿ ಮಾಡಿಕೊಂಡಿರುವವರಿಗೆ ಬರುವ ಸಾಧ್ಯತೆ ಇರುತ್ತದೆ. ಇಂತಹವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದರು.
ಇದನ್ನೂ ಓದಿ :ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಿಸಲು ಸರ್ಕಾರ ಏನನ್ನೂ ಮಾಡ್ತಿಲ್ಲ : ಉಗ್ರಪ್ಪ
ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಶಿಲೀಂಧ್ರ ದಾಳಿ ಮಾಡಿ ಮೂಗಿಗೆ ಬರುತ್ತದೆ. ನಂತರ ಕಣ್ಣಿಗೆ ಹಾನಿ ಮಾಡುತ್ತದೆ. ಮೂಗಿಗೆ ಬಂದ ಕೂಡಲೇ ಎಚ್ಚರ ವಹಿಸಿ ಚಿಕಿತ್ಸೆ ಪಡೆಯಬೇಕು. ಆಸ್ಪತ್ರೆಗಳಲ್ಲಿ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರನ್ನು ಬಳಸುವುದರಿಂದ ಬರುತ್ತಿದೆ ಎಂಬ ಅಂದಾಜಿದೆ. ಇದು ಯಾವ ಮೂಲದಿಂದ ಬರುತ್ತಿದೆ ಎಂದು ಪತ್ತೆ ಮಾಡಲು ತಜ್ಞರಿಗೆ ಸೂಚಿಸಲಾಗಿದೆ. ಈ ಬಗ್ಗೆ ತಜ್ಞರು ವರದಿ ಸಲ್ಲಿಸಲಿದ್ದು, ವರದಿ ಆಧಾರದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುವುದು ಎಂದರು.
ಬೌರಿಂಗ್ ನಲ್ಲಿ ಚಿಕಿತ್ಸೆ
ಬ್ಲ್ಯಾಕ್ ಫಂಗಸ್ ಗೆ ಆಂಪೊಟೆರಿಸಿನ್ ಔಷಧಿ ನೀಡುತ್ತಿದ್ದು, ಒಬ್ಬ ರೋಗಿಗೆ 40-60 ವೈಲ್ ಗಳು ಬೇಕಾಗುತ್ತವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1,050 ರಷ್ಟು ವೈಲ್ ಗಳ ಮಂಜೂರಾತಿ ನೀಡಿದ್ದು, 450 ವೈಲ್ ಬಂದಿದೆ. ಜೊತೆಗೆ 20 ಸಾವಿರ ವೈಲ್ ಗೆ ಆದೇಶಿಸಲಾಗಿದೆ. ನಿನ್ನೆವರೆಗೆ 97 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ ಮೆಡಿಕಲ್ ಕಾಲೇಜು, ಕಲಬುರ್ಗಿ ಜಿಮ್ಸ್, ಹುಬ್ಬಳ್ಳಿ ಕಿಮ್ಸ್, ಮಂಗಳೂರು ವೆನ್ ಲಾಕ್, ಉಡುಪಿ ಕೆಎಂಸಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಆಯಾ ಜಿಲ್ಲೆಗಳ ಜನರು ಅಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು