Davis Cup: ವಿದಾಯಕ್ಕೆ ಬೋಪಣ್ಣ ನಿರ್ಧಾರ


Team Udayavani, Jun 22, 2023, 6:19 AM IST

ROHAN BOPANNA

ಹೊಸದಿಲ್ಲಿ: ಭಾರತದ ಅಗ್ರಮಾನ್ಯ ಡಬಲ್ಸ್‌ ಆಟಗಾರ ರೋಹನ್‌ ಬೋಪಣ್ಣ ಮುಂದಿನ ಸೆಪ್ಟಂಬರ್‌ನಲ್ಲಿ ಡೇವಿಸ್‌ ಕಪ್‌ ಟೆನಿಸ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ತವರಾದ ಬೆಂಗಳೂರಿನಲ್ಲೇ ವಿದಾಯ ಪಂದ್ಯ ಆಡಬೇಕೆಂಬ ಅಭಿಲಾಷೆ ಯನ್ನೂ ವ್ಯಕ್ತಪಡಿಸಿದ್ದಾರೆ.

43 ವರ್ಷದ ರೋಹನ್‌ ಬೋಪಣ್ಣ ಮೂಲತಃ ಕೊಡಗಿನವರು. ಹೀಗಾಗಿ ತವರಾದ ಕರ್ನಾಟಕದಲ್ಲೇ ಅಂತಿಮ ಪಂದ್ಯ ಆಡಬೇಕೆನ್ನುವುದು ಅವರ ಆಸೆ. ಆದರೆ ಅವರ ಈ ಬಯಕೆ ಈಡೇರುವ ಸಾಧ್ಯತೆ ಇಲ್ಲ. ಸೆಪ್ಟಂಬರ್‌ನಲ್ಲಿ ಮೊರೊಕ್ಕೊ ವಿರುದ್ಧ ಭಾರತ ವಿಶ್ವ ಗ್ರೂಪ್‌ ಸೆಕೆಂಡ್‌ ಟೈ ಡೇವಿಸ್‌ ಕಪ್‌ ಪಂದ್ಯ ಆಡುವುದಾದರೂ ಇದರ ಆತಿಥ್ಯವನ್ನು ಎಐಟಿಎ ಈಗಾಗಲೇ ಉತ್ತರಪ್ರದೇಶಕ್ಕೆ ನೀಡಿದೆ.

ರೋಹನ್‌ ಬೋಪಣ್ಣ ಅವರ ಡೇವಿಸ್‌ ಕಪ್‌ ಅನುಭವ 2 ದಶಕಗಳಿಗೂ ಮಿಗಿಲಾದದ್ದು. ಅವರು 2002ರಲ್ಲಿ ಡೇವಿಸ್‌ ಕಪ್‌ಗೆ ಪದಾ ರ್ಪಣೆ ಮಾಡಿದ್ದರು. ಎಟಿಪಿ ಟೂರ್‌ಗಳಲ್ಲಿ ಸಕ್ರಿಯರಾಗಿದ್ದು, ಭಾರತವನ್ನು 32 ಸ್ಪರ್ಧೆಗಳಲ್ಲಿ ಪ್ರತಿನಿಧಿಸಿದ್ದಾರೆ. 12 ಸಿಂಗಲ್ಸ್‌ ಮತ್ತು 10 ಡಬಲ್ಸ್‌ ಪಂದ್ಯಗಳಲ್ಲಿ ಗೆಲುವು ಕಂಡಿದ್ದಾರೆ. ಲಿಯಾಂಡರ್‌ ಪೇಸ್‌ 58 ಪಂದ್ಯಗಳಲ್ಲಿ ಆಡಿರುವುದು ಭಾರ ತೀಯ ದಾಖಲೆ. ಅನಂತರದ ಸ್ಥಾನ ದಲ್ಲಿರುವವರು ಜೈದೀಪ್‌ ಮುಖರ್ಜಿ (43), ರಾಮನಾಥನ್‌ ಕೃಷ್ಣನ್‌ (43), ಪ್ರೇಮ್‌ಜಿತ್‌ ಲಾಲ್‌ (41), ಆನಂದ್‌ ಅಮೃತ್‌ರಾಜ್‌ (39), ಮಹೇಶ್‌ ಭೂಪತಿ (35) ಮತ್ತು ವಿಜಯ್‌ ಅಮೃತ್‌ರಾಜ್‌ (32).

ಬೆಂಗಳೂರಿಗೆ ಆತಿಥ್ಯ ಅಸಾಧ್ಯ
“ಸೆಪ್ಟಂಬರ್‌ನಲ್ಲಿ ನಾನು ಕೊನೆಯ ಡೇವಿಸ್‌ ಕಪ್‌ ಪಂದ್ಯವನ್ನು ಆಡಬೇಕೆಂಬ ನಿರ್ಧಾರಕ್ಕೆ ಬಂದಿದ್ದೇನೆ. 2002ರಿಂದಲೂ ಆಡುತ್ತಿರುವ ನನ್ನ ಬಯಕೆಯೆಂದರೆ ತವರಾದ ಬೆಂಗಳೂರಿನಲ್ಲಿ ವಿದಾಯ ಪಂದ್ಯವನ್ನು ಆಡುವುದು. ಭಾರತದ ಎಲ್ಲ ಆಟಗಾರರೊಂದಿಗೆ ಈ ಕುರಿತು ಮಾತಾ ಡಿದ್ದೇನೆ. ಕರ್ನಾಟಕ ರಾಜ್ಯ ಲಾನ್‌ ಟೆನಿಸ್‌ ಅಸೋಸಿಯೇಶನ್‌ ಕೂಡ ಸಕರಾತ್ಮಕವಾಗಿ ಸ್ಪಂದಿಸಿದೆ. ಆದರೆ ಭಾರತೀಯ ಟೆನಿಸ್‌ ಅಸೋಸಿಯೇಶನ್‌ ಯಾವ ನಿರ್ಧಾರಕ್ಕೆ ಬರಲಿದೆ ಎಂಬುದನ್ನು ಕಾದು ನೋಡಬೇಕು’ ಎಂದು ಬೋಪಣ್ಣ ಹೇಳಿದರು.

ಆದರೆ ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ (ಎಐಟಿಎ) ಮಹಾ ಕಾರ್ಯದರ್ಶಿ ಅನಿಲ್‌ ಧುಪರ್‌ ಪ್ರಕಾರ, ಮೊರೊಕ್ಕೊ ಎದುರಿನ ಡೇವಿಸ್‌ ಕಪ್‌ ಪಂದ್ಯಾವಳಿಯ ಆತಿಥ್ಯವನ್ನು ಬೆಂಗಳೂರಿಗೆ ವರ್ಗಾಯಿಸುವುದು ಕಷ್ಟ.

ಎಟಿಪಿ ಟೂರ್‌ ಕುರಿತು…
ಎಟಿಪಿ ಟೂರ್‌ನಲ್ಲಿ ಮುಂದುವರಿಯುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೋಹನ್‌ ಬೋಪಣ್ಣ, “ನಾನು ಎಟಿಪಿ ಟೂರ್‌ಗಳಲ್ಲಿ ಆಡದೇ ಹೋದರೆ ಈ ಸ್ಥಾನ ಮತ್ತೂಬ್ಬ ಭಾರತೀಯ ಆಟಗಾರನಿಗೆ ಲಭಿಸುತ್ತದೆಂಬ ಖಾತ್ರಿ ಇಲ್ಲ. ಉದಾಹರಣೆಗೆ ವಿಂಬಲ್ಡನ್‌. ನನ್ನ ಸ್ಥಾನ ಇನ್ಯಾರೋ ವಿದೇಶಿ ಆಟಗಾರನ ಪಾಲಾಗುತ್ತದೆ. ಆದರೆ ಡೇವಿಸ್‌ ಕಪ್‌ನಿಂದ ದೂರ ಸರಿದರೆ ಮತ್ತೋರ್ವ ಭಾರತದ ಟೆನಿಸಿಗನಿಗೇ ಅವಕಾಶ ಸಿಗುತ್ತದೆ’ ಎಂದರು.

ಟಾಪ್ ನ್ಯೂಸ್

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.