ಕೋವಿಡ್ ಸಂದರ್ಭ ಕೆಲಸ ಮಾಡಿದ 3397 ಮಂದಿ ಬಿಎಂಟಿಸಿ ನೌಕರರಿಗೆ ಬಂಪರ್ ಗಿಫ್ಟ್
Team Udayavani, Jul 16, 2020, 9:09 PM IST
ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ ಬಿಎಂಟಿಸಿಯ 3397 ಮಂದಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಬಿಎಂಟಿಸಿ ಆಡಳಿತ ಮಂಡಳಿ ಮುಂದಾಗಿದೆ.
ರಾಜ್ಯದಲ್ಲಿ ಲಾಕ್ ಡೌನ್ ಹೇರಿದ್ದ ಸಂದರ್ಭ ಮೂರು ಪಾಳಿಯಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕೆಲಸ ನಿರ್ವಹಿಸಿದ ಒಟ್ಟು 3397 ಮಂದಿ ಸಿಬ್ಬಂದಿಗೆ ಸಂಬಳ ಹೊರತುಪಡಿಸಿ ದಿನ ಒಂದಕ್ಕೆ 250 ರೂಪಾಯಿಗಳಂತೆ ಬೋನಸ್ ನೀಡಲು ಬಿಎಂಟಿಸಿ ನಿರ್ಧರಿಸಿದೆ.
ಈ ಕುರಿತು ಬಿಎಂಟಿಸಿ ಅಧ್ಯಕ್ಷ ಎನ್ ಎಸ್ ನಂದೀಶ್ ರೆಡ್ಡಿ, ಎಂಡಿ ಶಿಖಾ ಅವರು ಸಭೆಯಲ್ಲಿ ಚರ್ಚಿಸಿ ಅನುಮೋದನೆ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ನಿರ್ದೇಶನದನ್ವಯ ಪೊಲೀಸ್, ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತರಿಗೆ ಸಾರಿಗೆ ಸೌಲಭ್ಯವವನ್ನು ಒದಗಿಸಿತ್ತು.
3,397 ನೌಕರರು 38,370 ದಿನಗಳು ಕರ್ತವ್ಯ ನಿರ್ವಹಿಸಿದ್ದು ಪ್ರತಿ ಒಂದು ದಿನಕ್ಕೆ ರೂ.250ರಂತೆ ಒಟ್ಟು ರೂ.95,92,500 ವಿಶೇಷ ಭತ್ಯೆಯನ್ನು ಪಾವತಿಸಲು ಅನುಮೋದನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್