Uppinangady ಹಿಮ್ಮುಖವಾಗಿ ಚಲಿಸಿದ ಬಸ್: ವಾಹನಗಳಿಗೆ ಹಾನಿ
Team Udayavani, Mar 3, 2024, 12:14 AM IST
ಉಪ್ಪಿನಂಗಡಿ: ಖಾಸಗಿ ಬಸ್ಸೊಂದನ್ನು ಅಜಾಗರೂಕತೆಯಿಂದ ಚಾಲಕ ಹಿಮ್ಮಖವಾಗಿ ಚಲಿಸಿದ್ದರಿಂದ ಎರಡು ಅಂಗಡಿಗಳು ಜಖಂಗೊಂಡು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರು ಸೇರಿದಂತೆ ಹಲವು ದ್ವಿಚಕ್ರ ವಾಹನಗಳಿಗೆ ಹಾನಿಯಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಮಾ.2ರಂದು ಸಂಜೆ ನಡೆದಿದೆ.
ಚಾಲಕ ಬಸ್ ಅನ್ನು ಅಜಾಗರೂಕತೆಯಿಂದ ಹಿಮ್ಮುಖವಾಗಿ ಚಲಾಯಿಸಿದ್ದರಿಂದ ಅದು ವಾಹನಗಳ ಪಾರ್ಕಿಂಗ್ ಪ್ರದೇಶ ದಾಟಿ ವಾಣಿಜ್ಯ ಕಟ್ಟಡಕ್ಕೆ ನುಗ್ಗಿದ್ದರಿಂದ ಕೆಲವು ಅಂಗಡಿಗಳಿಗೆ . ಇದರಿಂದ ನಾಗರಾಜ್ ಭಟ್ ಎಂಬವರ ಸಿಹಿತಿಂಡಿ ಮತ್ತು ತಂಪು ಪಾನೀಯ ಮಾರಾಟದ ಅಂಗಡಿಗೆ ಹಾಗೂ ಅನಿಲ್ ಕುಮಾರ್ ಹಾನಿಯಾಗಿದೆ. ಕಬ್ಬು ಅರೆಯುವ ಯಂತ್ರ ಸೇರಿ ದಂತೆ ಅಂಗಡಿಯ ಕಪಾಟುಗಳಿಗೂ ಹಾನಿಯಾಗಿದೆ.
ವಾಹನಗಳಿಗೆ ಹಾನಿ
ಈ ಖಾಸಗಿ ಬಸ್ ವಾಹನಗಳ ಪಾರ್ಕಿಂಗ್ ಪ್ರದೇಶ ದಾಟಿ ಬಂದಿದ್ದರಿಂದ ಮೂರ್ನಾಲ್ಕು ದ್ವಿಚಕ್ರ ವಾಹನ ಹಾಗೂ ಕಾರಿಗೂ ಹಾನಿಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಈ ದುರ್ಘಟನೆಯ ಸಂದರ್ಭ ಅಲ್ಲಿ ಬೆರಳೆಣಿಕೆ ಜನರಷ್ಟೇ ಇದ್ದು, ಅವರು ಅಲ್ಲಿಂದ ಓಡಿ ಪಾರಾಗಿದ್ದಾರೆ. ಅದೃಷ್ಟವಶಾತ್ ಅಂಗಡಿಯವರು ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್