ಸದನದಲ್ಲಿ ಸಿ.ಡಿ. ಪ್ರಕರಣ ಪ್ರಸ್ತಾಪಿಸಲು ಅವಕಾಶ ಕೋರಿದ ಕಾಂಗ್ರೆಸ್
Team Udayavani, Mar 18, 2021, 8:15 PM IST
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣ ಹಾಗೂ ಆರು ಸಚಿವರು ಹೈಕೋರ್ಟ್ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದೆ.
ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ತರುವಾಯ ಈ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಲೈಂಗಿಕ ಸಿ.ಡಿ. ಪ್ರಕರಣ ಹಾಗೂ ಇಂಥದ್ದೇ ಭೀತಿಯಿಂದ ಆರು ಮಂದಿ ಸಚಿವರು ಕೋರ್ಟಿಗೆ ಹೋಗಿ 67 ಮಾಧ್ಯಮಗಳು ಹಾಗೂ ಇತರರ ವಿರುದ್ಧ ನಿರ್ಬಂಧಕಾಜ್ಞೆಯನ್ನು ತಂದಿದ್ದು, ರಾಜ್ಯದ ಮರ್ಯಾದೆ ಹರಾಜಾಗುತ್ತಿದೆ. ಇದರ ಬಗ್ಗೆ ಎಫ್ಐಆರ್ ದಾಖಲಾಗುವ ಮೊದಲೇ ಎಸ್ಐಟಿ ರಚಿಸಿ ತನಿಖೆಗೆ ಆದೇಶಿಸಲಾಗಿದೆ.
ಅನಂತರ ಮಾಜಿ ಸಚಿವರು ವ್ಯಕ್ತಿಯೊಬ್ಬರ ಮೂಲಕ ಕಳುಹಿಸಿದ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಸಾಮಾಜಿಕ ಕಾರ್ಯಕರ್ತನೆಂಬ ಹೆಸರಿನಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರು ಹಾಗೂ ಸಂತ್ರಸ್ತೆಯೆಂದು ಹೇಳಿ ಗೃಹ ಸಚಿವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡಿಕೊಂಡ ಮನವಿಗಳನ್ನು ಆಧರಿಸಿ ಯಾವುದೇ ಎಫ್ಐಆರ್ ದಾಖಲಾಗಿಲ್ಲ.
ಇದನ್ನೂ ಓದಿ : ಸಿಂಧನೂರು ನಗರಸಭೆಯಲ್ಲಿ ಬಿಲ್ ಕಲೆಕ್ಟರ್ ಕೈ ಚಳಕ ಬಯಲು
ಸಂತ್ರಸ್ತೆಯ ಪೋಷಕರು ಸಹ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಮಹಿಳಾ ಆಯೋಗವು ಸಂತ್ರಸ್ತೆಗೆ ರಕ್ಷಣೆ ನೀಡಲು ಆದೇಶಿಸಿದ್ದರೂ ಸಂತ್ರಸ್ತೆಯನ್ನು ಹುಡುಕಿ ರಕ್ಷಣೆ ನೀಡಿದಂತೆ ಕಾಣುತ್ತಿಲ್ಲ. ಎಸ್ಐಟಿಯ ಇದುವರೆಗಿನ ತನಿಖೆಯನ್ನು ನೋಡಿದರೆ ಸಿ.ಡಿ.ಪ್ರಚಾರವಾಗಲು ಕಾರಣಕರ್ತರು ಯಾರು ಎಂಬುದನ್ನು ಹುಡುಕುವ ಕಡೆಗೆ ತನಿಖೆ ಸಾಗುತ್ತಿದೆ ಎಂಬ ಅನುಮಾನ ಬರುತ್ತಿದೆ. ಸರಕಾರದ ವರ್ತನೆ ಪಾರದರ್ಶಕವಾಗಿಲ್ಲ ಮತ್ತು ನ್ಯಾಯಸಮ್ಮತವಾಗಿಲ್ಲ. ಸರಕಾರದ ನಿಲುವುಗಳ ವಿರುದ್ಧ ಮಾ. 19ರಂದು ಸದನದಲ್ಲಿ ಪ್ರಸ್ತಾವಿಸಲು ನಿಯಮ 60ರ ಮೇರೆಗೆ ನಿಲುವಳಿ ಸೂಚನೆ ಕೊಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರತಿಯನ್ನು ಸ್ಪೀಕರ್, ಸದನದ ನಾಯಕರಾದ ಮುಖ್ಯಮಂತ್ರಿಯವರು ಹಾಗೂ ಸಂಬಂಧಪಟ್ಟ ಸಚಿವರಿಗೂ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ