ಭಗವಧ್ವಜ ಹೃದಯದಲ್ಲಿರುತ್ತದೆ, ಅದು ನಮಗೆ ಪ್ರೇರಣೆ: ಸಿ.ಟಿ. ರವಿ
Team Udayavani, Feb 22, 2022, 1:04 PM IST
ಬೆಂಗಳೂರು: ರಾಷ್ಟ್ರಧ್ವಜ ನಮ್ಮ ತಿವರ್ಣ ಧ್ವಜ. ಸಂವಿಧಾನದ ಪ್ರಕಾರ ರಾಷ್ಟ್ರ ಧ್ವಜ ಅಂತಿಮ. ಭಗವಧ್ವಜ ನಮ್ಮ ಹೃದಯದಲ್ಲಿರುತ್ತದೆ. ಅದು ನಮಗೆ ಪ್ರೇರಣೆ, ಸೂರ್ತಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೋರಾಟ ಬೂಟಾಟಿಕೆ ಅಷ್ಟೇ. ರಾಷ್ಟ್ರಧ್ವಜ ಹಿಡಿದು ಹೋದವರಿಗೆ ಗುಂಡು ಹಾರಿಸಿದವರು ಈಗ ರಾಷ್ಟ್ರ ಧ್ವಜದ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಏನು ನೈತಿಕತೆಯಿದೆ ಎಂದು ಪ್ರಶ್ನಿಸಿದರು.
ಶಿವಮೊಗ್ಗ ಹತ್ಯೆ ಪ್ರಕರಣದಲ್ಲಿ ಮೇಲ್ನೋಟಕ್ಕೆ ಒಂದು ಕೋಮಿನವರು ಹತ್ಯೆ ಮಾಡಿರುವುದು ಕಂಡುಬಂದಿದೆ. ಬೆಂಗಳೂರಿನಿಂದ ಕರೆಸಿಕೊಂಡು ಪೂರ್ವ ಯೋಜಿತ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಿದ್ದರಾಮಯ್ಯ ಸರ್ಕಾರವಿದ್ದಾಗ ಸಾಲು ಸಾಲು ಹತ್ಯೆಗಳಾಗಿದ್ದವು. ರುದ್ರೇಶ್, ಪ್ರಶಾಂತ್ ಪೂಜಾರಿ ಸೇರಿದಂತೆ ಹಲವರ ಹತ್ಯೆಯಾಗಿತ್ತು. ಆ ರಕ್ತವನ್ನು ಮೈಗೆ ಅಂಟಿಸಿಕೊಂಡು ಸಿದ್ದರಾಮಯ್ಯ ಸುಮ್ಮನಿದ್ದರು. ನಾವು 24 ಗಂಟೆಗಳಲ್ಲಿ ಮೂರು ಜನರನ್ನು ಬಂಧಿಸಿದ್ದೇವೆ ಎಂದರು.
ಇದನ್ನೂ ಓದಿ:ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಕಾಂಗ್ರೆಸ್ ಮುಖಂಡರ ಆಗ್ರಹ.!
ಶಾಸಕ ಅಖಂಡ ಮನೆಯನ್ನು ಅವರ ಪಕ್ಷದವರೇ ಸುಟ್ಟು ಹಾಕಿದ್ದರು. ಆಗ ಯಾರ ಮೇಲೆ ಕ್ರಮ ತೆಗೆದುಕೊಂಡಿದ್ದರು? ಓರ್ವ ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದಿದ್ದ. ಇನ್ನೋರ್ವ ಪಾಕಿಸ್ತಾನದವರನ್ನು ಬಿಡುಗಡೆ ಮಾಡುತ್ತೇವೆ ಎಂದಿದ್ದ. ಹಿಜಾಬ್ ಪರವಾಗಿ ಹೇಳಿಕೆ ಕೊಡ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಸಿ.ಟಿ ರವಿ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ