ರೌಡಿಶೀಟರ್ ಬಾಂಬೆ ರವಿಗೆ ಮಂಗಳೂರು ಸಂಪರ್ಕ!
Team Udayavani, Dec 24, 2020, 6:00 AM IST
ಬೆಂಗಳೂರು : ಇತ್ತೀಚೆಗೆ ಜಯನಗರದ ನ್ಯಾಷನಲ್ ಕಾಲೇಜು ಸಮೀಪದಲ್ಲಿ ಟೆಂಪೋ ಟ್ರಾವೆಲರ್ನಲ್ಲಿ ಕುಳಿತು ನಿರ್ಮಾಪಕ ಸಹೋದರರು ಹಾಗೂ ಇಬ್ಬರು ರೌಡಿಶೀಟರ್ಗಳ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಜಯನಗರ ಠಾಣೆ ರೌಡಿಶೀಟರ್ ಬಾಂಬೆ ರವಿಗೂ ಮಂಗಳೂರಿಗೂ ಸಂಬಂಧ ಇರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
2011ರಲ್ಲಿ ಬಾಂಬೆ ರವಿ ಪ್ರಕರಣವೊಂದರಲ್ಲಿ ಬಳ್ಳಾರಿ ಜೈಲು ಸೇರಿದ್ದ. ಆಗ ಮಂಗಳೂರಿನ ಪ್ರಕರಣವೊಂದರಲ್ಲಿ ಕಿರಣ್ ಶೆಟ್ಟಿ ಹಾಗೂ ರಿಯಾಜ್ ಎಂಬವರು ಅದೇ ಜೈಲಿನಲ್ಲಿದ್ದು, ಪರಸ್ಪರ ಪರಿಚಯವಾಗಿದೆ. ಅನಂತರ ಮೂವರು ಒಟ್ಟಿಗೆ ಬಿಡುಗಡೆಯಾಗಿದ್ದರು. ಬಳಿಕ ಬಾಂಬೆ ರವಿಯು ಮಂಗಳೂರು ಭೂಗತ ಜಗತ್ತಿನ ಜತೆ ಗುರುತಿಸಿಕೊಂಡು ನೇರವಾಗಿ ಭೂಗತ ಪಾತಕಿ ಛೋಟಾ ಶಕೀಲ್ ತಂಡದಲ್ಲಿ ಕಾಣಿಸಿಕೊಂಡಿದ್ದ. ಅನಂತರ ನಿಧಾನವಾಗಿ ಬೆಂಗಳೂರಿನಲ್ಲಿ ತನ್ನ ಪ್ರಾಬಲ್ಯ ಮೆರೆಯಲು ಆರಂಭಿಸಿದ್ದಾನೆ.
2012ರಲ್ಲಿ ಮಂಗಳೂರಿನಲ್ಲಿ ರೌಡಿ ಶೀಟರ್ ರಶೀದ್ ಮಲಾರಿ ಸೂಚನೆ ಮೇರೆಗೆ ಕೆಲವು ಪ್ರಮುಖರ ಹತ್ಯೆಗೆ ಸಂಚು ರೂಪಿಸಿ, ಮಂಗಳೂರಿನಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಆಗ ವಿಚಾರಣೆಯಲ್ಲಿ ಆರೋಪಿಗಳು ಛೋಟಾ ಶಕೀಲ್ ತಂಡದಲ್ಲಿ ಸಕ್ರಿಯವಾಗಿರುವುದು ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?