ಚುನಾವಣಾ ಬಳಿಕ ಸಿಲಿಂಡರ್ ಗ್ಯಾಸ್ ಬೆಲೆ ಏರಿಕೆ ಟೀಕೆ; ತಿರುಗೇಟು ನೀಡಿದ ಸಿ.ಟಿ. ರವಿ
Team Udayavani, Mar 22, 2022, 2:33 PM IST
ಬೆಂಗಳೂರು: ಪಂಚರಾಜ್ಯ ಚುನಾವಣೆ ಬಳಿಕ ಇಂಧನ ಬೆಲೆ ಏರಿಕೆಯಾಗಿದೆ ಎಂದು ವಾದಿಸುವವರನ್ನು ಬಾವಿ ಒಳಗಿನ ಕಪ್ಪೆ ಎಂದು ಕರೆಯಬೇಕೋ ಅಥವಾ ಪೊಟರೆ ಒಳಗಿನ ಕಪ್ಪೆ ಎನ್ನಬೇಕೋ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು ಜಗತ್ತಿನಾದ್ಯಂತ ಏರಿಕೆಯಾಗುತ್ತಿದೆ. ಬರೀ ಈ ನಾಲ್ಕು ರಾಜ್ಯದ ಚುನಾವಣೆಯಿಂದ ದರ ಏರಿಕೆಯಾಗುತ್ತಿದೆ ಎನ್ನುವುದು ತಪ್ಪು ವ್ಯಾಖ್ಯಾನ. ಅವರನ್ನು ಶತ ಮೂರ್ಖರು ಎಂದು ಕರೆಯಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮದವರು ಯಾರು ಯಾರನ್ನು ಬದಲಾಯಿಸುತ್ತೀರಾ? ನಿಮ್ಮ ಹೇಳಿಕೆಗೆ ಉತ್ತರ ಕೊಡಲು ಆಗುತ್ತಾ? ಎಂದು ಉತ್ತರಿಸಿದರು.
ಇದನ್ನೂ ಓದಿ:ಏಪ್ರಿಲ್ ನಲ್ಲಿ ಸಂಪುಟ ಸರ್ಜರಿ; ದಲಿತ ಸಮುದಾಯದ ನಾಯಕರಿಗೆ ರಾಜ್ಯಾಧ್ಯಕ್ಷ ಪಟ್ಟ?
ಸಿ.ಟಿ.ರವಿ ಆಕಾಂಕ್ಷಿ ಎಂಬುದಕ್ಕೆ ನಗುತ್ತಾಲೇ ಉತ್ತರಿಸಿದ ಅವರು ನಮ್ಮಲ್ಲಿ ಆಸೆ, ಆಕಾಂಕ್ಷೆ ಏನು ನಡೆಯಲ್ಲ. ನಾನು ಕಾರ್ಯಕರ್ತ, ಕಾರ್ಯಕರ್ತನಾಗಿ ಕೆಲಸ ಮಾಡಬೇಕು. ಜವಾಬ್ದಾರಿ ಬದಲಾಗುತ್ತದೆ, ಕಾರ್ಯಕರ್ತನೆಂಬ ಭಾವನೆ ಬದಲಾಗದು. ಚೆನ್ನಾಗಿರುವ ಸಂಸಾರಕ್ಕೆ ಹುಳಿ ಹಿಂಡಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್