ಬಿಎಂಟಿಸಿ ಡಿಪೋ ಮ್ಯಾನೇಜರ್ ಸಸ್ಪೆಂಡ್: ಸಿಹಿ ಹಂಚಿ ಎಎಪಿ ಸಂಭ್ರಮಾಚರಣೆ
ಯಾವುದೇ ಕಾರಣಕ್ಕೂ ನೌಕರರು ಆತ್ಮಹತ್ಯೆ ದಾರಿ ಹಿಡಿಯಬಾರದು
Team Udayavani, Sep 4, 2022, 5:23 PM IST
ಬೆಂಗಳೂರು: ನಗರದ ಆರ್ ಆರ್ ನಗರದ ಚನ್ನಸಂದ್ರ ಬಿಎಂಟಿಸಿ ಡಿಪೋ ಮ್ಯಾನೇಜರ್ ಮಲ್ಲಿಕಾರ್ಜುನ್ ಹಾಗೂ ಸಹಾಯಕ ಟ್ರಾಫಿಕ್ ಕಂಟ್ರೋಲರ್ ದಾಬೋಜಿ ರವರ ಅಮಾನತು ಆದೇಶವನ್ನು ಸಿಹಿ ಹಂಚುವ ಮೂಲಕ ಆಮ್ ಆದ್ಮಿ ಪಕ್ಷ ಚನ್ನಸಂದ್ರ ಡಿಪೋದಲ್ಲಿ ಆಚರಿಸಿದೆ.
ನಗರಾಧ್ಯಕ್ಷ ಮೋಹನ್ ದಾಸರಿ ಸುದ್ದಿಗಾರರೊಂದಿಗೆ ಮಾತನಾಡಿ “ಇತ್ತೀಚಿನ ವರ್ಷಗಳಲ್ಲಿ ಡಿಪೋ ಮ್ಯಾನೇಜರ್ ಹಾಗೂ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಅಧಿಕಾರಿಗಳ ಕಿರುಕುಳ- ಮಾನಸಿಕ ಹಿಂಸೆಯನ್ನು ತಡೆಯಲಾರದೆ ಸಾರಿಗೆ ನೌಕರರು ಆತ್ಮಹತ್ಯೆಗೆ ಶರಣಾಗುತ್ತಿದ್ದರು. ಇದೇ ರೀತಿ ಹೊಳೆ ಬಸಪ್ಪ ಎಂಬ ಚಾಲಕನು ಕಳೆದ 4 ದಿವಸಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ನಮ್ಮ ಸತತ ಹೋರಾಟದ ಫಲವಾಗಿ ಇದೀಗ ಸಂಸ್ಥೆಯು ಅಮಾನತು ಕ್ರಮವನ್ನು ತೆಗೆದುಕೊಂಡಿರುವುದು ಸಾರಿಗೆ ನೌಕರರು ಗಳಲ್ಲಿ ಆಶಾಭಾವನೆಯನ್ನು ಮೂಡಿಸಿದೆ. ಯಾವುದೇ ಕಾರಣಕ್ಕೂ ನೌಕರರು ಆತ್ಮಹತ್ಯೆಯ ದಾರಿಯನ್ನು ಹಿಡಿಯಬಾರದು. ಆಮ್ ಆದ್ಮಿ ಪಕ್ಷವು ಸದಾ ನೌಕರರ ಪರವಾಗಿ ಇರುತ್ತದೆ ” ಎಂದರು.
ಇದೇ ಸಂದರ್ಭದಲ್ಲಿ ಸಾರಿಗೆ ಸಚಿವ ಶ್ರೀರಾಮಲು ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ರಾಜೀನಾಮೆಯನ್ನು ನೀಡಿ ಸಾರಿಗೆ ಸಂಸ್ಥೆಯನ್ನು ಉಳಿಸಬೇಕೆಂದರು.
ಪಕ್ಷದ ಮುಖಂಡರುಗಳಾದ ಜಗದೀಶ್ ವಿ. ಸದಂ , ಸುರೇಶ್ ರಾಥೋಡ್, ಮುಖೇಶ್ ತೀರನ್ ನೌಕರರ ನಾಯಕರುಗಳಾದ ಜಗದೀಶ್ ,ರಾಮು ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’