ಭಾರೀ ಗಾಳಿ-ಮಳೆ ಪ್ರವಾಹಕ್ಕೆ ಕೊಚ್ಚಿ ಹೋದ ಬಿಹಾರದ ಸೇತುವೆ, ದುರಸ್ತಿ ಕಾಮಗಾರಿ ಶುರು
ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಿಂದ ನೂರಾರು ಜನರು ತೊಂದರೆ ಅನುಭವಿಸುವಂತಾಗಿತ್ತು
Team Udayavani, Jun 2, 2021, 8:37 AM IST
ಪಾಟ್ನಾ:ಬಿಹಾರದ ಪಾಟ್ನಾ ನಗರದ ಸಮೀಪದಲ್ಲಿರುವ ದಾನಾಪುರ್ ಪಟ್ಟಣದ ಪಿಪಾ ಸೇತುವೆ ಎರಡು ತುಂಡಾದ ಪರಿಣಾಮ, ಭಾರೀ ಗಾಳಿ ಮಳೆಯಿಂದಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಈ ಪಿಪಾ ಸೇತುವೆ ಡಿಯಾರಾ ಜನರ ಜೀವನಾಡಿ ಎಂದು ಪರಿಗಣಿಸಲಾಗುತ್ತಿತ್ತು. ಈ ಭಾಗದ ಜನರು ಸೇತುವೆಯ ನೆರವಿನಿಂದ ಪಾಟ್ನಾಕ್ಕೆ ಆಗಮಿಸುತ್ತಿದ್ದರು. ಸೇತುವೆ ಕೊಚ್ಚಿಕೊಂಡು ಹೋದ ಹಿನ್ನೆಲೆಯಲ್ಲಿ ಆರು ಪಂಚಾಯ್ತಿಗಳನ್ನು ಸಂಪರ್ಕಿಸುವ ದಾನಾಪುರ, ಡಯಾರಾ ಮಾರ್ಗ ಸಂಪೂರ್ಣವಾಗಿ ಬಂದ್ ಆದಂತಾಗಿದೆ ಎಂದು ವರದಿ ವಿವರಿಸಿದೆ.
ಸೇತುವೆ ದುರಸ್ತಿ ಕೆಲಸವನ್ನು ಜೂನ್ 1ರಿಂದ 7ರವರೆಗೆ ನಿಗದಿಪಡಿಸಲಾಗಿದೆ ಎಂದು ಬಿಹಾರ ನವ ನಿರ್ಮಾಣ್ ನಿಗಮ್ ಲಿಮಿಟೆಡ್ ನ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಖುರ್ಷಿದ್ ತಿಳಿಸಿದ್ದು, ಈ ಬಗ್ಗೆ ಮೇ 26ರಂದು ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಚಂಡಮಾರುತದಿಂದಾಗಿ ಕುಛ್ ಪ್ರದೇಶದಲ್ಲಿದ್ದ ಮನೆಯ ಮೇಲ್ಛಾವಣಿಗಳು ಹಾರಿ ಹೋಗಿದ್ದವು, ಅಲ್ಲದೇ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಿಂದ ನೂರಾರು ಜನರು ತೊಂದರೆ ಅನುಭವಿಸುವಂತಾಗಿತ್ತು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ