ಕೃಷಿ ಸಾಲ ಮಂಜೂರಾತಿಗೆ ಲಂಚ: ಬ್ಯಾಂಕ್ ಮ್ಯಾನೇಜರ್ಗೆ ಜೈಲು ಶಿಕ್ಷೆ
Team Udayavani, Dec 7, 2022, 11:14 PM IST
ಬೆಂಗಳೂರು: ಕೃಷಿ ಸಾಲ ಮಂಜೂರು ಮಾಡಲು ಇಬ್ಬರು ಕೃಷಿಕರಿಂದ ಲಂಚಕ್ಕೆ ಬೇಡಿಕೆ ಇಟ್ಟ ಬ್ಯಾಂಕ್ ಮ್ಯಾನೇಜರ್ಗೆ ನಗರದ 48ನೇ ಸಿಬಿಐ ವಿಶೇಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿದೆ.
ಚೋಳೂರು ಪ್ರಗತಿ ಗ್ರಾಮೀಣ ಬ್ಯಾಂಕ್ನ ಶಾಖಾಧಿಕಾರಿ ಶ್ರೀಧರ್ ಶಿಕ್ಷೆಗೊಳಗಾದ ಬ್ಯಾಂಕ್ ಮ್ಯಾನೇಜರ್. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೆಪಲ್ಲಿ ತಾಲೂಕಿನ ಚೋಳೂರು ಗ್ರಾಮದ ಸಿ.ವಿ. ರವಿ ಎಂಬ ಕೃಷಿಕ 1 ಲಕ್ಷ ರೂ. ಹಾಗೂ ಆತನ ಸ್ನೇಹಿತ ನಾರಾಯಣ ರೆಡ್ಡಿ 40 ಸಾವಿರ ರೂ. ಸಾಲಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಬ್ಯಾಂಕ್ ಮ್ಯಾನೇಜರ್ ಶ್ರೀಧರ್ ಸಾಲ ಮಂಜೂರು ಮಾಡಲು 7,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಈ ಬಗ್ಗೆ ರವಿ ಚಿಕ್ಕಬಳ್ಳಾಪುರ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಜತೆಗೆ ಲಂಚಕ್ಕೆ ಬೇಡಿಕೆ ಇಟ್ಟ ಆಡಿಯೋ ಸಾಕ್ಷ್ಯ ಕೂಡ ಲಗತ್ತಿಸಿದ್ದರು. ಬಳಿಕ ಲೋಕಾಯುಕ್ತ ಪೊಲೀಸರು, ದೂರುದಾರ ರವಿಯಿಂದ ಆರೋಪಿ ಹಣ ಪಡೆಯುವಾಗ ದಾಳಿ ನಡೆಸಿ ಬಂಧಿಸಿದ್ದರು. ಇದೇ ವೇಳೆ ಆರೋಪಿ ಬಳಿಯಿದ್ದ ನಿರ್ದಿಷ್ಟ ಠೇವಣಿ ರಶೀದಿ ಹಾಗೂ ಇತರ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸಿಬಿಐ ಪರ ಸರಕಾರಿ ಅಭಿಯೋಜಕ ಶಿವಾನಂದ ಪಿರ್ಲೆ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ