ಕಲಿಕೆಯ ಅಂತರ ಸರಿದೂಗಿಸಲು ಬ್ರಿಡ್ಜ್ ಕೋರ್ಸ್
ಆನ್ಲೈನ್- ನೇರ ತರಗತಿ ವಿದ್ಯಾರ್ಥಿಗಳ ನಡುವೆ ಅಸಮತೋಲನ
Team Udayavani, Mar 3, 2021, 6:50 AM IST
ಬೆಂಗಳೂರು: ಆನ್ಲೈನ್ ಮತ್ತು ನೇರ ತರಗತಿಗಳಿಂದಾಗಿ ಸೃಷ್ಟಿಯಾಗಿರುವ ಕಲಿಕಾ ಅಂತರ ಸರಿದೂಗಿಸಲು ಮತ್ತು ಶಾಲಾ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಬ್ರಿಡ್ಜ್ ಕೋರ್ಸ್ ನಡೆಸಲು ನಿರ್ಧರಿಸಿದೆ.
ನಿತ್ಯ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪಠ್ಯ ವಿಷಯ ಹೆಚ್ಚು ಬೋಧನೆ ಮಾಡಲಾಗುತ್ತಿದೆ ಮತ್ತು ಸಮರ್ಪಕ ಕಲಿಕೆಗೆ ಇದರಿಂದ ಅನುಕೂಲ ವಾಗುತ್ತಿದೆ. ಆದರೆ ಆನ್ಲೈನ್ ಮತ್ತು ಪೂರ್ವಮುದ್ರಿತ ವೀಡಿಯೋ ತರಗತಿಗಳಲ್ಲಿ ಕಲಿಕೆ ಮುಂದುವರಿಸುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಸಮಗ್ರತೆ ಸಿಗುತ್ತಿಲ್ಲ.
ಇದರಿಂದ ಈ ಎರಡು ವಿಧಾನಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಲ್ಲಿ ಕಲಿಕೆಯ ಅಂತರ ಸೃಷ್ಟಿಯಾಗಿದೆ. ಇದನ್ನು ಸರಿದೂಗಿಸಲು ಬ್ರಿಡ್ಜ್ ಕೋರ್ಸ್ ನಡೆಸಲಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.
ಸಮಗ್ರ ಶಿಕ್ಷಣದ ಮೂಲಕ ಬ್ರಿಡ್ಜ್ ಕೋರ್ಸ್
ಕೇರಳ, ಮಹಾರಾಷ್ಟ್ರದ ಗಡಿ ಭಾಗ ಮತ್ತು ಬಿಬಿಎಂಪಿ ವ್ಯಾಪ್ತಿಯ ಶಾಲೆಗಳ ವಿನಾ ಬೇರೆಲ್ಲ ಕಡೆ 6ರಿಂದ 10ನೇ ತರಗತಿಗಳು ಆರಂಭವಾಗಿವೆ. ಪರೀಕ್ಷೆ ಮತ್ತು ಮೌಲ್ಯ ಮಾಪನವೂ ಆರಂಭವಾಗಿದೆ. ಉಳಿದ 1ರಿಂದ 5ನೇ ವರೆಗಿನ ತರಗತಿಗಳ ಆರಂಭದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
ಕಲಿಕಾ ಅಂತರ ಗುರುತಿಸುವ ಕಾರ್ಯ ಮೌಲ್ಯಮಾಪನ ಮತ್ತು ಘಟಕ ಪರೀಕ್ಷೆಗಳಲ್ಲಿ ನಡೆಯಲಿದ್ದು, ಅದರ ಆಧಾರದಲ್ಲಿ ಬ್ರಿಡ್ಜ್ ಕೋರ್ಸ್ ನೀಡಲಿದ್ದೇವೆ. ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ -ಕರ್ನಾಟಕ ಇದರ ರಾಜ್ಯ ಯೋಜನಾ ನಿರ್ದೇಶಕರ ಮಾರ್ಗದರ್ಶನದಲ್ಲಿ ಪಠ್ಯಕ್ರಮ ಸಿದ್ಧಪಡಿಸಲಾಗುತ್ತದೆ. ಕಲಿಕಾ ಅಂತರ ಎಷ್ಟಿದೆ ಮತ್ತು ಯಾವ ಪಠ್ಯಗಳು ಅಗತ್ಯವಿವೆ ಎಂಬುದನ್ನು ಗಮನಿಸಲಾಗುತ್ತದೆ. ಭಾಷಾ ವಿಷಯವಾಗಿ ವ್ಯಾಕರಣ; ಇಂಗ್ಲಿಷ್ ಮತ್ತು ಗಣಿತ ವಿಷಯಗಳನ್ನು ಪ್ರಧಾನ
ವಾಗಿರಿಸಿ ಬ್ರಿಡ್ಜ್ ಕೋರ್ಸ್ ಸಿದ್ಧಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕಲಿಕೆ ಅಂತರ
ಆನ್ಲೈನ್ ಮತ್ತು ಪೂರ್ವ ಮುದ್ರಿತ ವೀಡಿಯೋಗಳ ಬೋಧನ ತರಗತಿ ದಿನಕ್ಕೆ ಗರಿಷ್ಠ 2ರಿಂದ 3 ಅವಧಿ ಇರುತ್ತದೆ. ಆದರೆ ನೇರ ತರಗತಿಗಳಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ತಲಾ ಮೂರು- ಒಟ್ಟು 6 ಅವಧಿಯಲ್ಲಿ ಪಾಠ ನಡೆಯುತ್ತದೆ. ಹೀಗಾಗಿ ಆನ್ಲೈನ್ ವಿದ್ಯಾರ್ಥಿಗಳಿಗೆ ಎಷ್ಟೋ ವಿಷಯಗಳಲ್ಲಿ ಸಮಗ್ರ ಬೋಧನೆ ಸಿಗುವುದಿಲ್ಲ. ದಿನಪೂರ್ತಿ ಆನ್ಲೈನ್ ತರಗತಿಯಲ್ಲಿ ಪಾಲ್ಗೊಳ್ಳುವುದು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ. ಹೀಗಾಗಿ ಕಲಿಕೆ ಅಂತರ ಸೃಷ್ಟಿ ಸಹಜ. ಇದರ ನಿವಾರಣೆಗೆ ಬ್ರಿಡ್ಜ್ ಕೋರ್ಸ್ ಅನಿವಾರ್ಯ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಕ್ಕಳಲ್ಲಿ ಕಲಿಕೆಯ ಅಂತರ ಸಾಕಷ್ಟಿರುವುದು ಖಾಸಗಿ ಸಂಶೋಧನೆಗಳಿಂದ ತಿಳಿದು ಬಂದಿದೆ. ಅದರ ನಿವಾರಣೆಗಾಗಿ ಬ್ರಿಡ್ಜ್ ಕೋರ್ಸ್ ನಡೆಸಲಿದ್ದೇವೆ. ಸಮಗ್ರ ಶಿಕ್ಷಣ ವಿಭಾಗವು ಬ್ರಿಡ್ಜ್ ಕೋರ್ಸ್ ಸಿದ್ಧಪಡಿಸಲಿದ್ದು, ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಮೌಲ್ಯಮಾಪನ ಆರಂಭಿಸಲಿದ್ದೇವೆ.
-ವಿ. ಅನುºಕುಮಾರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ