ರಾಯಚೂರು : ಉಪಚುನಾವಣೆ ಪ್ರಚಾರಕ್ಕೆ ಬಂದ ಬಿಜೆಪಿ ನಾಯಕರಿಗೆ ಗ್ರಾಮಸ್ಥರಿಂದ ಘೇರಾವ್
Team Udayavani, Apr 2, 2021, 7:04 PM IST
ಮಸ್ಕಿ (ರಾಯಚೂರು): ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ತೆರಳಿದ ಬಿಜೆಪಿ ನಾಯಕರಿಗೆ 5ಎ ಹೋರಾಟ ಸಮಿತಿ ನೇತೃತ್ವದಲ್ಲಿ ಅಮಿನಗಡ ಗ್ರಾಮಸ್ಥರು ಘೇರಾವ್ ಹಾಕಿದ ಪ್ರಸಂಗ ನಡೆದಿದೆ.
5ಎ ಕಾಲುವೆ ಜಾರಿ ಮಾಡಲು ಸಾಧ್ಯವಿಲ್ಲ ಎನ್ನುವ ನೀವು ನಮ್ಮ ಗ್ರಾಮಕ್ಕೆ ಬರಬೇಡಿ. ನಮ್ಮ ಬೇಡಿಕೆ ಈಡೇರಿಸುವವರನ್ನೇ ಆಯ್ಕೆ ಮಾಡುತ್ತೇವೆ ಎಂದು ನೇರವಾಗಿ ಹೇಳಿದ್ದಾರೆ. ಸಚಿವ ಬಿ.ಶ್ರೀರಾಮುಲು, ಸಂಸದ ಸಂಗಣ್ಣ ಕರಡಿ, ಮಾನ್ವಿ ಮಾಜಿ ಶಾಸಕ ಗಂಗಾಧರ ನಾಯಕ, ಶರಣಪ್ಪಗೌಡ ಜಾಡಲದಿನ್ನಿ, ಅಪ್ಪಾಜಿಗೌಡ ಕಾರ್ಲಕುಂಟೆ, ವಿಶ್ವನಾಥ ರೆಡ್ಡಿ ಅಮೀನಗಡ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ರನ್ನು ಸುತ್ತುವರಿದು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನೂ ವಟಗಲ್ ಗ್ರಾಮದ ರೈತರು ಕೂಡ ತರಾಟೆಗೆ ತೆಗೆದುಕೊಂಡಿದ್ದಾರೆ. 5ಎ ಕಾಲುವೆ ಜಾರಿ ಮಾಡಲು ಪ್ರಯತ್ನಿಸಿದ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದಿದ್ದಾರೆ. 12 ವರ್ಷದಿಂದ ನಮ್ಮನ್ನು ಪ್ರತಿನಿಧಿಸಿದವರು ನಮಗೆ ಉಪ್ಪು ನೀರು ಕುಡಿಸುತ್ತಿದ್ದಾರೆ. ನೀವು ಉಪ್ಪು ನೀರು ಕುಡಿಯುವಂತೆ ಸಚಿವ ಬಿ.ಶ್ರೀರಾಮುಲು ಅವರಿಗೆ ಗ್ಲಾಸ್ನಲ್ಲಿ ನೀರು ಕೊಟ್ಟಾಗ ಸಚಿವರು ಅವಕ್ಕಾಗಿದ್ದಾರೆ. ಇದರಿಂದ ಪ್ರಚಾರ ಕಾರ್ಯಕ್ಕೆ ತೊಡಕಾಗಿದೆ. ಇದೇ ಬೇಡಿಕೆ ಮುಂದಿಟ್ಟುಕೊಂಡು ಪಾಮನಕಲ್ಲೂರಿನ ಆದಿಬಸವೇಶ್ವರ ದೇವಸ್ಥಾನದ ಹತ್ತಿರ 135ನೇ ದಿನದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ :ಹೈವೋಲ್ಟೇಜ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ…!