ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಮುಂದಾದ ಬಾಷ್ ಕಂಪನಿ : ಡಿಸಿಎಂ
Team Udayavani, May 29, 2021, 8:45 PM IST
ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಕೆಟ್ಟು ನಿಂತಿರುವ ವೆಂಟಿಲೇಟರ್ʼಗಳನ್ನು ಉಚಿತವಾಗಿ ರಿಪೇರಿ ಮಾಡಿಕೊಡಲು ಬಾಷ್ ಕಂಪನಿ ಮುಂದೆ ಬಂದಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರದಂದು ಬಾಷ್ ಉಪಾಧ್ಯಕ್ಷ ರಮೇಶ ಸಾಲಿಗ್ರಾಮ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದ ಅವರು, ಆ ಕಂಪನಿಯೇ ಸ್ವ ಇಚ್ಛೆಯಿಂದ ಮುಂದೆ ಬಂದು ವೆಂಟಿಲೇಟರ್ ರಿಪೇರಿ ಮಾಡಿಕೊಡುವುದಾಗಿ ಹೇಳಿದೆ. ಈ ಕಾರಣಕ್ಕೆ ಬಾಷ್ ಕಂಪನಿಯನ್ನು ಶ್ಲಾಘಿಸುವುದಾಗಿ ಹೇಳಿದರು.
ಸರಕಾರಿ ಆಸ್ಪತ್ರೆಗಳಲ್ಲಿ ಇರುವ ಅನೇಕ ವೆಂಟಿಲೇಟರ್ʼಗಳು ಕೆಟ್ಟಿವೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಕೂಡ ಬಂದಿವೆ. ಹೀಗಾಗಿ ಸಿಎಸ್ʼಆರ್ ನೆರವಿನಿಂದ ವೆಂಟಿಲೇಟರ್ ರಿಪೇರಿ ಮಾಡಿಕೊಡಲಾಗುವುದು ಎಂದು ರಮೇಶ್ ಭರವಸೆ ನೀಡಿದರು.
ಇದನ್ನೂ ಓದಿ :10 ದಿನಗಳಲ್ಲಿ ರೈತರಿಗೆ 565 ಕೋಟಿ ರೂ. ಬಾಕಿ ಪಾವತಿ : ಎಂ.ಟಿ.ಬಿ.ನಾಗರಾಜ್
ಬಾಷ್ ನಿರ್ಧಾರ ಸ್ವಾಗತಾರ್ಹ. ವೆಂಟಿಲೇಟರ್ ಗಳು ಎಷ್ಟು, ಎಲ್ಲಿ ಕೆಟ್ಟಿವೆ ಎಂಬುದನ್ನು ಪತ್ತೆ ಮಾಡಿ ನಂತರ ಕಂಪನಿಗೆ ವಹಿಸಲಾಗವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…