BSY ಭ್ರಷ್ಟಾಚಾರದ CD ಮಾತ್ರವಲ್ಲ; ಸಭ್ಯರು ನೋಡಲಾಗದ ಸಿ.ಡಿ ಕೂಡ ಇವೆ!: ಯತ್ನಾಳ್ ಹೊಸ ಬಾಂಬ್

ಅವರ ಮನೆಯಲ್ಲೇ ಸಿ.ಡಿ ಆಗಿವೆ, ಸಿಡಿ ಮಾಡಿದ್ದು ಮೊಮ್ಮಗ; ಬಿಎಸ್‌ವೈ ಕುಟುಂಬಕ್ಕಾಗಿ ಬಿಜೆಪಿ ಕಟ್ಟಿಲ್ಲ

Team Udayavani, Jan 14, 2021, 7:53 PM IST

YADIYURAPPA

ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಿಎಸ್‌ವೈ ಭ್ರಷ್ಟಾಚಾರದ ಸಿ.ಡಿ ಅಷ್ಟೇ ಅಲ್ಲ, ಸಭ್ಯರು ನೋಡಲಾಗದಂತಹ ಸಿ.ಡಿ ಇವೆ. ಆ ಸಿಡಿ ಇಟ್ಟುಕೊಂಡೇ ಇಬ್ಬರು ಈಗ ಮಂತ್ರಿಯಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

ಕೂಡಲಸಂಗಮದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಆರಂಭಗೊಂಡ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಣ್ಣಿನಿಂದ ನೋಡಲಾಗದಂತಹ ಸಿಡಿ ಇದೆ. ಅವರ ಮನೆಯಲ್ಲೇ ಅವರ ಮೊಮ್ಮಗ ಸಿ.ಡಿ ಮಾಡಿದ್ದಾರೆ. ಆ ಸಿ.ಡಿ ಯಾರೊಂದಿಗೆ ಇದೆ ಎಂಬುದು ಬಹುತೇರಿಗೆ ಗೊತ್ತೇ ಇದೆ. ನಾನು ಆ ಬಗ್ಗೆ ಏನೂ ಹೇಳಬೇಕಿಲ್ಲ. ಆ ಸಿ.ಡಿಯನ್ನೇ ಮೂವರು ನನ್ನ ಬಳಿ ತಗೆದುಕೊಂಡು ಬಂದಿದ್ದರು. ಅದರಲ್ಲಿ ಇಬ್ಬರು ಈಗ ಸಚಿವರಾಗಿದ್ದಾರೆ. ನನ್ನ ಬಳಿ ಆ ಸಿ.ಡಿ ಇದ್ದರೆ ನಾನೇ ಉಪ ಮುಖ್ಯಮಂತ್ರಿಯಾಗುತ್ತಿದ್ದೆ ಎಂದರು.

ಯಡಿಯೂರಪ್ಪ ಅವರ ಆ ಸಿ.ಡಿ ಇಟ್ಟುಕೊಂಡೇ ಕಾಂಗ್ರೆಸ್ಸಿಗರು ಅನುದಾನ ತೆಗೆದುಕೊಳ್ಳುತ್ತಿದ್ದಾರೆ. ಆ ಸಿ.ಡಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಳಿಯೇ ಇದೆ. ನಿಜವಾಗಿಯೂ ವಿರೋಧ ಪಕ್ಷ ಆಗಿದ್ದರೆ ಶಿವಕುಮಾರ್ ಸಿಡಿ ಬಿಡುಗಡೆ ಮಾಡಲಿ. ಡಿಕೆಶಿ ಮಾತನಾಡೋ ದಾಟಿಯಲ್ಲೇ ಅವರ ಬಳಿ ಸಿಡಿ ಇದೆ ಅನ್ನೋದು ಗೊತ್ತಾಗುತ್ತದೆ. ಸಿ.ಡಿ ಕುರಿತು ಸಿಬಿಐ ತನಿಖೆಯಾಗಲಿ. ಸಿದ್ದರಾಮಯ್ಯ, ಜಾರ್ಚ್, ಜಮೀರ್ ಅಹಮದ್, ಲಕ್ಷ್ಮಿ ಹೆಬ್ಬಾಳ್ಕರ ಕ್ಷೇತ್ರಕ್ಕೆ ಹೆಚ್ಚು ಅನುದಾನ ಹೋಗುವುದೇ ಸಿ.ಡಿ ಬ್ಲಾಕ್ ಮೇಲ್ ನಿಂದ ಎಂದು ಆರೋಪಿಸಿದರು.

ಇದನ್ನೂ ಓದಿ:  ಗವಿಗಂಗಾಧರೇಶ್ವರನನ್ನು ಸ್ಪರ್ಶಿಸದ ಸೂರ್ಯ ರಶ್ಮಿ; ಸಹಸ್ರಾರು ಭಕ್ತರಿಗೆ ನಿರಾಸೆ

ಅಮೀತ್ ಶಾಗೆ ದೂರು:

ಅಸಮಾಧಾನಗೊಂಡ ಶಾಸಕರು, ರಾಜ್ಯಕ್ಕೆ ಬರಲಿರುವ ಅಮೀತ್ ಶಾಗೆ ದೂರು ನೀಡುತ್ತೇವೆ. ಯಾರು ದೂರು ನೀಡುತ್ತಾರೋ, ಬಿಡುತ್ತಾರೆ ಗೊತ್ತಿಲ್ಲ. ದೂರು ನೀಡಿದರೆ ತಪ್ಪೇನು. ನಾವು ದೂರು ಕೊಡುತ್ತೇವೆ. ಎಲ್ಲ ಶಾಸಕರೂ ದೂರು ಕೊಡಲು ಸಿದ್ಧರಾಗಲಿ ಎಂದು ಹೇಳಿದರು.

ಎಲ್ಲ ಶಾಸಕರಿಗೆ ಅನ್ಯಾಯವಾಗುತ್ತಿದೆ. ಬಹಳ ನೋವಾಗಿದೆ. ನಮಗೆಲ್ಲ ಧೈರ್ಯ ಬಂದಿದೆ. ರಾಜಕೀಯ ಸ್ಥಾನಮಾನ ಸೇರಿ ನಮಗೆ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಪಕ್ಷದ ರಾಜ್ಯಾಧ್ಯಕ್ಷರಿಗೇ ಕಿಮ್ಮತ್ತಿಲ್ಲ. ಬೇಕಾಬಿಟ್ಟಿಯಾಗಿ ನಿಗಮ ಮಂಡಳಿ ಸ್ಥಾನ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಅಸಮಾಧಾನಗೊಂಡ ಶಾಸಕರ ವಿರುದ್ಧ ಗರಂ ಆಗಲು ರಮೇಶ ಜಾರಕಿಹೋಳಿ ಯಾರು ಎಂದು ಪ್ರಶ್ನಿಸಿದ ಯತ್ನಾಳ, ತಮ್ಮ ತ್ಯಾಗದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಅದನ್ನು ಸ್ವಾಗತಿಸುತ್ತೇನೆ. ಆದರೆ, ಯಾವ ಶಾಸಕರೂ ಮಾತನಾಡಬಾರದು ಎಂದು, ಬಾಯಿಗೆ ಕೀಲಿ ಹಾಕಲು ಸಾಧ್ಯವಿಲ್ಲ. ಪಕ್ಷವನ್ನು ಯಡಿಯೂರಪ್ಪ ಅವರೊಬ್ಬರೇ ಕಟ್ಟಿಲ್ಲ. ಹಲವರ ಪರಿಶ್ರಮದಿಂದ ಪಕ್ಷ ಕಟ್ಟಿದ್ದೇವೆ ಎಂದರು.

ಇದನ್ನೂ ಓದಿ:  ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ವಿಸ್ಮಯ ಕಣ್ತುಂಬಿಕೊಂಡ ಭಕ್ತರು

ಇಡೀ ಕುಟುಂಬ ರಾಜಕೀಯದಲ್ಲ :

ಹಣ ಕೊಟ್ಟು ಸಚಿವರಾಗಿರುವ ವಿಷಯ ನಾನೊಬ್ಬನೇ ಹೇಳುತ್ತಿಲ್ಲ. ಎಲ್ಲರೂ ಹೇಳುತ್ತಿದ್ದಾರೆ ಎಂದ ಅವರು, ಯಡಿಯೂರಪ್ಪ ಮೊಮ್ಮಗ, ಸಂಬಂಧಿಕರೆಲ್ಲರೂ ರಾಜಕೀಯದಲ್ಲಿದ್ದಾರೆ. ಅವರ ಮಗಳು ಎರಡು ಇಲಾಖೆ ನೋಡಿಕೊಳ್ಳುತ್ತಿದ್ದಾರೆ. ಮೊಮ್ಮಕ್ಕಳು ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ. ಪ್ರಧಾನಿ ಮೋದಿ ಅವರು ಆನುವಂಶಿಕ ರಾಜಕಾರಣ ವಿರೋಧಿಸಿದ್ದಾರೆ. ಅದಕ್ಕೆ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ಆನುವಂಶಿಕ ರಾಜಕಾರಣ ಮಾಡಿದವರ ರಾಜಕೀಯ ಅಂತ್ಯವಾಗಿದೆ ಎಂದರು.

ಸಿ.ಡಿ ನನ್ನ ಬಳಿ ಇಲ್ಲ:

ಯತ್ನಾಳ ಬಳಿ ಸಿ.ಡಿ ಇದೆ ಎಂದು ಎಚ್. ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಹೊಲಸು ಕೆಲಸ ನಾನು ಮಾಡೋದಿಲ್ಲ. ನಾನು ಮೌಲ್ಯಾಧಾರದ ಮೇಲೆ ರಾಜಕಾರಣ ಮಾಡುತ್ತೇನೆ. ನನ್ನ ಬಳಿ ಮೂವರು ಬಂದಿದ್ದರು. ಸಿ.ಡಿಯಲ್ಲಿ ಯಡಿಯೂರಪ್ಪ ಅವರ ಭ್ರಷ್ಟಾಚಾರ ಅಷ್ಟೇ ಇಲ್ಲ. ನೋಡಲಾರದಂತಹ ಸಿ.ಡಿ ಇವೆ. ಸಿಡಿ ಬಗ್ಗೆ ಸಿಬಿಐ ತನಿಖೆಯಾಗಲಿ. ನನ್ನ ಬಳಿ ಸಿ.ಡಿಯ ಬಗ್ಗೆ ಯಾರು ಮಾತನಾಡಿದರು ಎಂಬುದನ್ನು ತಿಳಿಸುತ್ತೇನೆ. ಈ ಕುರಿತ ತನಿಖೆ ರಾಜ್ಯದ ಪೊಲೀಸರಿಂದ ಸಾಧ್ಯವಿಲ್ಲ. ಯಡಿಯೂರಪ್ಪ ಪಾರದರ್ಶಕತೆ ಬಗ್ಗೆ ಮಾತನಾಡುತ್ತಾರೆ. ಸಿಡಿ ಬಗ್ಗೆ ತನಿಖೆಯಾಗಲಿ. ಅವರ ಮನೆಯಲ್ಲೇ ಸಿ.ಡಿ ಆಗಿವೆ. ಹೊರಗಿನವರು ಸಿ.ಡಿ ಮಾಡಿಲ್ಲ ಎಂದರು.

ಇದನ್ನೂ ಓದಿ: 70ರ ಅಜ್ಜಿಗೆ ಪೊಂಗಲ್‌ ಗಿಫ್ಟ್ ಕೊಡಿಸಿದ ಅವಳಿ ಸಹೋದರರು! ಬಾಲಕರ ಕಾರ್ಯಕ್ಕೆ ಶ್ಲಾಘನೆ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.