ಬೊಮ್ಮಾಯಿ ಬಸವ ಚಿಂತಕರಲ್ಲ, ಮೋಸಗಾರ ಸಿಎಂ : ರೇವುನಾಯಕ ಬೆಳಮಗಿ
Team Udayavani, Feb 8, 2023, 4:29 PM IST
ವಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನ ಚಿಂತನೆ ಹೊಂದಿದ್ದಾರೆ. ಎಲ್ಲರಿಗೂ ನ್ಯಾಯ ಕೊಟ್ಟು ಸಮಾನತೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಇತರರಂತೆ ಮೋಸಗಾರ ಸಿಎಂ ಆಗಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದರು.
ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ನಾಟಕ ಇತ್ತೀಚೆಗೆ ಸೇಡಂ ಪಟ್ಟಣದಲ್ಲಿ ಬಿಜೆಪಿ ಮಾಡಿತು. ನೂರಾರು ವರ್ಷಗಳಿಂದ ತಾಂಡಾಗಳಲ್ಲಿ ನಮ್ಮ ಲಂಬಾಣಿ ಜನ ಬದುಕುತ್ತಿದ್ದಾರೆ. ಪೂರ್ವಜರ ಆಸ್ತಿಯನ್ನು ಹೊಂದಿದ್ದಾರೆ. ಇಂಥಹ ಸಮುದಾಯಕ್ಕೆ ಪ್ರಧಾನಿ ಮೋದಿ ಮೂಲಕ ಹಕ್ಕು ಪತ್ರ ಕೊಡಿಸಿದ್ದು ಹಾಸ್ಯಾಸ್ಪದವಾಗಿದೆ ಎಂದರು.
ನಮ್ಮ ಜನಗಳು ಸ್ವಂತ ಕಟ್ಟಿಕೊಂಡ ಮನೆಗಳಿಗೆ ಹಕ್ಕು ಪತ್ರ ವಿತರಿಸಿದ್ದು ಮಹಾನಾಟಕ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆ ದೃಷ್ಠಿಯಲ್ಲಿ ಇಟ್ಟುಕೊಂಡು ಬಿಜೆಪಿ ಬಂಜಾರಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ನಾನು ಶಾಸಕನಾಗಿ ಮಂತ್ರಿಯಾದಾಗ ಉತ್ತಮ ಆಡಳಿತ ನೀಡಿದ್ದೆ. ಭ್ರಷ್ಟಾಚಾರ ಮಾಡಲಿಲ್ಲ, ಕಮಿಷನ್ ಕೇಳಲಿಲ್ಲ, ಜನರಿಗೆ ಮೋಸ ಮಾಡಲಿಲ್ಲ, ಸುಳ್ಳು ಹೇಳಲಿಲ್ಲ. ಆದರೂ ಬಿಜೆಪಿ ನಾಯಕರು ನನಗೆ ಟಿಕೆಟ್ ಕಟ್ ಮಾಡುವ ಮೂಲಕ ಮೋಸ ಮಾಡಿದರು ಎಂದು ನೋವು ಹೇಳಿಕೊಂಡ ಬೆಳಮಗಿ, ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ 371 (ಜೆ) ಕಲಂ ಜಾರಿಗೆ ತರುವ ಮೂಲಕ ಈ ಭಾಗದ ಯುವಜನತೆಗೆ ಉದ್ಯೋಗ ಹಾಗೂ ಉನ್ನತ ಶಿಕ್ಷಣ ಪಡೆಯಲು ಸಹಕಾರ ಮಾಡಿದ್ದಾರೆ. ಖರ್ಗೆ ಕೊಡುಗೆ ಹೇಳಲು ದಿನವೇ ಬೇಕಾಗುತ್ತದೆ ಎಂದರು.
ಮಾಜಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಾಬುರಾವ ಚವ್ಹಾಣ, ಶಾಸಕ ಪ್ರಿಯಾಂಕ್ ಖರ್ಗೆ, ಎಂ.ವೈ.ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಮಹೆಮೂದ್ ಸಾಹೇಬ, ನಾಗರೆಡ್ಡಿಗೌಡ ಪಾಟೀಲ ಕರದಾಳ, ಮಾಪಣ್ಣ ಗಂಜಿಗೇರಿ, ಶಂಭುಲಿಂಗ ಗುಂಡಗುರ್ತಿ, ವೀರಣ್ಣಗೌಡ ಪರಸರೆಡ್ಡಿ, ಶ್ರೀನಿವಾಸ ಸಗರ ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ