ಬೂತ್ ವಿಜಯ ಅಭಿಯಾನ ಯಶಸ್ವಿ: ಸಚಿವ ಕೋಟ
Team Udayavani, Jan 15, 2023, 12:24 AM IST
ಬೆಂಗಳೂರು: ಬೂತ್ ವಿಜಯ ಅಭಿಯಾನವನ್ನು ಅತ್ಯಂತ ಆತ್ಮ ವಿಶ್ವಾಸದಿಂದ ಪೂರ್ಣಗೊಳಿ ಸಲಾಗಿದ್ದು, ಜ.2ರಿಂದ 12ರ ವರೆಗೆ ಆಯೋಜಿಸಿದ್ದ ಈ ಅಭಿಯಾನದ ಯಶಸ್ಸಿನ ಮೂಲಕ ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಬಿಜೆಪಿ ಬೂತ್ ವಿಜಯ ಅಭಿಯಾನದ ಸಂಚಾಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಮನೆಯಲ್ಲಿ ಬಿಜೆಪಿ ಧ್ವಜ ಹಾರಿಸಲಾಗಿದೆ. ಪೇಜ್ ಪ್ರಮುಖರನ್ನು ನಿಯುಕ್ತಿ ಮಾಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಾಜಿನಗರದಲ್ಲಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಂಗಳೂರಿನಲ್ಲಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಬೂತ್ ವಿಜಯ ಅಭಿಯಾನ ಪ್ರಾರಂಭಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಗದಗದಲ್ಲಿ ಜರಗಿದ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಚಿವರು, ಸಂಸದರು, ಶಾಸಕರು ಸಹಿತ ಅಭಿಯಾನ ನಡೆಸಿದ್ದು, ಕಟ್ಟಕಡೆಯ ಕಾರ್ಯಕರ್ತರಲ್ಲಿ ಇದು ಸಂಚಲನ ಮೂಡಿಸಿದೆ. ಬೂತ್ ಗೆಲುವಿನ ಮೂಲಕ ರಾಜ್ಯದಲ್ಲಿ ಬಿಜೆಪಿ ಗೆಲುವು ಖಂಡಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
51,872 ಬೂತ್ ಸಮಿತಿ ರಚನೆ ಮಾಡಿ ದ್ದೇವೆ. 13,21,792 ಪೇಜ್ ಪ್ರಮುಖರ ನೇಮಕ ಮಾಡಲಾಗಿದೆ. ಪ್ರತಿ ಪುಟವೂ 30 ಮತದಾರರನ್ನು ಒಳಗೊಂಡಿರುತ್ತದೆ. ಕಾರ್ಯಕರ್ತರಿಗಾಗಿ 50,260 ವಾಟ್ಸಾéಪ್ ಗ್ರೂಪ್ ರಚಿಸಲಾಗಿದೆ. 32 ಲಕ್ಷದ 883 ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸಿದ್ದೇವೆ. ಗಲ್ಲಿಗಲ್ಲಿ, ಮನೆಮನೆಗಳ ಮೇಲೆ ಬಿಜೆಪಿ ಬಾವುಟ ಹಾರುತ್ತಿದೆ. 15,93,848 ಕಾರ್ಯಕರ್ತರ ಶ್ರಮ ಇದರಲ್ಲಿತ್ತು ಎಂದರು.
ಗುರಿ ನೀಡಿರುವ ಅಮಿತ್ ಶಾ
ಸಹ ಸಂಚಾಲಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಕೇಂದ್ರ ಸಚಿವ ಅಮಿತ್ ಶಾ ಅವರು ಬೂತ್ ಗೆಲುವಿನ ಮೂಲಕ ರಾಜ್ಯದಲ್ಲಿ ಗೆಲುವಿನ ಗುರಿ ನೀಡಿ¨ªಾರೆ. ಪಕ್ಷದ ಎಲ್ಲ ನಾಯಕರು ಒಂದು ಬೂತ್ ಗೆ ಹೋಗಿ ಅಲ್ಲಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರೂ ಇದರಲ್ಲಿ ಭಾಗವಹಿಸಿದ್ದು ವಿಶೇಷ. ಬೂತ್ ಅಭಿಯಾನ ಯಶಸ್ಸಿಗಾಗಿ 65,320 ಸಭೆಗಳನ್ನು ಮಾಡಿದ್ದೇವೆ. 615 ವೆಬೆಕ್ಸ್ ಸಭೆಗಳನ್ನೂ ನಡೆಸಲಾಗಿತ್ತು. ಈ ಮೂಲಕ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಳ್ಳುವಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ