ಬೊಲೆರೋ ಮತ್ತು ಕ್ರೂಸರ್ ಢಿಕ್ಕಿ- 15 ಜನರಿಗೆ ಗಾಯ
Team Udayavani, Dec 17, 2021, 1:46 PM IST
ದಾಂಡೇಲಿ: ಕ್ರೂಸರ್ ವಾಹನ ಹಾಗೂ ಬೊಲೆರೋ ವಾಹನ ಮುಖಾಮುಖಿ ಢಿಕ್ಕಿಯಾಗಿ ಎರಡು ವಾಹನದಲ್ಲಿದ್ದ ಒಟ್ಟು 15 ಜನರು ಗಾಯಗೊಂಡ ಘಟನೆ ದಾಂಡೇಲಿ ಸಮೀಪ ಅಂಬಿಕಾನಗರ-ಕುಳಗಿ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ದಾಂಡೇಲಿಯಿಂದ ಅಂಕೋಲಾ ಕಡೆಗೆ ಮದುವೆಗೆಂದು ಹೋಗುತ್ತಿದ್ದ ಕ್ರೂಸರ್ ವಾಹನ ಹಾಗೂ ಅಂಬಿಕಾನಗರದಿಂದ ದಾಂಡೇಲಿ ಕಡೆಗೆ ಬರುತ್ತಿದ್ದ ಕೆಪಿಸಿಗೆ ಸೇರಿದ್ದೆನ್ನಲಾದ ಬೊಲೆರೋ ವಾಹನ ಮುಖಾಮುಖಿ ಢಿಕ್ಕಿಯಾಗಿದೆ.
ಢಿಕ್ಕಿಯ ರಭಸಕ್ಕೆ ಕ್ರೂಸರ್ ಮೂರು ಪಲ್ಟಿಯಾಗಿ ಬಿದ್ದಿದೆ. ಬೊಲೆರೋದಲ್ಲಿದ್ದ ಅಂಬಿಕಾನಗರದ 4 ವರ್ಷದ ಸುಮೀತ್ ಜ್ಯೋತಿಬಾ ಪಾವಣೆ ಎಂಬ ಪಟ್ಟ ಬಾಲಕನಿಗೆ ಕಣ್ಣಿನ ಮೇಲೆ ಮತ್ತು ಕ್ರೂಸರಿನಲ್ಲಿದ್ದ ನಗರದ ಅಂಬೇವಾಡಿ ನಿವಾಸಿ ಸಂದೀಪ ಕೃಷ್ಣ ನಾಯ್ಕ ಇವರ ಕಾಲಿಗೆ ಗಂಭಿರ ಗಾಯವಾಗಿದ್ದು, ದಾಂಡೇಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕಳುಹಿಸಿಕೊಡಲಾಗಿದೆ.
ಗಾಯಗೊಂಡಿರುವ 13 ಜನರನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೀಡಾದ ಎರಡು ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನೆಗೆ ಅತಿಯಾದ ವೇಗದ ಚಾಲನೆಯೆ ಕಾರಣವೆಂದು ತಿಳಿದು ಹೇಳಲಾಗಿದೆ. ದಾಂಡೇಲಿ ಗ್ರಾಮೀಣ ಮತ್ತು ನಗರ ಠಾಣೆಯ ಪೊಲೀಸರು ಹಾಗೂ 112 ತುರ್ತು ವಾಹನದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!